Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...