Homeಮುಖಪುಟಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

ಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

- Advertisement -
- Advertisement -

ನಮ್ಮ ‘ಯುದ್ಧದಾಹಿ’ ಚಾನೆಲ್‍ಗಳು ಇನ್ನೂ ಬಾಲಾಕೋಟ್ ಮಂಪರಿನಿಂದ ಹೊರಬಂದಿಲ್ಲ, ಮುಂದಿನ ಚುನಾವಣೆವರೆಗೂ ಅವು ಆಗಾಗ ಬಾಲಾಕೋಟ್ ದಾಳಿಯ ವಿಸ್ಮೃತಿಗೆ ಒಳಗಾಗುತ್ತಲೇ ವೀಕ್ಷಕರನ್ನು ವಂಚಿಸಲಿವೆ. ಎರಡು-ಮೂರು ದಿನಗಳಿಂದ ಬಹುಪಾಲು ಇಂಗ್ಲಿಷ್, ಹಿಂದಿ ನ್ಯೂಸ್ ಚಾನೆಲ್‍ಗಳು ಮತ್ತು ಅವುಗಳ ಪ್ರಾದೇಶಿಕ ಆವೃತ್ತಿಗಳು ವೀಕ್ಷಕರನ್ನು ಪೆದ್ದು ಮಾಡಲು ಹೋಗಿ ತಾವೇ ಮೂರ್ಖರಾದ ಪ್ರಸಂಗ ನಡೆದುದೆ.

ಮಿಥ್ಯ: ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫುಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.

‘ಐಎಎಫ್‍ನಿಂದ ಬಾಲಾಕೋಟ್ ದಾಳಿಯ ಪ್ರೂಫ್’ ಎಂದು ತೋರಿಸಿದ ರಿಪಬ್ಲಿಕ್ ಟಿವಿಯು ತನ್ನ ಡಿಫೆನ್ಸ್‌ ಸಲಹೆಗಾರ ಮೇಜರ್ ಗೌರವ್ ಆರ್ಯ ಅವರಿಂದ ‘ಪ್ರಮೋಷನಲ್’ ಮಾತು ಹೇಳಿಸಿತು. ‘ಸೇನೆಯು ಇಂತಹ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಬೇಕು. ಸಾಮಾಜಿಕ ಜಾಲತಾಣ ಕ್ರಿಯಾಶೀಲವಾಗಿರುವ ಈ ಕಾಲದಲ್ಲಿ ಇಂತಹ ವಿಡಿಯೋಗಳ ಮೂಲಕ ಜನರಲ್ಲಿ ದೇಶದ ಕುರಿತು ಹೆಮ್ಮೆ ಹುಟ್ಟಿಸಬಹುದು,,, ನಾನು ಈ ವಿಡಿಯೋ ನೋಡಿಲ್ಲ, ಆದರೆ ಅದರ ಕಂಟೆಂಟ್ ಗೊತ್ತು’ ಅಂದರು! ಆರಂಭದಲ್ಲಿಯೇ ಇದು ಪ್ರಮೋಷನಲ್ ವಿಡಿಯೋ ಎಂದು ಫ್ಲಾಷ್ ಮಾಡಿದ ಚಾನೆಲ್ ನಂತರ ಇದು ರಿಯಲ್ ಅಟ್ಯಾಕ್ ಎಂಬಂತೆ ವಿವರಣೆ ನೀಡುತ್ತ ಹೋಗುತ್ತದೆ!. ಝೀ ನ್ಯೂಸ್ ಅಂತೂ ಬಾಲಾಕೋಟ್ ದಾಳಿ ಯಶಸ್ವಿಯಾಗಿಲ್ಲ ಎನ್ನುವವರಿಗೆ ಇಲ್ಲಿದೆ ತಕ್ಕ ಉತ್ತರ ಅಂದಿತು.

ಸತ್ಯ: ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ ( ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

ಮೋದಿಗೆ, ಬಿಜೆಪಿಗೆ ಲಾಭ ಆಗುವುದಾದರೆ ಎಲ್ಲವನ್ನೂ ಬಿಟ್ಟು ಬೆತ್ತಲಾಗುವ ಮಾಧ್ಯಮಗಳ ಈ ವರ್ತನೆಯೇನು ಹೊಸದಲ್ಲ. ಆದರೆ, ಬಾಲಾಕೋಟ್ ದಾಳಿ ಯಶಸ್ವಿಯಾಯಿತೇ ಎಂಬ ಬಗ್ಗೆ ಸೇನೆಯೇ ಇನ್ನೂ ಉತ್ತರಿಸಿಲ್ಲ. ಆದರೆ ಮೋದಿ ಮೀಡಿಯಾಗಳ ಪಾಲಿಗೆ ಬಾಲಾಕೋಟ್ ವಿಷಯ ಪ್ರಚಾರದ ವಸ್ತು ಅಷ್ಟೇ

WION ಟಿವಿಯ ಸಿದಾಂತ್ ಸಿಬಲ್ ಟ್ವೀಟ್ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಎಲ್ಲೂ ಇದು ರಿಯಲ್ ಫುಟೇಜ್ ಎಂದು ಹೇಳಿಲ್ಲ. ವಾಯುಸೇನಾ ಮುಖ್ಯಸ್ಥರೇ ದಾಳಿಯ ರಿಯಲ್ ಫುಟೇಜ್ ಇಲ್ಲ, ಇದು ಪ್ರಮೋಷನಲ್ ವಿಡಿಯೋ ಮಾತ್ರ ಎಂದು ಹೇಳಿದ್ದರು’ ಎಂದು ವಿವರಿಸಿದರು. ಬಿಬಿಸಿಯ ಜುಗಲ್ ಪುರೋಹಿತ್ ಕೂಡ ಇಂಥದ್ದೇ ಟ್ವೀಟ್ ಮಾಡಿದರು. ಕೊನೆಗೆ ಎಎನ್‍ಐ ಕೂಡ ತಪ್ಪು ತಿದ್ದಿಕೊಂಡು ಇದು ಪ್ರಮೋಷನಲ್ ವಿಡಿಯೋ ಅಂದಿತು…..

ಒಟ್ಟಿನಲ್ಲಿ ಸತ್ಯ ಮುಚ್ಚಿಟ್ಟು ಟಿಆರ್‍ಪಿ ಹೆಚ್ಚಿಸಿಕೊಂಡ ಮಾಧ್ಯಮಗಳಿಗೆ, ಅದಕ್ಕಿಂತ ಹೆಚ್ಚಾಗಿ ಮೋದಿ ಭಜನೆ ಮಾಡಿದ ತೃಪ್ತಿ ಇರಬಹುದೇನೋ?

ಇವತ್ತಿಗೂ ಬಾಲಾಕೋಟ್ ದಾಳಿ ಯಶಸ್ವಿಯಾಗಿದೆಯೋ ಇಲ್ಲವೋ ಎಂಬ ಬಗ್ಗೆ ಸೇನೆಯೇ ಸರಿಯಾದ ಉತ್ತರ ನೀಡಿಲ್ಲ! ಅಂಥದ್ದರಲ್ಲಿ ಅದು ಪ್ರಮೋಷನಲ್ ವಿಡಿಯೋ ಬಿಡುಗಡೆ ಮಾಡುವ ಅಗತ್ಯವಿತ್ತೇ? ಅಥವಾ ಆ ವಿಡಿಯೋವನ್ನು ರಿಯಲ್ ಎಂದು ಮೋದಿ-ಮೀಡಿಯಾ ತೋರಿಸಲಿ ಎಂದು ಅದು ಕೂಡ ಆಶಿಸಿತ್ತೇ ಎಂಬ ಪ್ರಶ್ನೆ ಏಳುವುದು ಸಹಜ ಅಲ್ಲವೇ?
(ಆಧಾರ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...