Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...