Homeಕರ್ನಾಟಕಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

ಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

- Advertisement -
- Advertisement -

ಪ್ರವಾದಿ ಮುಹಮ್ಮದ್ ಕುರಿತು ಇಬ್ಬರು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳಿಂದಾಗಿ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ತೀವ್ರ ಹಿನ್ನಡೆ ಉಂಟಾಗುತ್ತಿದೆ. ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂಬ ಕೂಗು ಹೆಚ್ಚಾದ ಹಿನ್ನೆಲೆಯಲ್ಲಿ ಕತಾರ್, ಕುವೈತ್ ಮತ್ತು ಇರಾನ್ ದೇಶಗಳು ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿವೆ.

ಕತಾರ್‌ನಲ್ಲಿರುವ ಭಾರತದ ರಾಯಭಾರಿ ದೀಪಕ್ ಮಿತ್ತಲ್ ಸಮನ್ಸ್ ನೀಡಿರುವ ಕತಾರ್‌, “ಇಂತಹ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ಶಿಕ್ಷೆಯಿಲ್ಲದೆ ಮುಂದುವರಿಸಲು ಅವಕಾಶ ನೀಡುವುದು ಮಾನವ ಹಕ್ಕುಗಳ ರಕ್ಷಣೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಇದು ಮತ್ತಷ್ಟು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು. ಹಿಂಸೆ ಮತ್ತು ದ್ವೇಷವನ್ನು ಸೃಷ್ಟಿಸಬಹುದು” ಎಂದು ತಿಳಿಸಿದೆ.

“ಈ ಪ್ರತಿಕೂಲ ಹೇಳಿಕೆಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು” ಎಂದು ಕುವೈತ್‌ ಒತ್ತಾಯಿಸಿದೆ. “ಇದರ ಮುಂದುವರಿಕೆಯು ದ್ವೇಷವನ್ನು ಹೆಚ್ಚಿಸುತ್ತದೆ” ಎಂದು ಕುವೈತ್‌ ಆತಂಕ ವ್ಯಕ್ತಪಡಿಸಿದೆ.

“ಭಾರತೀಯ ಟಿವಿ ಶೋನಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಮಾನ” ಎಂಬ ಸುದ್ದಿಯನ್ನು ಇರಾನ್ ಇಂಟರ್ನ್ಯಾಷನಲ್ ಇಂಗ್ಲಿಷ್ ವರದಿ ಮಾಡಿದ್ದು, ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದೆ.

ಈ ಹೇಳಿಕೆ ಸರ್ಕಾರದ ಅಭಿಪ್ರಾಯ ಆಗಿರುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದ್ದು, “ಆಡಳಿತಾರೂಢ ಬಿಜೆಪಿ, ತನ್ನ ನಾಯಕರ ವಿರುದ್ಧ ಕ್ರಮ ಕೈಗೊಂಡಿದೆ” ಎಂಬ ವಿಷಯವನ್ನು ತಿಳಿಸಿದೆ.

ಕತಾರ್‌ ಪ್ರಧಾನಿ ಶೇಖ್ ಖಾಲಿದ್ ಬಿನ್ ಖಲೀಫಾ ಬಿನ್ ಅಬ್ದುಲಜೀಜ್ ಅಲ್ ಥಾನಿ ಅವರನ್ನು ಭಾರತದ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಭೇಟಿ ಮಾಡುವ ನಡುವೆ ಕತಾರ್ ಖಂಡನೆ ಹೊರಬಿದ್ದಿದೆ.

ಕಳೆದ ವಾರ ದೇಶಾದ್ಯಂತ ನಡೆದ ಸರಣಿ ಕೋಮು ಘಟನೆಗಳ ಹಿನ್ನಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರು ಟಿವಿ ಡಿಬೇಟ್‌ ಸಂದರ್ಭದಲ್ಲಿ ಪ್ರವಾದಿಯನ್ನು ಅವಮಾನಿಸುವ ಹೇಳಿಕೆ ನೀಡಿದ್ದರು. ನವೀನ್ ಜಿಂದಾಲ್ ಅವರು ಪ್ರವಾದಿ ಕುರಿತು ಟ್ವೀಟ್ ಮಾಡಿ, ನಂತರ ಡಿಲೀಟ್‌ ಮಾಡಿದ್ದರು.

ಬಿಜೆಪಿ ಕ್ರಮ ವಹಿಸಿದ ನಂತರ ತಮ್ಮ ಹೇಳಿಕೆಗಳನ್ನು ನೂಪುರ್‌ ಶರ್ಮಾ, ನವೀನ್ ಜಿಂದಾಲ್ ವಾಪಸ್‌ ಪಡೆದಿದ್ದಾರೆ. ಬಿಜೆಪಿ ಈ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಸಮಸ್ಯೆ ಉಲ್ಬಣಿಸಿದೆ. ಶುಕ್ರವಾರದ ಪ್ರಾರ್ಥನೆಯ ನಂತರ ಎರಡು ಗುಂಪುಗಳ ಘರ್ಷಣೆಯಲ್ಲಿ ಕಾನ್ಪುರದಲ್ಲಿ 40 ಜನರು ಗಾಯಗೊಂಡಿದ್ದಾರೆ.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವ ಯಾವುದೇ ಸಿದ್ಧಾಂತದ ವಿರುದ್ಧವಿದ್ದೇವೆ” ಎಂದು ಬಿಜೆಪಿ ಹೇಳಿದೆ. “ಅಂತಹ ಜನರನ್ನು ಅಥವಾ ವಿಚಾರಧಾರೆಗಳನ್ನು ನಾವು ಪ್ರೊತ್ಸಾಹಿಸುವುದಿಲ್ಲ” ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಬಿಜೆಪಿ ಹೇಳಿಕೆಯನ್ನು ಕಸದಬುಟ್ಟಿಗೆ ತಳ್ಳಿದ ಕಾಂಗ್ರೆಸ್, “ಇದು ಸ್ಪಷ್ಟವಾದ ನಕಲಿ ನೆಪವಲ್ಲದೆ ಬೇರೇನೂ ಅಲ್ಲ, ಇದು ಸ್ಪಷ್ಟವಾಗಿ ಪ್ರಹಸನವಷ್ಟೇ. ಆಗಿರುವ ಹಾನಿಯ ನಿಯಂತ್ರಣದ ಮತ್ತೊಂದು ಪ್ರಯತ್ನವಷ್ಟೇ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...