Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...