Homeಚಳವಳಿಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಸಹರಾನ್‌ಪುರ ಮತ್ತು ಕಾನ್ಪುರದ ಬೀದಿಗಳಲ್ಲಿ ಶನಿವಾರ ಬುಲ್ಡೋಜರ್‌ಗಳು ಕಾಣಿಸಿಕೊಂಡಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಿವೆ.

ಬಿಜೆಪಿ ಮುಖಂಡರು ಪ್ರವಾದಿ ನಿಂದನೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಹಲವೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಜಾರ್ಖಂಡ್‌ನ ರಾಂಚಿ ಸೇರಿದಂತೆ ಕೆಲವಡೆ ಹಿಂಸಾಚಾರ ನಡೆದಿದೆ. ಉತ್ತರ ಪ್ರದೇಶ ಸಹರಾನ್‌ಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡ ಬೆನ್ನಲ್ಲೆ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಬುಲ್ಡೋಜರ್ ಹರಿಸುತ್ತಿದ್ದಾರೆ. ಈ ಕುರಿತು ಹಲವರು ತೀವ್ರ ವಿರೋಧ ದಾಖಲಿಸಿದ್ದು, ಯಾವ ಕಾನೂನಿನ ಆಧಾರದಲ್ಲಿ ಬುಲ್ಡೋಜರ್‌ಗಳಿಂದ ಮನೆ ಧ್ವಂಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಪೊಲೀಸರು ಮತ್ತು ಮುನ್ಸಿಪಲ್ ಅಧಿಕಾರಿಗಳು ಬುಲ್ಡೋಜರ್‌ ನಿಂದ ಕೆಡವುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ದೃಶ್ಯಗಳನ್ನು ಸ್ವತಃ ಪೊಲಿಸರೆ ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ.
ಸಹರಾನ್‌ಪುರದ ಪೊಲೀಸರು ಭಾರಿ ಪೊಲೀಸ್ ಭದ್ರತೆಯಲ್ಲಿ ಬುಲ್ಡೋಜರ್‌ಗಳೊಂದಿಗೆ, ಮುನ್ಸಿಪಲ್ ತಂಡಗಳೊಂದಿಗೆ ಬಂದು ಎರಡು ಮನೆಗಳನ್ನು ಧ್ವಂಸಗೊಳಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಬಂಧಿಸಲಾದ ಇಬ್ಬರು ಆರೋಪಿಗಳ ಮನೆಗಳ ಭಾಗಗಳನ್ನು ಕೆಡವಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿರುವ ದೃಶ್ಯಗಳಲ್ಲಿ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳಲ್ಲಿ ಪೊಲೀಸರು ಮತ್ತು ಮುನ್ಸಿಪಲ್ ತಂಡಗಳು ಕಾಣಿಸಿಕೊಂಡಿವೆ. ಮನೆಗಳ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಅಕ್ರಮ ನಿರ್ಮಾಣಗಳು ಎಂದು ಪೊಲೀಸರು ಹೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಉತ್ತರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, 200ಕ್ಕೂ ಹೆಚ್ಚು ಜನರ ಬಂಧನ

ಕಾನ್ಪುರದಲ್ಲಿ, ಹಿಂಸಾಚಾರದ ಪ್ರಮುಖ ಆರೋಪಿಯಾಗಿರುವ ಸ್ಥಳೀಯ ನಾಯಕ ಜಾಫರ್ ಹಯಾತ್ ಹಶ್ಮಿಗೆ ಸಂಬಂಧಿಸಿರುವ ಆಸ್ತಿಯನ್ನು ಪೊಲೀಸರು ಇಂದು ನೆಲಸಮಗೊಳಿಸಿ, ಭೂ ಮಾಫಿಯಾಕ್ಕೆ ಸಂಬಧಿಸಿರುವ ವ್ಯಕ್ತಿ ಎಂದು ಕರೆದಿದ್ದಾರೆ.

ಪ್ರಧಾನ ಆರೋಪಿ ಜಾಫರ್ ಹಯಾತ್ ಹಶ್ಮಿಯ ಹತ್ತಿರದ ಸಂಬಂಧಿ ಎನ್ನಲಾದ ಮೊಹಮ್ಮದ್ ಇಶ್ತಿಯಾಕ್ ಎಂಬಾತನ ಒಡೆತನದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಕೆಡವಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ಹೇಳಿದ್ದಾರೆ.

ಇನ್ನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ ಅವರು ಶನಿವಾರ ಬೆಳಗ್ಗೆಯೇ ಎಚ್ಚರಿಕೆ ನೀಡಿ ತಮ್ಮ ಟ್ವಿಟರ್‌ನಲ್ಲಿ ಬುಲ್ಡೋಜರ್‌ನ ಫೋಟೋದೊಂದಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನೆನಪಿಡಿ, ಪ್ರತಿ ಶುಕ್ರವಾರದ ನಂತರ ಶನಿವಾರ ಬರುತ್ತದೆ’ ಎಂದಿದ್ದಾರೆ.

 

ಪ್ರಯಾಗ್‌ರಾಜ್, ಸಹರಾನ್‌ಪುರ, ಬಿಜ್ನೋರ್, ಮೊರಾದಾಬಾದ್, ರಾಂಪುರ ಮತ್ತು ಲಕ್ನೋದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಆರು ಜಿಲ್ಲೆಗಳಿಂದ 227 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು?’: ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಂಡಂ ದಶಗುಣಂ ಬುಲ್ಡೆಜರ್ ಕಾನೂನಿಗೆ ನಮ್ಮ ಬೆಂಬಲ ಇದೆ,ಸಾರ್ವಜನಿಕರ ಆಸ್ತಿ ನಷ್ಟ ಮಾಡೋ ಪ್ರತಿಯೊಬ್ಬರಿಗೂ ದೇಶದಲ್ಲಿ ಈ ಕಾನೂನನ್ನು ಜಾರಿಗೆ ತರಬೇಕು,ಸಾರ್ವಜನಿಕರ ಆಸ್ತಿ ನಷ್ಟ ವನ್ನು ಅವರಿಂದಲೇ ವಸೂಲಿ ಮಾಡಿಸಬೇಕು ಜೈ ಯೋಗಿ ಸರ್ಕಾರ್

  2. ತಪ್ಪು ಮಾಡಿರೋ ಪ್ರತಿಯೊಬ್ಬನ ಮನೆ ಮೇಲೂ ಬುಲ್ದೊಜರ ಹತ್ತಿಸಬೇಕು ತಾಕತ್ತಿದ್ರೆ,, ಮಸೀದಿಗಳ ಮೇಲೆ ಹಲ್ಲೆ ಮಾಡಿರೋರೆಲ್ಲ ದೇಶ ಪ್ರೇಮಿಗಳು ತಮ್ಮ ಹಕ್ಕುಗಳಿಗೆ ಹೋರಾಟ ಮಾಡಿದ್ರೆ ದೇಶ ದ್ರೋಹಿಗಳ…? ಈ ದೇಶ ಯಾರಪ್ಪಂದು ಅಲ್ಲ ಇದು ಎಲ್ಲ ಭಾರತೀಯರಿಗೆ ಸೇರಿದ್ದು ಯಾವೋ 4 ಕೋಮು ಕ್ರಿಮಿಗಳಿಂದ ದೇಶ, ದೇಶದ ಮಾನ, ಹಾಳಾಗತಿದೆ. ಕೋಮುವಾದಿಗಳು ಎಂದೂ ದೇಶಪ್ರೇಮಿಗಳಾಗಲು ಸಧ್ಯವಿಲ್ಲ.. ಪುಟಗೋಸಿನು ಕದ್ದು ತೋಡೋ ಕೋಮುಕ್ರಿಮಿಗಳಿಗೇನು ಗೊತ್ತು ಸೌಹಾರ್ದತೆ, ಶಾಂತಿ, ಈ ದೇಶದ, ನೆಲ, ಜಲದ ಬೆಲೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...