Homeರಾಷ್ಟ್ರೀಯಶಾರುಖ್, ಅಮಿತಾಬ್, ರಣವೀರ್ & ಅಜಯ್ ದೇವಗನ್‌ ವಿರುದ್ಧ ಬಿಹಾರ ಕೋರ್ಟ್‌ಗೆ ದೂರು!

ಶಾರುಖ್, ಅಮಿತಾಬ್, ರಣವೀರ್ & ಅಜಯ್ ದೇವಗನ್‌ ವಿರುದ್ಧ ಬಿಹಾರ ಕೋರ್ಟ್‌ಗೆ ದೂರು!

- Advertisement -
- Advertisement -

ಹಿಂದಿ ನಟರಾದ ಅಮಿತಾಬ್ ಬಚ್ಚನ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರ ವಿರುದ್ದ “ಗುಟ್ಕಾ ಮತ್ತು ತಂಬಾಕು ಸೇವನೆಯನ್ನು ಉತ್ತೇಜಿಸುತ್ತಿದ್ದಾರೆ” ಎಂದು ಆರೋಪಿಸಿ ಬಿಹಾರದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಅಜಯ್ ದೇವಗನ್ ಕೆಲವು ವರ್ಷಗಳಿಂದ ತಂಬಾಕು ಬ್ರಾಂಡ್ ವಿಮಲ್‌ನ ರಾಯಭಾರಿಯಾಗಿದ್ದಾರೆ. ಈ ಬ್ರಾಂಡ್‌ಗೆ ಕಳೆದ ವರ್ಷ ಶಾರುಖ್ ಖಾನ್ ಕೂಡ ಬಂದಿದ್ದರು. ಅಮಿತಾಭ್ ಬಚ್ಚನ್ ಅವರು ಕಮಲ ಪಸಂದ್‌ ತಂಬಾಕು ಉತ್ಪನ್ನದ ಬ್ರಾಂಡ್‌‌ ಅಂಬಾಸಿಡರ್ ಆಗಿ ಸಹಿ ಹಾಕಿದ್ದರು, ಆದರೆ ನಂತರ ಅವರು ಒಪ್ಪಂದವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಮಾಜಿಕ ಕಾರ್ಯಕರ್ತೆ ತಮನ್ನಾ ಹಶ್ಮಿ ಅವರು ಮುಜಾಫರ್‌ಪುರದ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದು, ಈ ನಟರನ್ನು ಒಳಗೊಂಡ ಜಾಹೀರಾತುಗಳು, ಜಾಹೀರಾತು ಮಾಡಲಾದ ವಸ್ತುಗಳನ್ನು ಸೇವಿಸಲು ಜನರನ್ನು ಉತ್ತೇಜಿಸುತ್ತವೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆಯೆಂಬ ಹೊಸ ತಂಬಾಕು: ದಿನಕ್ಕೆ 25 ಗ್ರಾಂ ಗಿಂತ ಹೆಚ್ಚು ಸಕ್ಕರೆ ಬಳಸಿದರೆ ಅನಾರೋಗ್ಯಕ್ಕೆ ಆಹ್ವಾನ ಕೊಟ್ಟಂತೆ

ಗುಟ್ಕಾ ಮತ್ತು ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳಲು ಒಪ್ಪಿಕೊಳ್ಳುವ ಮೂಲಕ ‘ತಮ್ಮ ಸೆಲೆಬ್ರಿಟಿ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ’ವರಲ್ಲಿ ನಟ ರಣವೀರ್ ಸಿಂಗ್ ಅವರನ್ನು ಸಹ ತಮನ್ನಾ ಹೆಸರಿಸಿದ್ದಾರೆ.

ನಟರ ವಿರುದ್ಧ ಐಪಿಸಿ ಸೆಕ್ಷನ್ 311 (ದರೋಡೆಕೋರನಿಗೆ ಶಿಕ್ಷೆ), 420 (ವಂಚನೆ) ಮತ್ತು 467 ಮತ್ತು 468 (ನಕಲಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ ಅರ್ಜಿಯು ನ್ಯಾಯಾಲಯದಲ್ಲಿ ಕೋರಿದೆ. ಅರ್ಜಿಯನ್ನು ಮುಂದಿನ ದಿನಗಳಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಕಳೆದ ತಿಂಗಳು, ವಿಮಲ್ ಪಾನ್‌ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡ ನಟ ಅಕ್ಷಯ್ ಕುಮಾರ್ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದ ನಂತರ ಕಂಪನಿಯಿಂದ ತನ್ನ ಸಂಬಂಧವನ್ನು ಕಡಿತಗೊಳಿಸಿದ್ದರು. ವಿಮಲ್ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟರಾದ ಅಜಯ್ ದೇವಗನ್ ಮತ್ತು ಶಾರುಖ್ ಖಾನ್ ಕೂಡ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭೂಖಂಡಗಳನ್ನು ಭೇದಿಸಿದ ಕಾಲುವೆ; ಅಸಮಾನ ಆರ್ಥಿಕತೆ ಮತ್ತು ಲಾಭಕೋರತನದಿಂದಾಗಿ ಸ್ಥಗಿತ

ಅಕ್ಟೋಬರ್ 2021 ರಲ್ಲಿ, ಅಮಿತಾಬ್ ಬಚ್ಚನ್ ಅವರು ತಂಬಾಕು ಬ್ರ್ಯಾಂಡ್‌ ಕಮಲಾ ಪಸಂದ್ ಅವರೊಂದಿಗಿನ ಒಪ್ಪಂದವನ್ನು ಕೊನೆಗೊಳಿಸಿದ್ದರು. ಬ್ರಾಂಡ್‌ ಬಗ್ಗೆಗಿನ ಕೆಲವು ವಿವರಗಳು ಅಮಿತಾಬ್ ಅವರಿಗೆ ತಿಳಿದಿರಲಿಲ್ಲ ಎಂದು ಅವರ ಕಚೇರಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಅಮಿತಾಬ್‌ ಅವರು ಬ್ರ್ಯಾಂಡ್‌ನೊಂದಿಗಿನ ಒಪ್ಪಂದವನ್ನು ಕೊನೆಗೊಳಿಸಿದ್ದು, ಅದರ ಬಗ್ಗೆ ಕಂಪೆನಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಪ್ರಚಾರಕ್ಕಾಗಿ ಸ್ವೀಕರಿಸಿದ ಹಣವನ್ನು ಹಿಂದಿರುಗಿಸಿದ್ದಾರೆ ಎಂದು ಅವರ ಕಚೇರಿ ಬಿಡುಗಡೆ ಮಾಡಲಾಗಿರುವ ಹೇಳಿಕೆ ತಿಳಿಸಿದೆ. ಒಪ್ಪಂದ ಕೊನೆಗೊಳಿಸಿದ ನಂತರ ಕೂಡಾ ಅವರನ್ನು ಒಳಗೊಂಡ ಜಾಹಿರಾತುಗಳ ಪ್ರಸಾರ ಮಾಡುವುದನ್ನು ಮುಂದುವರೆಸಿದ ಕಂಪನಿಗೆ ಕಾನೂನು ನೋಟಿಸ್ ಕೂಡಾ ಕಳುಹಿಸಿದ್ದರು ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಖಾಸಗೀಕರಣವನ್ನು ಉತ್ತೇಜಿಸುವ ಸರ್ಕಾರಿ ಶಾಲೆಗಳ ಬಗೆಗೆ ಕಾಳಜಿ ಇಲ್ಲದೆ ಬೈಜೂಸ್ ಮತ್ತಿತರ ಟ್ಯೂಷನ್ ಕೋಚಿಂಗ್ ವಿಷಯಗಳ ಬಗ್ಗೆ ಮಾತನಾಡುವವರ ಮೇಲೆಯೂ ಕೇಸು ದಾಖಲಿಸಬೇಕು

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...