Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...