Homeಮುಖಪುಟ‘ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ': ವಿಡಿಯೋ ಸಂದೇಶದಲ್ಲಿ ಮೋದಿ, ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ...

‘ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ’: ವಿಡಿಯೋ ಸಂದೇಶದಲ್ಲಿ ಮೋದಿ, ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗರು ದೇಶದಲ್ಲಿ ಸಂಕಷ್ಟದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ, ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಜ್ವಲ ಭವಿಷ್ಯಕ್ಕಾಗಿ ನಾಗರಿಕರು ಕಾಂಗ್ರೆಸ್ ಪಕ್ಷದ ಜೊತೆ ಕೈಜೋಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ಹಂಚಿಕೊಂಡ ಅಪರೂಪದ ವೀಡಿಯೊ ಸಂದೇಶದಲ್ಲಿ ಸೋನಿಯಾ ಗಾಂಧಿ, ರಾಷ್ಟ್ರದಲ್ಲಿನ ವ್ಯಾಪಕ ಸವಾಲುಗಳನ್ನು ಉಲ್ಲೇಖಿಸಿದ್ದಾರೆ. ಇಂದು ದೇಶದ ಮೂಲೆ ಮೂಲೆಯಲ್ಲಿ ಯುವಕರು ನಿರುದ್ಯೋಗವನ್ನು ಎದುರಿಸುತ್ತಿದ್ದಾರೆ, ಮಹಿಳೆಯರು ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ಭೀಕರ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಉದ್ದೇಶದಿಂದ ಈ ವಾತಾವರಣ ನಿರ್ಮಾಣವಾಗಿದೆ, ಅವರು ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ಎಲ್ಲರ ಪ್ರಗತಿ, ವಂಚಿತರಿಗೆ ನ್ಯಾಯಕ್ಕಾಗಿ ಮತ್ತು ದೇಶವನ್ನು ಬಲಪಡಿಸಲು ಯಾವಾಗಲೂ ಹೋರಾಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಬಡವರನ್ನು ಮೇಲಕ್ಕೆತ್ತಲು, ಯುವಕರ ಮತ್ತು ಮಹಿಳೆಯರ ಸಬಲೀಕರಣ, ರೈತರು ಮತ್ತು ಕಾರ್ಮಿಕರನ್ನು ಬೆಂಬಲಿಸಲು ಮತ್ತು ಅಂಚಿನಲ್ಲಿರುವ ಸಮುದಾಯಗಳನ್ನು ಬಲಪಡಿಸಲು ಪ್ರತಿಜ್ಞೆ ಮಾಡುವ ಪಕ್ಷದ ಪ್ರಣಾಳಿಕೆ ‘ನ್ಯಾಯ ಪತ್ರ’ವನ್ನು ಹೈಲೈಟ್ ಮಾಡುವಾಗ ಮತ್ತೊಮ್ಮೆ ತಮ್ಮ ಬೆಂಬಲವನ್ನು ನೀಡುವಂತೆ ಸೋನಿಯಾ ಗಾಂಧಿ ಮತದಾರರನ್ನು ಕೋರಿದ್ದಾರೆ.

ಇಂದು ನಾನು ಮತ್ತೊಮ್ಮೆ ನಿಮ್ಮ ಬೆಂಬಲವನ್ನು ಕೇಳುತ್ತಿದ್ದೇನೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಯು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಸಮರ್ಪಿತವಾಗಿದೆ. ಎಲ್ಲರಿಗೂ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ ಮತ್ತು ನಾವು ಒಟ್ಟಾಗಿ ಬಲಿಷ್ಠ ಮತ್ತು ಅಖಂಡ ಭಾರತವನ್ನು ನಿರ್ಮಿಸೋಣ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 93 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಈ ಮಧ್ಯೆ ಸೋನಿಯಾ ಗಾಂಧಿ ಮಹತ್ವದ ವಿಡಿಯೋ ಸಂದೇಶವನ್ನು ಕಳುಹಿಸಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆ ಸಂವಿಧಾನ ಮತ್ತು ಆದಿವಾಸಿಗಳು, ಬಡವರು ಮತ್ತು ಹಿಂದುಳಿದವರ ಹಕ್ಕುಗಳನ್ನು ಉಳಿಸುವುದಕ್ಕಾಗಿ ಎಂದು ಕಾಂಗ್ರೆಸ್ ಪಕ್ಷ ಪ್ರತಿಪಾದಿಸುತ್ತಾ ಬಂದಿದೆ.

ಈ ಮೊದಲು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಾ, ಅವರು ಆದಿವಾಸಿಗಳಿಗೆ ಸೇರಿದ ಜಲ, ಅರಣ್ಯ ಮತ್ತು ಜಮೀನುಗಳನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಲು ಬಯಸಿದ್ದಾರೆ. ನರೇಂದ್ರ ಮೋದಿ ಅವರು ಅದಾನಿ, ಅಂಬಾನಿಗಾಗಿ ಕೆಲಸ ಮಾಡುತ್ತಾರೆ. ತನ್ನ 10 ವರ್ಷಗಳ ಅಧಿಕಾರಾವಧಿಯಲ್ಲಿ 22 ಜನರನ್ನು ಬಿಲಿಯನರ್‌ಗಳನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ನೀಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ದ್ವೇಷ’ ಬಿತ್ತುವ ಮೂರನೇ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡ ಬಿಜೆಪಿ: ಮೌನವಹಿಸಿರುವ ಚು. ಆಯೋಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...