Homeಮುಖಪುಟಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

ಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

- Advertisement -
- Advertisement -

ನಮ್ಮ ‘ಯುದ್ಧದಾಹಿ’ ಚಾನೆಲ್‍ಗಳು ಇನ್ನೂ ಬಾಲಾಕೋಟ್ ಮಂಪರಿನಿಂದ ಹೊರಬಂದಿಲ್ಲ, ಮುಂದಿನ ಚುನಾವಣೆವರೆಗೂ ಅವು ಆಗಾಗ ಬಾಲಾಕೋಟ್ ದಾಳಿಯ ವಿಸ್ಮೃತಿಗೆ ಒಳಗಾಗುತ್ತಲೇ ವೀಕ್ಷಕರನ್ನು ವಂಚಿಸಲಿವೆ. ಎರಡು-ಮೂರು ದಿನಗಳಿಂದ ಬಹುಪಾಲು ಇಂಗ್ಲಿಷ್, ಹಿಂದಿ ನ್ಯೂಸ್ ಚಾನೆಲ್‍ಗಳು ಮತ್ತು ಅವುಗಳ ಪ್ರಾದೇಶಿಕ ಆವೃತ್ತಿಗಳು ವೀಕ್ಷಕರನ್ನು ಪೆದ್ದು ಮಾಡಲು ಹೋಗಿ ತಾವೇ ಮೂರ್ಖರಾದ ಪ್ರಸಂಗ ನಡೆದುದೆ.

ಮಿಥ್ಯ: ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫುಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.

‘ಐಎಎಫ್‍ನಿಂದ ಬಾಲಾಕೋಟ್ ದಾಳಿಯ ಪ್ರೂಫ್’ ಎಂದು ತೋರಿಸಿದ ರಿಪಬ್ಲಿಕ್ ಟಿವಿಯು ತನ್ನ ಡಿಫೆನ್ಸ್‌ ಸಲಹೆಗಾರ ಮೇಜರ್ ಗೌರವ್ ಆರ್ಯ ಅವರಿಂದ ‘ಪ್ರಮೋಷನಲ್’ ಮಾತು ಹೇಳಿಸಿತು. ‘ಸೇನೆಯು ಇಂತಹ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಬೇಕು. ಸಾಮಾಜಿಕ ಜಾಲತಾಣ ಕ್ರಿಯಾಶೀಲವಾಗಿರುವ ಈ ಕಾಲದಲ್ಲಿ ಇಂತಹ ವಿಡಿಯೋಗಳ ಮೂಲಕ ಜನರಲ್ಲಿ ದೇಶದ ಕುರಿತು ಹೆಮ್ಮೆ ಹುಟ್ಟಿಸಬಹುದು,,, ನಾನು ಈ ವಿಡಿಯೋ ನೋಡಿಲ್ಲ, ಆದರೆ ಅದರ ಕಂಟೆಂಟ್ ಗೊತ್ತು’ ಅಂದರು! ಆರಂಭದಲ್ಲಿಯೇ ಇದು ಪ್ರಮೋಷನಲ್ ವಿಡಿಯೋ ಎಂದು ಫ್ಲಾಷ್ ಮಾಡಿದ ಚಾನೆಲ್ ನಂತರ ಇದು ರಿಯಲ್ ಅಟ್ಯಾಕ್ ಎಂಬಂತೆ ವಿವರಣೆ ನೀಡುತ್ತ ಹೋಗುತ್ತದೆ!. ಝೀ ನ್ಯೂಸ್ ಅಂತೂ ಬಾಲಾಕೋಟ್ ದಾಳಿ ಯಶಸ್ವಿಯಾಗಿಲ್ಲ ಎನ್ನುವವರಿಗೆ ಇಲ್ಲಿದೆ ತಕ್ಕ ಉತ್ತರ ಅಂದಿತು.

ಸತ್ಯ: ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ ( ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

ಮೋದಿಗೆ, ಬಿಜೆಪಿಗೆ ಲಾಭ ಆಗುವುದಾದರೆ ಎಲ್ಲವನ್ನೂ ಬಿಟ್ಟು ಬೆತ್ತಲಾಗುವ ಮಾಧ್ಯಮಗಳ ಈ ವರ್ತನೆಯೇನು ಹೊಸದಲ್ಲ. ಆದರೆ, ಬಾಲಾಕೋಟ್ ದಾಳಿ ಯಶಸ್ವಿಯಾಯಿತೇ ಎಂಬ ಬಗ್ಗೆ ಸೇನೆಯೇ ಇನ್ನೂ ಉತ್ತರಿಸಿಲ್ಲ. ಆದರೆ ಮೋದಿ ಮೀಡಿಯಾಗಳ ಪಾಲಿಗೆ ಬಾಲಾಕೋಟ್ ವಿಷಯ ಪ್ರಚಾರದ ವಸ್ತು ಅಷ್ಟೇ

WION ಟಿವಿಯ ಸಿದಾಂತ್ ಸಿಬಲ್ ಟ್ವೀಟ್ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಎಲ್ಲೂ ಇದು ರಿಯಲ್ ಫುಟೇಜ್ ಎಂದು ಹೇಳಿಲ್ಲ. ವಾಯುಸೇನಾ ಮುಖ್ಯಸ್ಥರೇ ದಾಳಿಯ ರಿಯಲ್ ಫುಟೇಜ್ ಇಲ್ಲ, ಇದು ಪ್ರಮೋಷನಲ್ ವಿಡಿಯೋ ಮಾತ್ರ ಎಂದು ಹೇಳಿದ್ದರು’ ಎಂದು ವಿವರಿಸಿದರು. ಬಿಬಿಸಿಯ ಜುಗಲ್ ಪುರೋಹಿತ್ ಕೂಡ ಇಂಥದ್ದೇ ಟ್ವೀಟ್ ಮಾಡಿದರು. ಕೊನೆಗೆ ಎಎನ್‍ಐ ಕೂಡ ತಪ್ಪು ತಿದ್ದಿಕೊಂಡು ಇದು ಪ್ರಮೋಷನಲ್ ವಿಡಿಯೋ ಅಂದಿತು…..

ಒಟ್ಟಿನಲ್ಲಿ ಸತ್ಯ ಮುಚ್ಚಿಟ್ಟು ಟಿಆರ್‍ಪಿ ಹೆಚ್ಚಿಸಿಕೊಂಡ ಮಾಧ್ಯಮಗಳಿಗೆ, ಅದಕ್ಕಿಂತ ಹೆಚ್ಚಾಗಿ ಮೋದಿ ಭಜನೆ ಮಾಡಿದ ತೃಪ್ತಿ ಇರಬಹುದೇನೋ?

ಇವತ್ತಿಗೂ ಬಾಲಾಕೋಟ್ ದಾಳಿ ಯಶಸ್ವಿಯಾಗಿದೆಯೋ ಇಲ್ಲವೋ ಎಂಬ ಬಗ್ಗೆ ಸೇನೆಯೇ ಸರಿಯಾದ ಉತ್ತರ ನೀಡಿಲ್ಲ! ಅಂಥದ್ದರಲ್ಲಿ ಅದು ಪ್ರಮೋಷನಲ್ ವಿಡಿಯೋ ಬಿಡುಗಡೆ ಮಾಡುವ ಅಗತ್ಯವಿತ್ತೇ? ಅಥವಾ ಆ ವಿಡಿಯೋವನ್ನು ರಿಯಲ್ ಎಂದು ಮೋದಿ-ಮೀಡಿಯಾ ತೋರಿಸಲಿ ಎಂದು ಅದು ಕೂಡ ಆಶಿಸಿತ್ತೇ ಎಂಬ ಪ್ರಶ್ನೆ ಏಳುವುದು ಸಹಜ ಅಲ್ಲವೇ?
(ಆಧಾರ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...