Homeಮುಖಪುಟಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

ಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

- Advertisement -
- Advertisement -

ನಮ್ಮ ‘ಯುದ್ಧದಾಹಿ’ ಚಾನೆಲ್‍ಗಳು ಇನ್ನೂ ಬಾಲಾಕೋಟ್ ಮಂಪರಿನಿಂದ ಹೊರಬಂದಿಲ್ಲ, ಮುಂದಿನ ಚುನಾವಣೆವರೆಗೂ ಅವು ಆಗಾಗ ಬಾಲಾಕೋಟ್ ದಾಳಿಯ ವಿಸ್ಮೃತಿಗೆ ಒಳಗಾಗುತ್ತಲೇ ವೀಕ್ಷಕರನ್ನು ವಂಚಿಸಲಿವೆ. ಎರಡು-ಮೂರು ದಿನಗಳಿಂದ ಬಹುಪಾಲು ಇಂಗ್ಲಿಷ್, ಹಿಂದಿ ನ್ಯೂಸ್ ಚಾನೆಲ್‍ಗಳು ಮತ್ತು ಅವುಗಳ ಪ್ರಾದೇಶಿಕ ಆವೃತ್ತಿಗಳು ವೀಕ್ಷಕರನ್ನು ಪೆದ್ದು ಮಾಡಲು ಹೋಗಿ ತಾವೇ ಮೂರ್ಖರಾದ ಪ್ರಸಂಗ ನಡೆದುದೆ.

ಮಿಥ್ಯ: ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫುಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.

‘ಐಎಎಫ್‍ನಿಂದ ಬಾಲಾಕೋಟ್ ದಾಳಿಯ ಪ್ರೂಫ್’ ಎಂದು ತೋರಿಸಿದ ರಿಪಬ್ಲಿಕ್ ಟಿವಿಯು ತನ್ನ ಡಿಫೆನ್ಸ್‌ ಸಲಹೆಗಾರ ಮೇಜರ್ ಗೌರವ್ ಆರ್ಯ ಅವರಿಂದ ‘ಪ್ರಮೋಷನಲ್’ ಮಾತು ಹೇಳಿಸಿತು. ‘ಸೇನೆಯು ಇಂತಹ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಬೇಕು. ಸಾಮಾಜಿಕ ಜಾಲತಾಣ ಕ್ರಿಯಾಶೀಲವಾಗಿರುವ ಈ ಕಾಲದಲ್ಲಿ ಇಂತಹ ವಿಡಿಯೋಗಳ ಮೂಲಕ ಜನರಲ್ಲಿ ದೇಶದ ಕುರಿತು ಹೆಮ್ಮೆ ಹುಟ್ಟಿಸಬಹುದು,,, ನಾನು ಈ ವಿಡಿಯೋ ನೋಡಿಲ್ಲ, ಆದರೆ ಅದರ ಕಂಟೆಂಟ್ ಗೊತ್ತು’ ಅಂದರು! ಆರಂಭದಲ್ಲಿಯೇ ಇದು ಪ್ರಮೋಷನಲ್ ವಿಡಿಯೋ ಎಂದು ಫ್ಲಾಷ್ ಮಾಡಿದ ಚಾನೆಲ್ ನಂತರ ಇದು ರಿಯಲ್ ಅಟ್ಯಾಕ್ ಎಂಬಂತೆ ವಿವರಣೆ ನೀಡುತ್ತ ಹೋಗುತ್ತದೆ!. ಝೀ ನ್ಯೂಸ್ ಅಂತೂ ಬಾಲಾಕೋಟ್ ದಾಳಿ ಯಶಸ್ವಿಯಾಗಿಲ್ಲ ಎನ್ನುವವರಿಗೆ ಇಲ್ಲಿದೆ ತಕ್ಕ ಉತ್ತರ ಅಂದಿತು.

ಸತ್ಯ: ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ ( ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

ಮೋದಿಗೆ, ಬಿಜೆಪಿಗೆ ಲಾಭ ಆಗುವುದಾದರೆ ಎಲ್ಲವನ್ನೂ ಬಿಟ್ಟು ಬೆತ್ತಲಾಗುವ ಮಾಧ್ಯಮಗಳ ಈ ವರ್ತನೆಯೇನು ಹೊಸದಲ್ಲ. ಆದರೆ, ಬಾಲಾಕೋಟ್ ದಾಳಿ ಯಶಸ್ವಿಯಾಯಿತೇ ಎಂಬ ಬಗ್ಗೆ ಸೇನೆಯೇ ಇನ್ನೂ ಉತ್ತರಿಸಿಲ್ಲ. ಆದರೆ ಮೋದಿ ಮೀಡಿಯಾಗಳ ಪಾಲಿಗೆ ಬಾಲಾಕೋಟ್ ವಿಷಯ ಪ್ರಚಾರದ ವಸ್ತು ಅಷ್ಟೇ

WION ಟಿವಿಯ ಸಿದಾಂತ್ ಸಿಬಲ್ ಟ್ವೀಟ್ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಎಲ್ಲೂ ಇದು ರಿಯಲ್ ಫುಟೇಜ್ ಎಂದು ಹೇಳಿಲ್ಲ. ವಾಯುಸೇನಾ ಮುಖ್ಯಸ್ಥರೇ ದಾಳಿಯ ರಿಯಲ್ ಫುಟೇಜ್ ಇಲ್ಲ, ಇದು ಪ್ರಮೋಷನಲ್ ವಿಡಿಯೋ ಮಾತ್ರ ಎಂದು ಹೇಳಿದ್ದರು’ ಎಂದು ವಿವರಿಸಿದರು. ಬಿಬಿಸಿಯ ಜುಗಲ್ ಪುರೋಹಿತ್ ಕೂಡ ಇಂಥದ್ದೇ ಟ್ವೀಟ್ ಮಾಡಿದರು. ಕೊನೆಗೆ ಎಎನ್‍ಐ ಕೂಡ ತಪ್ಪು ತಿದ್ದಿಕೊಂಡು ಇದು ಪ್ರಮೋಷನಲ್ ವಿಡಿಯೋ ಅಂದಿತು…..

ಒಟ್ಟಿನಲ್ಲಿ ಸತ್ಯ ಮುಚ್ಚಿಟ್ಟು ಟಿಆರ್‍ಪಿ ಹೆಚ್ಚಿಸಿಕೊಂಡ ಮಾಧ್ಯಮಗಳಿಗೆ, ಅದಕ್ಕಿಂತ ಹೆಚ್ಚಾಗಿ ಮೋದಿ ಭಜನೆ ಮಾಡಿದ ತೃಪ್ತಿ ಇರಬಹುದೇನೋ?

ಇವತ್ತಿಗೂ ಬಾಲಾಕೋಟ್ ದಾಳಿ ಯಶಸ್ವಿಯಾಗಿದೆಯೋ ಇಲ್ಲವೋ ಎಂಬ ಬಗ್ಗೆ ಸೇನೆಯೇ ಸರಿಯಾದ ಉತ್ತರ ನೀಡಿಲ್ಲ! ಅಂಥದ್ದರಲ್ಲಿ ಅದು ಪ್ರಮೋಷನಲ್ ವಿಡಿಯೋ ಬಿಡುಗಡೆ ಮಾಡುವ ಅಗತ್ಯವಿತ್ತೇ? ಅಥವಾ ಆ ವಿಡಿಯೋವನ್ನು ರಿಯಲ್ ಎಂದು ಮೋದಿ-ಮೀಡಿಯಾ ತೋರಿಸಲಿ ಎಂದು ಅದು ಕೂಡ ಆಶಿಸಿತ್ತೇ ಎಂಬ ಪ್ರಶ್ನೆ ಏಳುವುದು ಸಹಜ ಅಲ್ಲವೇ?
(ಆಧಾರ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...