Homeಮುಖಪುಟಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

ಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

- Advertisement -
- Advertisement -

ನಮ್ಮ ‘ಯುದ್ಧದಾಹಿ’ ಚಾನೆಲ್‍ಗಳು ಇನ್ನೂ ಬಾಲಾಕೋಟ್ ಮಂಪರಿನಿಂದ ಹೊರಬಂದಿಲ್ಲ, ಮುಂದಿನ ಚುನಾವಣೆವರೆಗೂ ಅವು ಆಗಾಗ ಬಾಲಾಕೋಟ್ ದಾಳಿಯ ವಿಸ್ಮೃತಿಗೆ ಒಳಗಾಗುತ್ತಲೇ ವೀಕ್ಷಕರನ್ನು ವಂಚಿಸಲಿವೆ. ಎರಡು-ಮೂರು ದಿನಗಳಿಂದ ಬಹುಪಾಲು ಇಂಗ್ಲಿಷ್, ಹಿಂದಿ ನ್ಯೂಸ್ ಚಾನೆಲ್‍ಗಳು ಮತ್ತು ಅವುಗಳ ಪ್ರಾದೇಶಿಕ ಆವೃತ್ತಿಗಳು ವೀಕ್ಷಕರನ್ನು ಪೆದ್ದು ಮಾಡಲು ಹೋಗಿ ತಾವೇ ಮೂರ್ಖರಾದ ಪ್ರಸಂಗ ನಡೆದುದೆ.

ಮಿಥ್ಯ: ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫುಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.

‘ಐಎಎಫ್‍ನಿಂದ ಬಾಲಾಕೋಟ್ ದಾಳಿಯ ಪ್ರೂಫ್’ ಎಂದು ತೋರಿಸಿದ ರಿಪಬ್ಲಿಕ್ ಟಿವಿಯು ತನ್ನ ಡಿಫೆನ್ಸ್‌ ಸಲಹೆಗಾರ ಮೇಜರ್ ಗೌರವ್ ಆರ್ಯ ಅವರಿಂದ ‘ಪ್ರಮೋಷನಲ್’ ಮಾತು ಹೇಳಿಸಿತು. ‘ಸೇನೆಯು ಇಂತಹ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಬೇಕು. ಸಾಮಾಜಿಕ ಜಾಲತಾಣ ಕ್ರಿಯಾಶೀಲವಾಗಿರುವ ಈ ಕಾಲದಲ್ಲಿ ಇಂತಹ ವಿಡಿಯೋಗಳ ಮೂಲಕ ಜನರಲ್ಲಿ ದೇಶದ ಕುರಿತು ಹೆಮ್ಮೆ ಹುಟ್ಟಿಸಬಹುದು,,, ನಾನು ಈ ವಿಡಿಯೋ ನೋಡಿಲ್ಲ, ಆದರೆ ಅದರ ಕಂಟೆಂಟ್ ಗೊತ್ತು’ ಅಂದರು! ಆರಂಭದಲ್ಲಿಯೇ ಇದು ಪ್ರಮೋಷನಲ್ ವಿಡಿಯೋ ಎಂದು ಫ್ಲಾಷ್ ಮಾಡಿದ ಚಾನೆಲ್ ನಂತರ ಇದು ರಿಯಲ್ ಅಟ್ಯಾಕ್ ಎಂಬಂತೆ ವಿವರಣೆ ನೀಡುತ್ತ ಹೋಗುತ್ತದೆ!. ಝೀ ನ್ಯೂಸ್ ಅಂತೂ ಬಾಲಾಕೋಟ್ ದಾಳಿ ಯಶಸ್ವಿಯಾಗಿಲ್ಲ ಎನ್ನುವವರಿಗೆ ಇಲ್ಲಿದೆ ತಕ್ಕ ಉತ್ತರ ಅಂದಿತು.

ಸತ್ಯ: ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ ( ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

ಮೋದಿಗೆ, ಬಿಜೆಪಿಗೆ ಲಾಭ ಆಗುವುದಾದರೆ ಎಲ್ಲವನ್ನೂ ಬಿಟ್ಟು ಬೆತ್ತಲಾಗುವ ಮಾಧ್ಯಮಗಳ ಈ ವರ್ತನೆಯೇನು ಹೊಸದಲ್ಲ. ಆದರೆ, ಬಾಲಾಕೋಟ್ ದಾಳಿ ಯಶಸ್ವಿಯಾಯಿತೇ ಎಂಬ ಬಗ್ಗೆ ಸೇನೆಯೇ ಇನ್ನೂ ಉತ್ತರಿಸಿಲ್ಲ. ಆದರೆ ಮೋದಿ ಮೀಡಿಯಾಗಳ ಪಾಲಿಗೆ ಬಾಲಾಕೋಟ್ ವಿಷಯ ಪ್ರಚಾರದ ವಸ್ತು ಅಷ್ಟೇ

WION ಟಿವಿಯ ಸಿದಾಂತ್ ಸಿಬಲ್ ಟ್ವೀಟ್ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಎಲ್ಲೂ ಇದು ರಿಯಲ್ ಫುಟೇಜ್ ಎಂದು ಹೇಳಿಲ್ಲ. ವಾಯುಸೇನಾ ಮುಖ್ಯಸ್ಥರೇ ದಾಳಿಯ ರಿಯಲ್ ಫುಟೇಜ್ ಇಲ್ಲ, ಇದು ಪ್ರಮೋಷನಲ್ ವಿಡಿಯೋ ಮಾತ್ರ ಎಂದು ಹೇಳಿದ್ದರು’ ಎಂದು ವಿವರಿಸಿದರು. ಬಿಬಿಸಿಯ ಜುಗಲ್ ಪುರೋಹಿತ್ ಕೂಡ ಇಂಥದ್ದೇ ಟ್ವೀಟ್ ಮಾಡಿದರು. ಕೊನೆಗೆ ಎಎನ್‍ಐ ಕೂಡ ತಪ್ಪು ತಿದ್ದಿಕೊಂಡು ಇದು ಪ್ರಮೋಷನಲ್ ವಿಡಿಯೋ ಅಂದಿತು…..

ಒಟ್ಟಿನಲ್ಲಿ ಸತ್ಯ ಮುಚ್ಚಿಟ್ಟು ಟಿಆರ್‍ಪಿ ಹೆಚ್ಚಿಸಿಕೊಂಡ ಮಾಧ್ಯಮಗಳಿಗೆ, ಅದಕ್ಕಿಂತ ಹೆಚ್ಚಾಗಿ ಮೋದಿ ಭಜನೆ ಮಾಡಿದ ತೃಪ್ತಿ ಇರಬಹುದೇನೋ?

ಇವತ್ತಿಗೂ ಬಾಲಾಕೋಟ್ ದಾಳಿ ಯಶಸ್ವಿಯಾಗಿದೆಯೋ ಇಲ್ಲವೋ ಎಂಬ ಬಗ್ಗೆ ಸೇನೆಯೇ ಸರಿಯಾದ ಉತ್ತರ ನೀಡಿಲ್ಲ! ಅಂಥದ್ದರಲ್ಲಿ ಅದು ಪ್ರಮೋಷನಲ್ ವಿಡಿಯೋ ಬಿಡುಗಡೆ ಮಾಡುವ ಅಗತ್ಯವಿತ್ತೇ? ಅಥವಾ ಆ ವಿಡಿಯೋವನ್ನು ರಿಯಲ್ ಎಂದು ಮೋದಿ-ಮೀಡಿಯಾ ತೋರಿಸಲಿ ಎಂದು ಅದು ಕೂಡ ಆಶಿಸಿತ್ತೇ ಎಂಬ ಪ್ರಶ್ನೆ ಏಳುವುದು ಸಹಜ ಅಲ್ಲವೇ?
(ಆಧಾರ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...