Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...