Homeಮುಖಪುಟಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

ಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

- Advertisement -
- Advertisement -

ನಮ್ಮ ‘ಯುದ್ಧದಾಹಿ’ ಚಾನೆಲ್‍ಗಳು ಇನ್ನೂ ಬಾಲಾಕೋಟ್ ಮಂಪರಿನಿಂದ ಹೊರಬಂದಿಲ್ಲ, ಮುಂದಿನ ಚುನಾವಣೆವರೆಗೂ ಅವು ಆಗಾಗ ಬಾಲಾಕೋಟ್ ದಾಳಿಯ ವಿಸ್ಮೃತಿಗೆ ಒಳಗಾಗುತ್ತಲೇ ವೀಕ್ಷಕರನ್ನು ವಂಚಿಸಲಿವೆ. ಎರಡು-ಮೂರು ದಿನಗಳಿಂದ ಬಹುಪಾಲು ಇಂಗ್ಲಿಷ್, ಹಿಂದಿ ನ್ಯೂಸ್ ಚಾನೆಲ್‍ಗಳು ಮತ್ತು ಅವುಗಳ ಪ್ರಾದೇಶಿಕ ಆವೃತ್ತಿಗಳು ವೀಕ್ಷಕರನ್ನು ಪೆದ್ದು ಮಾಡಲು ಹೋಗಿ ತಾವೇ ಮೂರ್ಖರಾದ ಪ್ರಸಂಗ ನಡೆದುದೆ.

ಮಿಥ್ಯ: ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫುಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.

‘ಐಎಎಫ್‍ನಿಂದ ಬಾಲಾಕೋಟ್ ದಾಳಿಯ ಪ್ರೂಫ್’ ಎಂದು ತೋರಿಸಿದ ರಿಪಬ್ಲಿಕ್ ಟಿವಿಯು ತನ್ನ ಡಿಫೆನ್ಸ್‌ ಸಲಹೆಗಾರ ಮೇಜರ್ ಗೌರವ್ ಆರ್ಯ ಅವರಿಂದ ‘ಪ್ರಮೋಷನಲ್’ ಮಾತು ಹೇಳಿಸಿತು. ‘ಸೇನೆಯು ಇಂತಹ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಬೇಕು. ಸಾಮಾಜಿಕ ಜಾಲತಾಣ ಕ್ರಿಯಾಶೀಲವಾಗಿರುವ ಈ ಕಾಲದಲ್ಲಿ ಇಂತಹ ವಿಡಿಯೋಗಳ ಮೂಲಕ ಜನರಲ್ಲಿ ದೇಶದ ಕುರಿತು ಹೆಮ್ಮೆ ಹುಟ್ಟಿಸಬಹುದು,,, ನಾನು ಈ ವಿಡಿಯೋ ನೋಡಿಲ್ಲ, ಆದರೆ ಅದರ ಕಂಟೆಂಟ್ ಗೊತ್ತು’ ಅಂದರು! ಆರಂಭದಲ್ಲಿಯೇ ಇದು ಪ್ರಮೋಷನಲ್ ವಿಡಿಯೋ ಎಂದು ಫ್ಲಾಷ್ ಮಾಡಿದ ಚಾನೆಲ್ ನಂತರ ಇದು ರಿಯಲ್ ಅಟ್ಯಾಕ್ ಎಂಬಂತೆ ವಿವರಣೆ ನೀಡುತ್ತ ಹೋಗುತ್ತದೆ!. ಝೀ ನ್ಯೂಸ್ ಅಂತೂ ಬಾಲಾಕೋಟ್ ದಾಳಿ ಯಶಸ್ವಿಯಾಗಿಲ್ಲ ಎನ್ನುವವರಿಗೆ ಇಲ್ಲಿದೆ ತಕ್ಕ ಉತ್ತರ ಅಂದಿತು.

ಸತ್ಯ: ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ ( ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

ಮೋದಿಗೆ, ಬಿಜೆಪಿಗೆ ಲಾಭ ಆಗುವುದಾದರೆ ಎಲ್ಲವನ್ನೂ ಬಿಟ್ಟು ಬೆತ್ತಲಾಗುವ ಮಾಧ್ಯಮಗಳ ಈ ವರ್ತನೆಯೇನು ಹೊಸದಲ್ಲ. ಆದರೆ, ಬಾಲಾಕೋಟ್ ದಾಳಿ ಯಶಸ್ವಿಯಾಯಿತೇ ಎಂಬ ಬಗ್ಗೆ ಸೇನೆಯೇ ಇನ್ನೂ ಉತ್ತರಿಸಿಲ್ಲ. ಆದರೆ ಮೋದಿ ಮೀಡಿಯಾಗಳ ಪಾಲಿಗೆ ಬಾಲಾಕೋಟ್ ವಿಷಯ ಪ್ರಚಾರದ ವಸ್ತು ಅಷ್ಟೇ

WION ಟಿವಿಯ ಸಿದಾಂತ್ ಸಿಬಲ್ ಟ್ವೀಟ್ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಎಲ್ಲೂ ಇದು ರಿಯಲ್ ಫುಟೇಜ್ ಎಂದು ಹೇಳಿಲ್ಲ. ವಾಯುಸೇನಾ ಮುಖ್ಯಸ್ಥರೇ ದಾಳಿಯ ರಿಯಲ್ ಫುಟೇಜ್ ಇಲ್ಲ, ಇದು ಪ್ರಮೋಷನಲ್ ವಿಡಿಯೋ ಮಾತ್ರ ಎಂದು ಹೇಳಿದ್ದರು’ ಎಂದು ವಿವರಿಸಿದರು. ಬಿಬಿಸಿಯ ಜುಗಲ್ ಪುರೋಹಿತ್ ಕೂಡ ಇಂಥದ್ದೇ ಟ್ವೀಟ್ ಮಾಡಿದರು. ಕೊನೆಗೆ ಎಎನ್‍ಐ ಕೂಡ ತಪ್ಪು ತಿದ್ದಿಕೊಂಡು ಇದು ಪ್ರಮೋಷನಲ್ ವಿಡಿಯೋ ಅಂದಿತು…..

ಒಟ್ಟಿನಲ್ಲಿ ಸತ್ಯ ಮುಚ್ಚಿಟ್ಟು ಟಿಆರ್‍ಪಿ ಹೆಚ್ಚಿಸಿಕೊಂಡ ಮಾಧ್ಯಮಗಳಿಗೆ, ಅದಕ್ಕಿಂತ ಹೆಚ್ಚಾಗಿ ಮೋದಿ ಭಜನೆ ಮಾಡಿದ ತೃಪ್ತಿ ಇರಬಹುದೇನೋ?

ಇವತ್ತಿಗೂ ಬಾಲಾಕೋಟ್ ದಾಳಿ ಯಶಸ್ವಿಯಾಗಿದೆಯೋ ಇಲ್ಲವೋ ಎಂಬ ಬಗ್ಗೆ ಸೇನೆಯೇ ಸರಿಯಾದ ಉತ್ತರ ನೀಡಿಲ್ಲ! ಅಂಥದ್ದರಲ್ಲಿ ಅದು ಪ್ರಮೋಷನಲ್ ವಿಡಿಯೋ ಬಿಡುಗಡೆ ಮಾಡುವ ಅಗತ್ಯವಿತ್ತೇ? ಅಥವಾ ಆ ವಿಡಿಯೋವನ್ನು ರಿಯಲ್ ಎಂದು ಮೋದಿ-ಮೀಡಿಯಾ ತೋರಿಸಲಿ ಎಂದು ಅದು ಕೂಡ ಆಶಿಸಿತ್ತೇ ಎಂಬ ಪ್ರಶ್ನೆ ಏಳುವುದು ಸಹಜ ಅಲ್ಲವೇ?
(ಆಧಾರ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...