Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...