Homeಚಳವಳಿಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಸಹರಾನ್‌ಪುರ ಮತ್ತು ಕಾನ್ಪುರದ ಬೀದಿಗಳಲ್ಲಿ ಶನಿವಾರ ಬುಲ್ಡೋಜರ್‌ಗಳು ಕಾಣಿಸಿಕೊಂಡಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಿವೆ.

ಬಿಜೆಪಿ ಮುಖಂಡರು ಪ್ರವಾದಿ ನಿಂದನೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಹಲವೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಜಾರ್ಖಂಡ್‌ನ ರಾಂಚಿ ಸೇರಿದಂತೆ ಕೆಲವಡೆ ಹಿಂಸಾಚಾರ ನಡೆದಿದೆ. ಉತ್ತರ ಪ್ರದೇಶ ಸಹರಾನ್‌ಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡ ಬೆನ್ನಲ್ಲೆ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಬುಲ್ಡೋಜರ್ ಹರಿಸುತ್ತಿದ್ದಾರೆ. ಈ ಕುರಿತು ಹಲವರು ತೀವ್ರ ವಿರೋಧ ದಾಖಲಿಸಿದ್ದು, ಯಾವ ಕಾನೂನಿನ ಆಧಾರದಲ್ಲಿ ಬುಲ್ಡೋಜರ್‌ಗಳಿಂದ ಮನೆ ಧ್ವಂಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಪೊಲೀಸರು ಮತ್ತು ಮುನ್ಸಿಪಲ್ ಅಧಿಕಾರಿಗಳು ಬುಲ್ಡೋಜರ್‌ ನಿಂದ ಕೆಡವುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ದೃಶ್ಯಗಳನ್ನು ಸ್ವತಃ ಪೊಲಿಸರೆ ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ.
ಸಹರಾನ್‌ಪುರದ ಪೊಲೀಸರು ಭಾರಿ ಪೊಲೀಸ್ ಭದ್ರತೆಯಲ್ಲಿ ಬುಲ್ಡೋಜರ್‌ಗಳೊಂದಿಗೆ, ಮುನ್ಸಿಪಲ್ ತಂಡಗಳೊಂದಿಗೆ ಬಂದು ಎರಡು ಮನೆಗಳನ್ನು ಧ್ವಂಸಗೊಳಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಬಂಧಿಸಲಾದ ಇಬ್ಬರು ಆರೋಪಿಗಳ ಮನೆಗಳ ಭಾಗಗಳನ್ನು ಕೆಡವಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿರುವ ದೃಶ್ಯಗಳಲ್ಲಿ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳಲ್ಲಿ ಪೊಲೀಸರು ಮತ್ತು ಮುನ್ಸಿಪಲ್ ತಂಡಗಳು ಕಾಣಿಸಿಕೊಂಡಿವೆ. ಮನೆಗಳ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಅಕ್ರಮ ನಿರ್ಮಾಣಗಳು ಎಂದು ಪೊಲೀಸರು ಹೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಉತ್ತರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, 200ಕ್ಕೂ ಹೆಚ್ಚು ಜನರ ಬಂಧನ

ಕಾನ್ಪುರದಲ್ಲಿ, ಹಿಂಸಾಚಾರದ ಪ್ರಮುಖ ಆರೋಪಿಯಾಗಿರುವ ಸ್ಥಳೀಯ ನಾಯಕ ಜಾಫರ್ ಹಯಾತ್ ಹಶ್ಮಿಗೆ ಸಂಬಂಧಿಸಿರುವ ಆಸ್ತಿಯನ್ನು ಪೊಲೀಸರು ಇಂದು ನೆಲಸಮಗೊಳಿಸಿ, ಭೂ ಮಾಫಿಯಾಕ್ಕೆ ಸಂಬಧಿಸಿರುವ ವ್ಯಕ್ತಿ ಎಂದು ಕರೆದಿದ್ದಾರೆ.

ಪ್ರಧಾನ ಆರೋಪಿ ಜಾಫರ್ ಹಯಾತ್ ಹಶ್ಮಿಯ ಹತ್ತಿರದ ಸಂಬಂಧಿ ಎನ್ನಲಾದ ಮೊಹಮ್ಮದ್ ಇಶ್ತಿಯಾಕ್ ಎಂಬಾತನ ಒಡೆತನದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಕೆಡವಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ಹೇಳಿದ್ದಾರೆ.

ಇನ್ನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ ಅವರು ಶನಿವಾರ ಬೆಳಗ್ಗೆಯೇ ಎಚ್ಚರಿಕೆ ನೀಡಿ ತಮ್ಮ ಟ್ವಿಟರ್‌ನಲ್ಲಿ ಬುಲ್ಡೋಜರ್‌ನ ಫೋಟೋದೊಂದಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನೆನಪಿಡಿ, ಪ್ರತಿ ಶುಕ್ರವಾರದ ನಂತರ ಶನಿವಾರ ಬರುತ್ತದೆ’ ಎಂದಿದ್ದಾರೆ.

 

ಪ್ರಯಾಗ್‌ರಾಜ್, ಸಹರಾನ್‌ಪುರ, ಬಿಜ್ನೋರ್, ಮೊರಾದಾಬಾದ್, ರಾಂಪುರ ಮತ್ತು ಲಕ್ನೋದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಆರು ಜಿಲ್ಲೆಗಳಿಂದ 227 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು?’: ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಂಡಂ ದಶಗುಣಂ ಬುಲ್ಡೆಜರ್ ಕಾನೂನಿಗೆ ನಮ್ಮ ಬೆಂಬಲ ಇದೆ,ಸಾರ್ವಜನಿಕರ ಆಸ್ತಿ ನಷ್ಟ ಮಾಡೋ ಪ್ರತಿಯೊಬ್ಬರಿಗೂ ದೇಶದಲ್ಲಿ ಈ ಕಾನೂನನ್ನು ಜಾರಿಗೆ ತರಬೇಕು,ಸಾರ್ವಜನಿಕರ ಆಸ್ತಿ ನಷ್ಟ ವನ್ನು ಅವರಿಂದಲೇ ವಸೂಲಿ ಮಾಡಿಸಬೇಕು ಜೈ ಯೋಗಿ ಸರ್ಕಾರ್

  2. ತಪ್ಪು ಮಾಡಿರೋ ಪ್ರತಿಯೊಬ್ಬನ ಮನೆ ಮೇಲೂ ಬುಲ್ದೊಜರ ಹತ್ತಿಸಬೇಕು ತಾಕತ್ತಿದ್ರೆ,, ಮಸೀದಿಗಳ ಮೇಲೆ ಹಲ್ಲೆ ಮಾಡಿರೋರೆಲ್ಲ ದೇಶ ಪ್ರೇಮಿಗಳು ತಮ್ಮ ಹಕ್ಕುಗಳಿಗೆ ಹೋರಾಟ ಮಾಡಿದ್ರೆ ದೇಶ ದ್ರೋಹಿಗಳ…? ಈ ದೇಶ ಯಾರಪ್ಪಂದು ಅಲ್ಲ ಇದು ಎಲ್ಲ ಭಾರತೀಯರಿಗೆ ಸೇರಿದ್ದು ಯಾವೋ 4 ಕೋಮು ಕ್ರಿಮಿಗಳಿಂದ ದೇಶ, ದೇಶದ ಮಾನ, ಹಾಳಾಗತಿದೆ. ಕೋಮುವಾದಿಗಳು ಎಂದೂ ದೇಶಪ್ರೇಮಿಗಳಾಗಲು ಸಧ್ಯವಿಲ್ಲ.. ಪುಟಗೋಸಿನು ಕದ್ದು ತೋಡೋ ಕೋಮುಕ್ರಿಮಿಗಳಿಗೇನು ಗೊತ್ತು ಸೌಹಾರ್ದತೆ, ಶಾಂತಿ, ಈ ದೇಶದ, ನೆಲ, ಜಲದ ಬೆಲೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...