Homeಕರ್ನಾಟಕಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

ಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

- Advertisement -
- Advertisement -

ಪ್ರವಾದಿ ಮುಹಮ್ಮದ್ ಕುರಿತು ಇಬ್ಬರು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳಿಂದಾಗಿ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ತೀವ್ರ ಹಿನ್ನಡೆ ಉಂಟಾಗುತ್ತಿದೆ. ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂಬ ಕೂಗು ಹೆಚ್ಚಾದ ಹಿನ್ನೆಲೆಯಲ್ಲಿ ಕತಾರ್, ಕುವೈತ್ ಮತ್ತು ಇರಾನ್ ದೇಶಗಳು ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿವೆ.

ಕತಾರ್‌ನಲ್ಲಿರುವ ಭಾರತದ ರಾಯಭಾರಿ ದೀಪಕ್ ಮಿತ್ತಲ್ ಸಮನ್ಸ್ ನೀಡಿರುವ ಕತಾರ್‌, “ಇಂತಹ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ಶಿಕ್ಷೆಯಿಲ್ಲದೆ ಮುಂದುವರಿಸಲು ಅವಕಾಶ ನೀಡುವುದು ಮಾನವ ಹಕ್ಕುಗಳ ರಕ್ಷಣೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಇದು ಮತ್ತಷ್ಟು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು. ಹಿಂಸೆ ಮತ್ತು ದ್ವೇಷವನ್ನು ಸೃಷ್ಟಿಸಬಹುದು” ಎಂದು ತಿಳಿಸಿದೆ.

“ಈ ಪ್ರತಿಕೂಲ ಹೇಳಿಕೆಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು” ಎಂದು ಕುವೈತ್‌ ಒತ್ತಾಯಿಸಿದೆ. “ಇದರ ಮುಂದುವರಿಕೆಯು ದ್ವೇಷವನ್ನು ಹೆಚ್ಚಿಸುತ್ತದೆ” ಎಂದು ಕುವೈತ್‌ ಆತಂಕ ವ್ಯಕ್ತಪಡಿಸಿದೆ.

“ಭಾರತೀಯ ಟಿವಿ ಶೋನಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಮಾನ” ಎಂಬ ಸುದ್ದಿಯನ್ನು ಇರಾನ್ ಇಂಟರ್ನ್ಯಾಷನಲ್ ಇಂಗ್ಲಿಷ್ ವರದಿ ಮಾಡಿದ್ದು, ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದೆ.

ಈ ಹೇಳಿಕೆ ಸರ್ಕಾರದ ಅಭಿಪ್ರಾಯ ಆಗಿರುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದ್ದು, “ಆಡಳಿತಾರೂಢ ಬಿಜೆಪಿ, ತನ್ನ ನಾಯಕರ ವಿರುದ್ಧ ಕ್ರಮ ಕೈಗೊಂಡಿದೆ” ಎಂಬ ವಿಷಯವನ್ನು ತಿಳಿಸಿದೆ.

ಕತಾರ್‌ ಪ್ರಧಾನಿ ಶೇಖ್ ಖಾಲಿದ್ ಬಿನ್ ಖಲೀಫಾ ಬಿನ್ ಅಬ್ದುಲಜೀಜ್ ಅಲ್ ಥಾನಿ ಅವರನ್ನು ಭಾರತದ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಭೇಟಿ ಮಾಡುವ ನಡುವೆ ಕತಾರ್ ಖಂಡನೆ ಹೊರಬಿದ್ದಿದೆ.

ಕಳೆದ ವಾರ ದೇಶಾದ್ಯಂತ ನಡೆದ ಸರಣಿ ಕೋಮು ಘಟನೆಗಳ ಹಿನ್ನಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರು ಟಿವಿ ಡಿಬೇಟ್‌ ಸಂದರ್ಭದಲ್ಲಿ ಪ್ರವಾದಿಯನ್ನು ಅವಮಾನಿಸುವ ಹೇಳಿಕೆ ನೀಡಿದ್ದರು. ನವೀನ್ ಜಿಂದಾಲ್ ಅವರು ಪ್ರವಾದಿ ಕುರಿತು ಟ್ವೀಟ್ ಮಾಡಿ, ನಂತರ ಡಿಲೀಟ್‌ ಮಾಡಿದ್ದರು.

ಬಿಜೆಪಿ ಕ್ರಮ ವಹಿಸಿದ ನಂತರ ತಮ್ಮ ಹೇಳಿಕೆಗಳನ್ನು ನೂಪುರ್‌ ಶರ್ಮಾ, ನವೀನ್ ಜಿಂದಾಲ್ ವಾಪಸ್‌ ಪಡೆದಿದ್ದಾರೆ. ಬಿಜೆಪಿ ಈ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಸಮಸ್ಯೆ ಉಲ್ಬಣಿಸಿದೆ. ಶುಕ್ರವಾರದ ಪ್ರಾರ್ಥನೆಯ ನಂತರ ಎರಡು ಗುಂಪುಗಳ ಘರ್ಷಣೆಯಲ್ಲಿ ಕಾನ್ಪುರದಲ್ಲಿ 40 ಜನರು ಗಾಯಗೊಂಡಿದ್ದಾರೆ.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವ ಯಾವುದೇ ಸಿದ್ಧಾಂತದ ವಿರುದ್ಧವಿದ್ದೇವೆ” ಎಂದು ಬಿಜೆಪಿ ಹೇಳಿದೆ. “ಅಂತಹ ಜನರನ್ನು ಅಥವಾ ವಿಚಾರಧಾರೆಗಳನ್ನು ನಾವು ಪ್ರೊತ್ಸಾಹಿಸುವುದಿಲ್ಲ” ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಬಿಜೆಪಿ ಹೇಳಿಕೆಯನ್ನು ಕಸದಬುಟ್ಟಿಗೆ ತಳ್ಳಿದ ಕಾಂಗ್ರೆಸ್, “ಇದು ಸ್ಪಷ್ಟವಾದ ನಕಲಿ ನೆಪವಲ್ಲದೆ ಬೇರೇನೂ ಅಲ್ಲ, ಇದು ಸ್ಪಷ್ಟವಾಗಿ ಪ್ರಹಸನವಷ್ಟೇ. ಆಗಿರುವ ಹಾನಿಯ ನಿಯಂತ್ರಣದ ಮತ್ತೊಂದು ಪ್ರಯತ್ನವಷ್ಟೇ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...