Homeಮುಖಪುಟಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

ಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

- Advertisement -
- Advertisement -

ನಮ್ಮ ‘ಯುದ್ಧದಾಹಿ’ ಚಾನೆಲ್‍ಗಳು ಇನ್ನೂ ಬಾಲಾಕೋಟ್ ಮಂಪರಿನಿಂದ ಹೊರಬಂದಿಲ್ಲ, ಮುಂದಿನ ಚುನಾವಣೆವರೆಗೂ ಅವು ಆಗಾಗ ಬಾಲಾಕೋಟ್ ದಾಳಿಯ ವಿಸ್ಮೃತಿಗೆ ಒಳಗಾಗುತ್ತಲೇ ವೀಕ್ಷಕರನ್ನು ವಂಚಿಸಲಿವೆ. ಎರಡು-ಮೂರು ದಿನಗಳಿಂದ ಬಹುಪಾಲು ಇಂಗ್ಲಿಷ್, ಹಿಂದಿ ನ್ಯೂಸ್ ಚಾನೆಲ್‍ಗಳು ಮತ್ತು ಅವುಗಳ ಪ್ರಾದೇಶಿಕ ಆವೃತ್ತಿಗಳು ವೀಕ್ಷಕರನ್ನು ಪೆದ್ದು ಮಾಡಲು ಹೋಗಿ ತಾವೇ ಮೂರ್ಖರಾದ ಪ್ರಸಂಗ ನಡೆದುದೆ.

ಮಿಥ್ಯ: ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫುಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.

‘ಐಎಎಫ್‍ನಿಂದ ಬಾಲಾಕೋಟ್ ದಾಳಿಯ ಪ್ರೂಫ್’ ಎಂದು ತೋರಿಸಿದ ರಿಪಬ್ಲಿಕ್ ಟಿವಿಯು ತನ್ನ ಡಿಫೆನ್ಸ್‌ ಸಲಹೆಗಾರ ಮೇಜರ್ ಗೌರವ್ ಆರ್ಯ ಅವರಿಂದ ‘ಪ್ರಮೋಷನಲ್’ ಮಾತು ಹೇಳಿಸಿತು. ‘ಸೇನೆಯು ಇಂತಹ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಬೇಕು. ಸಾಮಾಜಿಕ ಜಾಲತಾಣ ಕ್ರಿಯಾಶೀಲವಾಗಿರುವ ಈ ಕಾಲದಲ್ಲಿ ಇಂತಹ ವಿಡಿಯೋಗಳ ಮೂಲಕ ಜನರಲ್ಲಿ ದೇಶದ ಕುರಿತು ಹೆಮ್ಮೆ ಹುಟ್ಟಿಸಬಹುದು,,, ನಾನು ಈ ವಿಡಿಯೋ ನೋಡಿಲ್ಲ, ಆದರೆ ಅದರ ಕಂಟೆಂಟ್ ಗೊತ್ತು’ ಅಂದರು! ಆರಂಭದಲ್ಲಿಯೇ ಇದು ಪ್ರಮೋಷನಲ್ ವಿಡಿಯೋ ಎಂದು ಫ್ಲಾಷ್ ಮಾಡಿದ ಚಾನೆಲ್ ನಂತರ ಇದು ರಿಯಲ್ ಅಟ್ಯಾಕ್ ಎಂಬಂತೆ ವಿವರಣೆ ನೀಡುತ್ತ ಹೋಗುತ್ತದೆ!. ಝೀ ನ್ಯೂಸ್ ಅಂತೂ ಬಾಲಾಕೋಟ್ ದಾಳಿ ಯಶಸ್ವಿಯಾಗಿಲ್ಲ ಎನ್ನುವವರಿಗೆ ಇಲ್ಲಿದೆ ತಕ್ಕ ಉತ್ತರ ಅಂದಿತು.

ಸತ್ಯ: ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ ( ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

ಮೋದಿಗೆ, ಬಿಜೆಪಿಗೆ ಲಾಭ ಆಗುವುದಾದರೆ ಎಲ್ಲವನ್ನೂ ಬಿಟ್ಟು ಬೆತ್ತಲಾಗುವ ಮಾಧ್ಯಮಗಳ ಈ ವರ್ತನೆಯೇನು ಹೊಸದಲ್ಲ. ಆದರೆ, ಬಾಲಾಕೋಟ್ ದಾಳಿ ಯಶಸ್ವಿಯಾಯಿತೇ ಎಂಬ ಬಗ್ಗೆ ಸೇನೆಯೇ ಇನ್ನೂ ಉತ್ತರಿಸಿಲ್ಲ. ಆದರೆ ಮೋದಿ ಮೀಡಿಯಾಗಳ ಪಾಲಿಗೆ ಬಾಲಾಕೋಟ್ ವಿಷಯ ಪ್ರಚಾರದ ವಸ್ತು ಅಷ್ಟೇ

WION ಟಿವಿಯ ಸಿದಾಂತ್ ಸಿಬಲ್ ಟ್ವೀಟ್ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಎಲ್ಲೂ ಇದು ರಿಯಲ್ ಫುಟೇಜ್ ಎಂದು ಹೇಳಿಲ್ಲ. ವಾಯುಸೇನಾ ಮುಖ್ಯಸ್ಥರೇ ದಾಳಿಯ ರಿಯಲ್ ಫುಟೇಜ್ ಇಲ್ಲ, ಇದು ಪ್ರಮೋಷನಲ್ ವಿಡಿಯೋ ಮಾತ್ರ ಎಂದು ಹೇಳಿದ್ದರು’ ಎಂದು ವಿವರಿಸಿದರು. ಬಿಬಿಸಿಯ ಜುಗಲ್ ಪುರೋಹಿತ್ ಕೂಡ ಇಂಥದ್ದೇ ಟ್ವೀಟ್ ಮಾಡಿದರು. ಕೊನೆಗೆ ಎಎನ್‍ಐ ಕೂಡ ತಪ್ಪು ತಿದ್ದಿಕೊಂಡು ಇದು ಪ್ರಮೋಷನಲ್ ವಿಡಿಯೋ ಅಂದಿತು…..

ಒಟ್ಟಿನಲ್ಲಿ ಸತ್ಯ ಮುಚ್ಚಿಟ್ಟು ಟಿಆರ್‍ಪಿ ಹೆಚ್ಚಿಸಿಕೊಂಡ ಮಾಧ್ಯಮಗಳಿಗೆ, ಅದಕ್ಕಿಂತ ಹೆಚ್ಚಾಗಿ ಮೋದಿ ಭಜನೆ ಮಾಡಿದ ತೃಪ್ತಿ ಇರಬಹುದೇನೋ?

ಇವತ್ತಿಗೂ ಬಾಲಾಕೋಟ್ ದಾಳಿ ಯಶಸ್ವಿಯಾಗಿದೆಯೋ ಇಲ್ಲವೋ ಎಂಬ ಬಗ್ಗೆ ಸೇನೆಯೇ ಸರಿಯಾದ ಉತ್ತರ ನೀಡಿಲ್ಲ! ಅಂಥದ್ದರಲ್ಲಿ ಅದು ಪ್ರಮೋಷನಲ್ ವಿಡಿಯೋ ಬಿಡುಗಡೆ ಮಾಡುವ ಅಗತ್ಯವಿತ್ತೇ? ಅಥವಾ ಆ ವಿಡಿಯೋವನ್ನು ರಿಯಲ್ ಎಂದು ಮೋದಿ-ಮೀಡಿಯಾ ತೋರಿಸಲಿ ಎಂದು ಅದು ಕೂಡ ಆಶಿಸಿತ್ತೇ ಎಂಬ ಪ್ರಶ್ನೆ ಏಳುವುದು ಸಹಜ ಅಲ್ಲವೇ?
(ಆಧಾರ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...