Homeಮುಖಪುಟಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

ಬಾಲಾಕೋಟ್ ದಾಳಿ: ತೋರಿಸಿದ್ದು ಪ್ರಮೋಷನಲ್ ವಿಡಿಯೋ, ಹೇಳಿದ್ದು ರಿಯಲ್ ಫೂಟೇಜ್ ಎಂದು!

- Advertisement -
- Advertisement -

ನಮ್ಮ ‘ಯುದ್ಧದಾಹಿ’ ಚಾನೆಲ್‍ಗಳು ಇನ್ನೂ ಬಾಲಾಕೋಟ್ ಮಂಪರಿನಿಂದ ಹೊರಬಂದಿಲ್ಲ, ಮುಂದಿನ ಚುನಾವಣೆವರೆಗೂ ಅವು ಆಗಾಗ ಬಾಲಾಕೋಟ್ ದಾಳಿಯ ವಿಸ್ಮೃತಿಗೆ ಒಳಗಾಗುತ್ತಲೇ ವೀಕ್ಷಕರನ್ನು ವಂಚಿಸಲಿವೆ. ಎರಡು-ಮೂರು ದಿನಗಳಿಂದ ಬಹುಪಾಲು ಇಂಗ್ಲಿಷ್, ಹಿಂದಿ ನ್ಯೂಸ್ ಚಾನೆಲ್‍ಗಳು ಮತ್ತು ಅವುಗಳ ಪ್ರಾದೇಶಿಕ ಆವೃತ್ತಿಗಳು ವೀಕ್ಷಕರನ್ನು ಪೆದ್ದು ಮಾಡಲು ಹೋಗಿ ತಾವೇ ಮೂರ್ಖರಾದ ಪ್ರಸಂಗ ನಡೆದುದೆ.

ಮಿಥ್ಯ: ರಿಪಬ್ಲಿಕ್ ಟಿವಿ, ಟೈಮ್ಸ್ ನೌ, ಝೀ ಹಿಂದಿ ನ್ಯೂಸ್, ಎಬಿಪಿ ನ್ಯೂಸ್, ಇಂಡಿಯಾ ಟುಡೇ ಇತ್ಯಾದಿ ಚಾನೆಲ್‍ಗಳ ಜೊತೆಗೆ ಕೆಲವು ಪ್ರಾದೇಶಿಕ ಚಾನೆಲ್‍ಗಳು ಮತ್ತು ಪತ್ರಿಕೆಗಳು ತಮ್ಮ ವೀಕ್ಷಕರು ಮತ್ತು ಓದುಗರ ಮೇಲೆ ಈ ‘ಫೇಕ್ ದಾಳಿ’ ನಡೆಸಿದವು. ಅವು ಭಾರತೀಯ ವಾಯುಸೇನೆ ಬಿಡಿಗಡೆ ಮಾಡಿದ್ದ ವಿಡಿಯೋ ಒಂದನ್ನು ತೋರಿಸಿ ಅದು ಬಾಲಾಕೋಟ್ ದಾಳಿಯ ರಿಯಲ್ ಫುಟೇಜ್ ಎಂದವು.

ಕೆಲವು ಚಾನೆಲ್‍ಗಳಂತೂ ‘ಪ್ರೂಫ್ ಬೇಕಾ ಪ್ರೂಫ್? ಇಲ್ಲಿದೆ ನೋಡಿ’ ಎಂದವು. ಪಂಜಾಬ್ ಕೇಸರಿ ಮತ್ತು ಗುಜರಾತ್ ಸಮಾಚಾರ್ ಪತ್ರಿಕೆಗಳು ಪುಟಗಟ್ಟಲೇ ಬರೆದವು.

‘ಐಎಎಫ್‍ನಿಂದ ಬಾಲಾಕೋಟ್ ದಾಳಿಯ ಪ್ರೂಫ್’ ಎಂದು ತೋರಿಸಿದ ರಿಪಬ್ಲಿಕ್ ಟಿವಿಯು ತನ್ನ ಡಿಫೆನ್ಸ್‌ ಸಲಹೆಗಾರ ಮೇಜರ್ ಗೌರವ್ ಆರ್ಯ ಅವರಿಂದ ‘ಪ್ರಮೋಷನಲ್’ ಮಾತು ಹೇಳಿಸಿತು. ‘ಸೇನೆಯು ಇಂತಹ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಬೇಕು. ಸಾಮಾಜಿಕ ಜಾಲತಾಣ ಕ್ರಿಯಾಶೀಲವಾಗಿರುವ ಈ ಕಾಲದಲ್ಲಿ ಇಂತಹ ವಿಡಿಯೋಗಳ ಮೂಲಕ ಜನರಲ್ಲಿ ದೇಶದ ಕುರಿತು ಹೆಮ್ಮೆ ಹುಟ್ಟಿಸಬಹುದು,,, ನಾನು ಈ ವಿಡಿಯೋ ನೋಡಿಲ್ಲ, ಆದರೆ ಅದರ ಕಂಟೆಂಟ್ ಗೊತ್ತು’ ಅಂದರು! ಆರಂಭದಲ್ಲಿಯೇ ಇದು ಪ್ರಮೋಷನಲ್ ವಿಡಿಯೋ ಎಂದು ಫ್ಲಾಷ್ ಮಾಡಿದ ಚಾನೆಲ್ ನಂತರ ಇದು ರಿಯಲ್ ಅಟ್ಯಾಕ್ ಎಂಬಂತೆ ವಿವರಣೆ ನೀಡುತ್ತ ಹೋಗುತ್ತದೆ!. ಝೀ ನ್ಯೂಸ್ ಅಂತೂ ಬಾಲಾಕೋಟ್ ದಾಳಿ ಯಶಸ್ವಿಯಾಗಿಲ್ಲ ಎನ್ನುವವರಿಗೆ ಇಲ್ಲಿದೆ ತಕ್ಕ ಉತ್ತರ ಅಂದಿತು.

ಸತ್ಯ: ಅಸಲಿಗೆ ಯಾವುದೇ ದಾಳಿಯ ವಿಡಿಯೋಗಳನ್ನು ಸೇನೆ ಬಿಡುಗಡೆ ಮಾಡುವುದಿಲ್ಲ. ಅದು ಅಕ್ಟೋಬರ್ 4ರಂದು ಬಿಡುಗಡೆ ಮಾಡಿದ್ದು ಬಾಲಾಕೋಟ್ ದಾಳಿ ಹೇಗೆ ಯೋಜಿತವಾಗಿತು ಎಂದು ತೋರಿಸುವ ಪ್ರಮೋಷನಲ್ ( ರೆಪ್ರೆಸೆಂಟೆಟಿವ್ ವಿಡಿಯೋ ಅಂದರೆ ಪ್ರಾತಿನಿಧಿಕ ವಿಡಿಯೋ) ವಿಡಿಯೋವನ್ನಷ್ಟೇ. ಆದರೆ ಬಹುಪಾಲು ಚಾನೆಲ್‍ಗಳು ಬಾಲಾಕೋಟ್ ದಾಳಿಯ ರಿಯಲ್ ಫೂಟೇಜ್ ಎಂದೆಲ್ಲ ಬೊಬ್ಬೆ ಹೊಡೆದವು.

ಮೋದಿಗೆ, ಬಿಜೆಪಿಗೆ ಲಾಭ ಆಗುವುದಾದರೆ ಎಲ್ಲವನ್ನೂ ಬಿಟ್ಟು ಬೆತ್ತಲಾಗುವ ಮಾಧ್ಯಮಗಳ ಈ ವರ್ತನೆಯೇನು ಹೊಸದಲ್ಲ. ಆದರೆ, ಬಾಲಾಕೋಟ್ ದಾಳಿ ಯಶಸ್ವಿಯಾಯಿತೇ ಎಂಬ ಬಗ್ಗೆ ಸೇನೆಯೇ ಇನ್ನೂ ಉತ್ತರಿಸಿಲ್ಲ. ಆದರೆ ಮೋದಿ ಮೀಡಿಯಾಗಳ ಪಾಲಿಗೆ ಬಾಲಾಕೋಟ್ ವಿಷಯ ಪ್ರಚಾರದ ವಸ್ತು ಅಷ್ಟೇ

WION ಟಿವಿಯ ಸಿದಾಂತ್ ಸಿಬಲ್ ಟ್ವೀಟ್ ಮಾಡಿ, ಪತ್ರಿಕಾಗೋಷ್ಠಿಯಲ್ಲಿ ಎಲ್ಲೂ ಇದು ರಿಯಲ್ ಫುಟೇಜ್ ಎಂದು ಹೇಳಿಲ್ಲ. ವಾಯುಸೇನಾ ಮುಖ್ಯಸ್ಥರೇ ದಾಳಿಯ ರಿಯಲ್ ಫುಟೇಜ್ ಇಲ್ಲ, ಇದು ಪ್ರಮೋಷನಲ್ ವಿಡಿಯೋ ಮಾತ್ರ ಎಂದು ಹೇಳಿದ್ದರು’ ಎಂದು ವಿವರಿಸಿದರು. ಬಿಬಿಸಿಯ ಜುಗಲ್ ಪುರೋಹಿತ್ ಕೂಡ ಇಂಥದ್ದೇ ಟ್ವೀಟ್ ಮಾಡಿದರು. ಕೊನೆಗೆ ಎಎನ್‍ಐ ಕೂಡ ತಪ್ಪು ತಿದ್ದಿಕೊಂಡು ಇದು ಪ್ರಮೋಷನಲ್ ವಿಡಿಯೋ ಅಂದಿತು…..

ಒಟ್ಟಿನಲ್ಲಿ ಸತ್ಯ ಮುಚ್ಚಿಟ್ಟು ಟಿಆರ್‍ಪಿ ಹೆಚ್ಚಿಸಿಕೊಂಡ ಮಾಧ್ಯಮಗಳಿಗೆ, ಅದಕ್ಕಿಂತ ಹೆಚ್ಚಾಗಿ ಮೋದಿ ಭಜನೆ ಮಾಡಿದ ತೃಪ್ತಿ ಇರಬಹುದೇನೋ?

ಇವತ್ತಿಗೂ ಬಾಲಾಕೋಟ್ ದಾಳಿ ಯಶಸ್ವಿಯಾಗಿದೆಯೋ ಇಲ್ಲವೋ ಎಂಬ ಬಗ್ಗೆ ಸೇನೆಯೇ ಸರಿಯಾದ ಉತ್ತರ ನೀಡಿಲ್ಲ! ಅಂಥದ್ದರಲ್ಲಿ ಅದು ಪ್ರಮೋಷನಲ್ ವಿಡಿಯೋ ಬಿಡುಗಡೆ ಮಾಡುವ ಅಗತ್ಯವಿತ್ತೇ? ಅಥವಾ ಆ ವಿಡಿಯೋವನ್ನು ರಿಯಲ್ ಎಂದು ಮೋದಿ-ಮೀಡಿಯಾ ತೋರಿಸಲಿ ಎಂದು ಅದು ಕೂಡ ಆಶಿಸಿತ್ತೇ ಎಂಬ ಪ್ರಶ್ನೆ ಏಳುವುದು ಸಹಜ ಅಲ್ಲವೇ?
(ಆಧಾರ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...