Homeಕರ್ನಾಟಕಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

ಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

- Advertisement -
- Advertisement -

ಪ್ರವಾದಿ ಮುಹಮ್ಮದ್ ಕುರಿತು ಇಬ್ಬರು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳಿಂದಾಗಿ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ತೀವ್ರ ಹಿನ್ನಡೆ ಉಂಟಾಗುತ್ತಿದೆ. ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂಬ ಕೂಗು ಹೆಚ್ಚಾದ ಹಿನ್ನೆಲೆಯಲ್ಲಿ ಕತಾರ್, ಕುವೈತ್ ಮತ್ತು ಇರಾನ್ ದೇಶಗಳು ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿವೆ.

ಕತಾರ್‌ನಲ್ಲಿರುವ ಭಾರತದ ರಾಯಭಾರಿ ದೀಪಕ್ ಮಿತ್ತಲ್ ಸಮನ್ಸ್ ನೀಡಿರುವ ಕತಾರ್‌, “ಇಂತಹ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ಶಿಕ್ಷೆಯಿಲ್ಲದೆ ಮುಂದುವರಿಸಲು ಅವಕಾಶ ನೀಡುವುದು ಮಾನವ ಹಕ್ಕುಗಳ ರಕ್ಷಣೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಇದು ಮತ್ತಷ್ಟು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು. ಹಿಂಸೆ ಮತ್ತು ದ್ವೇಷವನ್ನು ಸೃಷ್ಟಿಸಬಹುದು” ಎಂದು ತಿಳಿಸಿದೆ.

“ಈ ಪ್ರತಿಕೂಲ ಹೇಳಿಕೆಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು” ಎಂದು ಕುವೈತ್‌ ಒತ್ತಾಯಿಸಿದೆ. “ಇದರ ಮುಂದುವರಿಕೆಯು ದ್ವೇಷವನ್ನು ಹೆಚ್ಚಿಸುತ್ತದೆ” ಎಂದು ಕುವೈತ್‌ ಆತಂಕ ವ್ಯಕ್ತಪಡಿಸಿದೆ.

“ಭಾರತೀಯ ಟಿವಿ ಶೋನಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಮಾನ” ಎಂಬ ಸುದ್ದಿಯನ್ನು ಇರಾನ್ ಇಂಟರ್ನ್ಯಾಷನಲ್ ಇಂಗ್ಲಿಷ್ ವರದಿ ಮಾಡಿದ್ದು, ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದೆ.

ಈ ಹೇಳಿಕೆ ಸರ್ಕಾರದ ಅಭಿಪ್ರಾಯ ಆಗಿರುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದ್ದು, “ಆಡಳಿತಾರೂಢ ಬಿಜೆಪಿ, ತನ್ನ ನಾಯಕರ ವಿರುದ್ಧ ಕ್ರಮ ಕೈಗೊಂಡಿದೆ” ಎಂಬ ವಿಷಯವನ್ನು ತಿಳಿಸಿದೆ.

ಕತಾರ್‌ ಪ್ರಧಾನಿ ಶೇಖ್ ಖಾಲಿದ್ ಬಿನ್ ಖಲೀಫಾ ಬಿನ್ ಅಬ್ದುಲಜೀಜ್ ಅಲ್ ಥಾನಿ ಅವರನ್ನು ಭಾರತದ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಭೇಟಿ ಮಾಡುವ ನಡುವೆ ಕತಾರ್ ಖಂಡನೆ ಹೊರಬಿದ್ದಿದೆ.

ಕಳೆದ ವಾರ ದೇಶಾದ್ಯಂತ ನಡೆದ ಸರಣಿ ಕೋಮು ಘಟನೆಗಳ ಹಿನ್ನಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರು ಟಿವಿ ಡಿಬೇಟ್‌ ಸಂದರ್ಭದಲ್ಲಿ ಪ್ರವಾದಿಯನ್ನು ಅವಮಾನಿಸುವ ಹೇಳಿಕೆ ನೀಡಿದ್ದರು. ನವೀನ್ ಜಿಂದಾಲ್ ಅವರು ಪ್ರವಾದಿ ಕುರಿತು ಟ್ವೀಟ್ ಮಾಡಿ, ನಂತರ ಡಿಲೀಟ್‌ ಮಾಡಿದ್ದರು.

ಬಿಜೆಪಿ ಕ್ರಮ ವಹಿಸಿದ ನಂತರ ತಮ್ಮ ಹೇಳಿಕೆಗಳನ್ನು ನೂಪುರ್‌ ಶರ್ಮಾ, ನವೀನ್ ಜಿಂದಾಲ್ ವಾಪಸ್‌ ಪಡೆದಿದ್ದಾರೆ. ಬಿಜೆಪಿ ಈ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಸಮಸ್ಯೆ ಉಲ್ಬಣಿಸಿದೆ. ಶುಕ್ರವಾರದ ಪ್ರಾರ್ಥನೆಯ ನಂತರ ಎರಡು ಗುಂಪುಗಳ ಘರ್ಷಣೆಯಲ್ಲಿ ಕಾನ್ಪುರದಲ್ಲಿ 40 ಜನರು ಗಾಯಗೊಂಡಿದ್ದಾರೆ.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವ ಯಾವುದೇ ಸಿದ್ಧಾಂತದ ವಿರುದ್ಧವಿದ್ದೇವೆ” ಎಂದು ಬಿಜೆಪಿ ಹೇಳಿದೆ. “ಅಂತಹ ಜನರನ್ನು ಅಥವಾ ವಿಚಾರಧಾರೆಗಳನ್ನು ನಾವು ಪ್ರೊತ್ಸಾಹಿಸುವುದಿಲ್ಲ” ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಬಿಜೆಪಿ ಹೇಳಿಕೆಯನ್ನು ಕಸದಬುಟ್ಟಿಗೆ ತಳ್ಳಿದ ಕಾಂಗ್ರೆಸ್, “ಇದು ಸ್ಪಷ್ಟವಾದ ನಕಲಿ ನೆಪವಲ್ಲದೆ ಬೇರೇನೂ ಅಲ್ಲ, ಇದು ಸ್ಪಷ್ಟವಾಗಿ ಪ್ರಹಸನವಷ್ಟೇ. ಆಗಿರುವ ಹಾನಿಯ ನಿಯಂತ್ರಣದ ಮತ್ತೊಂದು ಪ್ರಯತ್ನವಷ್ಟೇ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...