Homeಮುಖಪುಟಪ್ರವಾದಿ ನಿಂದನೆ: ಹಿಂಸಾತ್ಮಕ ಪ್ರತಿಭಟನೆ ವಿರೋಧಿಸಿ ಧರಣಿಗೆ ಕರೆ ನೀಡಿದ ಬಜರಂಗದಳ

ಪ್ರವಾದಿ ನಿಂದನೆ: ಹಿಂಸಾತ್ಮಕ ಪ್ರತಿಭಟನೆ ವಿರೋಧಿಸಿ ಧರಣಿಗೆ ಕರೆ ನೀಡಿದ ಬಜರಂಗದಳ

- Advertisement -
- Advertisement -

ಪ್ರವಾದಿ ಮುಹಮ್ಮದ್ ವಿರುದ್ಧದ ಅವಹೇಳನಾಕಾರಿ ಹೇಳಿಕೆಗಳಿಗೆ ಸಂಬಂಧಿಸಿದಂತೆ ದೇಶದ ಕೆಲವು ಭಾಗಗಳಲ್ಲಿ ಇತ್ತೀಚಿಗೆ ನಡೆದ ಹಿಂಸಾಚಾರದ ಘಟನೆಗಳ ವಿರುದ್ಧ ಬಜರಂಗದಳ ಕಾರ್ಯಕರ್ತರು ಈ ವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮಂಗಳವಾರ ಪ್ರಕಟಿಸಿದೆ.

“ಇಸ್ಲಾಮಿಕ್ ಜಿಹಾದಿ ಮೂಲಭೂತವಾದಿಗಳಿಂದ ಹೆಚ್ಚುತ್ತಿರುವ ಉಗ್ರಗಾಮಿ ಘಟನೆಗಳ ವಿರುದ್ಧ ತನ್ನ ಯುವ ಘಟಕದ ಕಾರ್ಯಕರ್ತರು ಗುರುವಾರ ದೇಶಾದ್ಯಂತ ಜಿಲ್ಲಾಡಳಿತ ಕೇಂದ್ರ ಕಚೇರಿಯಲ್ಲಿ ಧರಣಿ ನಡೆಸಲಿದ್ದಾರೆ. ಜೊತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಿದ್ದಾರೆ” ಎಂದು ಆರ್‌ಎಸ್‌ಎಸ್ ಅಂಗಸಂಸ್ಥೆ ವಿಎಚ್‌ಪಿ ತಿಳಿಸಿದೆ.

ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿ ವಜಾಗೊಂಡಿರುವ ಬಿಜೆಪಿ ಪದಾಧಿಕಾರಿಗಳಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಹೇಳಿಕೆಗಳ ವಿರುದ್ಧ ಜೂನ್ 10 ರಂದು ದೆಹಲಿಯ ಜಾಮಾ ಮಸೀದಿಯ ಹೊರಗೆ ಸೇರಿದಂತೆ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು.

ಇದನ್ನೂ ಓದಿ: ಎನ್‌ಸಿಪಿ ನಾಯಕ ಶರದ್ ಪವಾರ್‌ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ: ವರದಿ

ಜಾರ್ಖಂಡ್‌ನಲ್ಲಿ, ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿ, ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಬಳಸಿದ್ದರು.

“ದೇಶದಲ್ಲಿ ಇಸ್ಲಾಮಿಕ್ ಜಿಹಾದಿ ಮೂಲಭೂತವಾದಿಗಳಿಂದ ಹೆಚ್ಚುತ್ತಿರುವ ಉಗ್ರಗಾಮಿ ಘಟನೆಗಳ ವಿರುದ್ಧ ವಿಎಚ್‌ಪಿಯ ಯುವ ಘಟಕ ಬಜರಂಗದಳ ಈಗ ಬೀದಿಗಿಳಿಯಲಿದೆ. ಜಿಹಾದಿ ಮೂಲಭೂತವಾದಿಗಳಿಂದ ಹಿಂದೂಗಳ ಮೇಲಿನ ನಿರಂತರ ದಾಳಿಯ ವಿರುದ್ಧ ಬಜರಂಗದಳ ಕಾರ್ಯಕರ್ತರು ಗುರುವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ” ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೋಮವಾರ (ಜೂನ್.14) ವಿಎಚ್‌ಪಿಯ ದೆಹಲಿ ಘಟಕವು ಜೂನ್ 10 ರ ಹಿಂಸಾಚಾರದ ವಿರುದ್ಧ ಪ್ರತಿಭಟನೆ ವಿರುದ್ಧ ಮಂಗಳವಾರ ರಾತ್ರಿ 8 ಗಂಟೆಗೆ ದೇವಾಲಯಗಳಲ್ಲಿ ಸೇರಲು ಮತ್ತು ಹನುಮಾನ್ ಚಾಲೀಸಾದ ಸಾಮೂಹಿಕ ಪಾರಾಯಣದಲ್ಲಿ ಭಾಗವಹಿಸಲು ನಗರದ ಜನರಿಗೆ ಕರೆ ನೀಡಿತ್ತು.

ಉತ್ತರ ಪ್ರದೇಶದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನಾಯಕರ ಮನೆಗಳ ಮೇಲೆ ಯೋಗಿ ಆದಿತ್ಯನಾಥ್ ಸರ್ಕಾರ ಬುಲ್ಡೋಜರ್‌ ದಾಳಿ ನಡೆಸುತ್ತಿದೆ. ಪ್ರಕರಣದಲ್ಲಿ 300ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತರು, ನಿವೃತ್ತ ಜಡ್ಜ್‌ಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...