Homeಕರ್ನಾಟಕಪ್ರಚಾರದಾಹಿ, ಅಧಿಕಾರದಾಹಿ ಪ್ರಧಾನಿ: ಮಣಿಪುರ ವಿಚಾರಕ್ಕೆ ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ

ಪ್ರಚಾರದಾಹಿ, ಅಧಿಕಾರದಾಹಿ ಪ್ರಧಾನಿ: ಮಣಿಪುರ ವಿಚಾರಕ್ಕೆ ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ

- Advertisement -
- Advertisement -

ಸಂವೇದನಾಶೀಲ ವ್ಯಕ್ತಿತ್ವವುಳ್ಳ ಕನ್ನಡದ ಹೆಸರಾಂತ ನಟ ಕಿಶೋರ್ ಅವರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಹರಿಹಾಯ್ದಿದ್ದು, ಮೋದಿಯನ್ನು ಪ್ರಚಾರದಾಹಿ, ಅಧಿಕಾರದಾಹಿ ಪ್ರಧಾನಿ ಎಂದು ಟೀಕಿಸಿದ್ದಾರೆ.

ನಟ ಕಿಶೋರ್ ಅವರು ಈಗಾಗಲೇ ಸಾಕಷ್ಟು ಬಾರಿ ಪ್ರಧಾನಿ ವಿರುದ್ಧ ಮಾತನಾಡಿಸ್ಸು, ಈ ಬಾರಿ ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನಿಟ್ಟುಕೊಂಡು ನರೇಂದ್ರ ಮೋದಿ ಅವರಿಗೆ ತಿವಿದಿದ್ದಾರೆ.

ಮಣಿಪುರ ಹಿಂಸಾಚಾರದಿಂದ ನಲಗುತ್ತಿದೆ. ಅಲ್ಲಿ ಶಾಂತಿ ಸ್ಥಾಪಿಸಲು ಕಸರತ್ತುಗಳು ನಡೆಯುತ್ತಿವೆ. ಮಣಿಪುರ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷಗಳು ಪ್ರತಿಭಟನೆ ನಡೆಯುತ್ತಿವೆ. ನಿನ್ನೆಯಷ್ಟೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಆದರೆ, ಪ್ರಧಾನಿ ಮೋದಿ ಮಾತ್ರ ಭೇಟಿ ಮಾಡಿಲ್ಲ ಎನ್ನುವುದು ಒಂದುಕಡೆಯಾದರೆ, ಆ ಬಗ್ಗೆ ಒಂದೇ ಒಂದು ಮಾತು ಕೂಡ ಮಾತನಾಡಿಲ್ಲ ಎನ್ನುವುದು ಕಿಶೋರ್ ಆರೋಪವಾಗಿದೆ.

ಈ ಬಗ್ಗೆ ಕಿಶೋರ್ ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ”ಮನ್ ಕೀ ಬಾತ್ ನಲ್ಲಿ ಕಳೆದುಹೋದ ಮಣಿಪುರದ ಬಾತ್. ದೇಶದಲ್ಲಿ ಎಲ್ಲೇ ಅಶಾಂತಿ ಮೂಡಿದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತೀ ಸರಳ, ಕಾಮನ್ ಸೆನ್ಸ್ ನ ಕೆಲಸ ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿತಿಯೇನು?” ಎಂದು ಪ್ರಶ್ನೆ ಮಾಡಿದ್ದಾರೆ.

”ನೂರ ನಲವತ್ತು ಕೋಟಿ ಓಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟಿನ ಮಣಿಪುರದ ಸತ್ತುಹೋದ ನೂರು ಓಟು, ಮನೆ ಕಳೆದುಕೊಂಡ 50 ಸಾವಿರ ಓಟುಗಳು, ಈ ಪ್ರಚಾರದಾಹಿ ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002 ರಲ್ಲಿ ಗುಜರಾತ್ 2023 ರಲ್ಲಿ ಮಣಿಪುರ .. ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ… ಇತಿಹಾಸಕ್ಕೆ ಮರೆವಿಲ್ಲ ನೆನಪಿರಲಿ..” ಎಂದು ಎಚ್ಚರಿಸಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...