Homeಕರ್ನಾಟಕಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

- Advertisement -
- Advertisement -

ಪ್ರಸ್ತುತ ಮಾಧ್ಯಮಗಳಲ್ಲಿ ಬಹು ಚರ್ಚಿತವಾಗುತ್ತಿರುವುದು ಆಗಸ್ಟ್ 11 ರಂದು ಬೆಂಗಳೂರಿನ ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ. ಈ ಘಟನೆಯ ಕುರಿತು ಬರುತ್ತಿರುವ ವರದಿಗಳಲ್ಲಿ ಸತ್ಯಾಸತ್ಯತೆ ಏನಿದೆ ಎಂಬುದನ್ನು ಮಾಧ್ಯಮಗಳು ತಮ್ಮಂತೆ ತಾವೇ ಅಥವಾ ‘ಪೊಲೀಸ್ ವರದಿ’ಗಳನ್ನು ಉಲ್ಲೇಖಿಸಿ ಮಾಡುವ ‘ಸ್ಟೋರಿ’ಗಳಿಂದ ತಿಳಿಯುವುದು ಅಸಾಧ್ಯ.

ಅದರಲ್ಲೂ ಗಲಭೆಗಳು ನಡೆದರೆ ಹಬ್ಬವೆಂದು ಭಾವಿಸುವ ರೀತಿ ವರ್ತಿಸುವ, ಯಾರ ಮೇಲೋ ಗೂಬೆ ಕೂರಿಸುವ ಅಜೆಂಡಾ ಇಟ್ಟುಕೊಂಡಂತೆ ಕಾಣುವ ವರದಿಗಳಿಂದ ಏನು ತಿಳಿಯಲು ಸಾಧ್ಯ? ಹಾಗೆಂದು ‘ಸತ್ಯಶೋಧನೆ’ ಮಾಡುತ್ತೇವೆಂದು ಹೊರಡುವ ಕೆಲವು ಪ್ರಯತ್ನಗಳ ಹಿಂದೆಯೂ ಅಜೆಂಡಾ ಇರಲು ಸಾಧ್ಯವಿಲ್ಲವೇ? ಖಂಡಿತಾ ಸಾಧ್ಯ.

ಅದರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧ್ಯಯನ ಸಮಿತಿಗಳನ್ನು ರಚಿಸಿರುವಾಗ ಇಂತಹ ಪ್ರಶ್ನೆಗಳು ಇನ್ನಷ್ಟು ಏಳುತ್ತವೆ. ಹಾಗಾಗಿ ಸತ್ಯಶೋಧನೆಯು ಪಾರದರ್ಶಕವಾಗಿರುವುದು ಅತಿ ಮುಖ್ಯ. ಹೀಗಾಗಿ ವಿಶಿಷ್ಟ ರೀತಿಯ ಸತ್ಯಶೋಧನೆಯೊಂದನ್ನು ಬೆಂಗಳೂರಿನ ಹಲವು ನಾಗರಿಕ ಸಂಘಟನೆಗಳು ಮಾಡಲು ಯೋಜಿಸಿವೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ರಾತ್ರಿ ನಡೆದ ಹಿಂಸೆ ಮತ್ತು ನಂತರದ ಘಟನಾವಳಿಗಳು ನಗರದ ಆ ಭಾಗವನ್ನು ಪ್ರಕ್ಷುಬ್ಧಗೊಳಿಸಿದೆ. ಅಲ್ಲದೆ ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದಾರೆ. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿವೆ;

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಕೂಡಾ ಮಾಡಿದ್ದು ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಸಂಘಟನೆಗಳು

ಅವರಲ್ಲಿ ಅಮಾಯಕರ ಸಂಖ್ಯೆ ಹೆಚ್ಚಿದೆಯೆಂಬ ಆರೋಪವೂ ಕೇಳಿ ಬಂದಿದೆ. ಹಾಗೆಯೇ ಸದರಿ ಗಲಭೆಯ ಹಿಂದೆ ಎಸ್‌ಡಿಪಿಐನ ಕೈವಾಡ ಇದೆಯೆಂದು ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಆರೋಪಿಸುತ್ತಿವೆ.

ಈ ಗಲಭೆಗೆ ಮೂಲ ಕಾರಣ ನವೀನ್ ಎಂಬ ವ್ಯಕ್ತಿ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದು ಎಂದು ಹೇಳಲಾಗಿದೆ. ಆದರೆ, ಅದಕ್ಕೂ ಹಿಂದೆ ಬೇರೆ ಹುನ್ನಾರಗಳಿದ್ದವೇ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶದಂತೆ ಗಲಭೆಗೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ ಈವರೆಗೆ ಸಂಪೂರ್ಣ ಸ್ಪಷ್ಟತೆ ದೊರಕಿಲ್ಲ. ಅಲ್ಲದೆ, ರಾಜಕೀಯ ಪಕ್ಷಗಳು ಈ ಗಲಭೆಗೆ ಪರಸ್ಪರ ಹೊಣೆಗಾರರೆಂದು ಆರೋಪಿಸುತ್ತಾ ಕೆಸರೆರಚಾಟಕ್ಕೆ ಮುಂದಾಗಿವೆ.

ಡಿಜೆ ಹಳ್ಳಿ ಆಸುಪಾಸಿನ ಪ್ರದೇಶಗಳು ಸಾಮಾನ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ದುರ್ಬಲತೆಯಿಂದ ಕೂಡಿರುವ ಸಮುದಾಯದ ಜನರೇ ಇರುವ ಪ್ರದೇಶ. ಈ ಘಟನೆಯಿಂದ ಹಲವು ಬಡವರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇಡೀ ವಿದ್ಯಮಾನದಲ್ಲಿ ಮಾಧ್ಯಮಗಳು ಯಾವ ಪಾತ್ರವನ್ನು ವಹಿಸಿದ್ದವು ಎಂಬುದು ಶೋಧನೆಗೊಳಗಾಗಬೇಕಿರುವ ಒಂದು ಆಯಾಮ. ಮಾಧ್ಯಮಗಳು ವರದಿ ಮಾಡಿದವೇ ಅಥವಾ ಪಾತ್ರ ವಹಿಸಿದವೇ?

ಇಂತಹ ಹತ್ತು ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಸತ್ಯದ ಶೋಧನೆಗೆ ಹೊರಟಿರುವುದಲ್ಲದೇ, ಇಡೀ ಪ್ರಕ್ರಿಯೆಯನ್ನೂ ಪಾರದರ್ಶಕವಾಗಿ ನಡೆಸುತ್ತೇವೆಂದು ತಂಡವು ಹೇಳಿರುವುದು ವಿಶಿಷ್ಟವಾದ ಬೆಳವಣಿಗೆಯಾಗಿದೆ. ಸತ್ಯಶೋಧನೆಯನ್ನೂ ಒರೆಗೆ ಹಚ್ಚುತ್ತಾ, ಬೆಳವಣಿಗೆಗಳನ್ನು ನಾನುಗೌರಿ.ಕಾಂ ವರದಿ ಮಾಡಲಿದೆ.

ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಸಾರಾಂಶವು ಈ ಕೆಳಗಿನಂತಿದೆ.

ಸಂವಿಧಾನದ ಆಶಯಗಳನ್ನು ಎಲ್ಲಾ ಜನ ಸಮುದಾಯಗಳಿಗೂ ಖಾತ್ರಿಪಡಿಸುವ ಮತ್ತು ಶಾಂತಿ ಸೌಹಾರ್ದತೆಯನ್ನು ಪುನರ್ ಸ್ಥಾಪಿಸುವ ಉದ್ದೇಶಗಳೊಂದಿಗೆ ಈ ಸತ್ಯಶೋಧನಾ ಕೆಲಸವನ್ನು ಆರಂಭಿಸಲಾಗಿದೆ. ಈ ಸತ್ಯಶೋಧನಾ ತಂಡವು ಗಲಭೆ ನಡೆದ ಪ್ರದೇಶಗಳ ಎಲ್ಲಾ ಸಮುದಾಯಗಳ ನಿವಾಸಿಗಳನ್ನು, ತೊಂದರೆಗೆ ಒಳಗಾದ ಕುಟುಂಬದ ಸದಸ್ಯರನ್ನು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು, ಹಿಂಸೆಯ ಸಂದರ್ಭದಲ್ಲಿ ಗಾಯಗೊಂಡ ಮತ್ತು ಇತರ ಮಾಧ್ಯಮ ಪ್ರತಿನಿಧಿಗಳನ್ನು ಸೇರಿದಂತೆ ಹಲವರನ್ನು ಭೇಟಿ ಮಾಡಲಿದೆ.

ಈ ಸಂದರ್ಭದಲ್ಲಿ ತಂಡವು ಸರಿಯಾದ ಮಾಹಿತಿಯನ್ನು ಸಂಗ್ರಹಿಸಲಿದೆ. ಜೊತೆಗೆ, ದಿಕ್ಸೂಚಿ ಅಂಶಗಳನ್ನು ರೂಪಿಸಿಕೊಳ್ಳಲಾಗಿದ್ದು, ಅವುಗಳಿಗೆ ಬದ್ಧವಾಗಿದ್ದುಕೊಂಡು ಈ ಸತ್ಯಶೋಧನೆಯು ನಡೆಯಲಿದೆ. ಈ ಮೂಲಕ ಘಟನೆಗೆ ಸಂಬಂಧಿಸಿದಂತೆ ನೈಜ ಅಂಶಗಳನ್ನು ಬಯಲಿಗೆ ಎಳೆಯಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ನೀನಾ ನಾಯಕ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ವಿ. ನಾಗರಾಜ್, ವಕೀಲರಾದ ನಿಯಾಜ್ ಮೂಸ, ಪತ್ರಕರ್ತರು ಹಾಗೂ ಪಾಲಿಸಿ ಸಂಶೋಧಕರಾದ ಸಿಂಥಿಯಾ ಸ್ಪೀಫೆನ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಗಾಂಧಿಮಥಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಈ ಸಮಿತಿಯ ಭಾಗವಾಗಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...