Homeಚಳವಳಿಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಸಹರಾನ್‌ಪುರ ಮತ್ತು ಕಾನ್ಪುರದ ಬೀದಿಗಳಲ್ಲಿ ಶನಿವಾರ ಬುಲ್ಡೋಜರ್‌ಗಳು ಕಾಣಿಸಿಕೊಂಡಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಿವೆ.

ಬಿಜೆಪಿ ಮುಖಂಡರು ಪ್ರವಾದಿ ನಿಂದನೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಹಲವೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಜಾರ್ಖಂಡ್‌ನ ರಾಂಚಿ ಸೇರಿದಂತೆ ಕೆಲವಡೆ ಹಿಂಸಾಚಾರ ನಡೆದಿದೆ. ಉತ್ತರ ಪ್ರದೇಶ ಸಹರಾನ್‌ಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡ ಬೆನ್ನಲ್ಲೆ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಬುಲ್ಡೋಜರ್ ಹರಿಸುತ್ತಿದ್ದಾರೆ. ಈ ಕುರಿತು ಹಲವರು ತೀವ್ರ ವಿರೋಧ ದಾಖಲಿಸಿದ್ದು, ಯಾವ ಕಾನೂನಿನ ಆಧಾರದಲ್ಲಿ ಬುಲ್ಡೋಜರ್‌ಗಳಿಂದ ಮನೆ ಧ್ವಂಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಪೊಲೀಸರು ಮತ್ತು ಮುನ್ಸಿಪಲ್ ಅಧಿಕಾರಿಗಳು ಬುಲ್ಡೋಜರ್‌ ನಿಂದ ಕೆಡವುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ದೃಶ್ಯಗಳನ್ನು ಸ್ವತಃ ಪೊಲಿಸರೆ ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ.
ಸಹರಾನ್‌ಪುರದ ಪೊಲೀಸರು ಭಾರಿ ಪೊಲೀಸ್ ಭದ್ರತೆಯಲ್ಲಿ ಬುಲ್ಡೋಜರ್‌ಗಳೊಂದಿಗೆ, ಮುನ್ಸಿಪಲ್ ತಂಡಗಳೊಂದಿಗೆ ಬಂದು ಎರಡು ಮನೆಗಳನ್ನು ಧ್ವಂಸಗೊಳಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಬಂಧಿಸಲಾದ ಇಬ್ಬರು ಆರೋಪಿಗಳ ಮನೆಗಳ ಭಾಗಗಳನ್ನು ಕೆಡವಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿರುವ ದೃಶ್ಯಗಳಲ್ಲಿ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳಲ್ಲಿ ಪೊಲೀಸರು ಮತ್ತು ಮುನ್ಸಿಪಲ್ ತಂಡಗಳು ಕಾಣಿಸಿಕೊಂಡಿವೆ. ಮನೆಗಳ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಅಕ್ರಮ ನಿರ್ಮಾಣಗಳು ಎಂದು ಪೊಲೀಸರು ಹೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಉತ್ತರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, 200ಕ್ಕೂ ಹೆಚ್ಚು ಜನರ ಬಂಧನ

ಕಾನ್ಪುರದಲ್ಲಿ, ಹಿಂಸಾಚಾರದ ಪ್ರಮುಖ ಆರೋಪಿಯಾಗಿರುವ ಸ್ಥಳೀಯ ನಾಯಕ ಜಾಫರ್ ಹಯಾತ್ ಹಶ್ಮಿಗೆ ಸಂಬಂಧಿಸಿರುವ ಆಸ್ತಿಯನ್ನು ಪೊಲೀಸರು ಇಂದು ನೆಲಸಮಗೊಳಿಸಿ, ಭೂ ಮಾಫಿಯಾಕ್ಕೆ ಸಂಬಧಿಸಿರುವ ವ್ಯಕ್ತಿ ಎಂದು ಕರೆದಿದ್ದಾರೆ.

ಪ್ರಧಾನ ಆರೋಪಿ ಜಾಫರ್ ಹಯಾತ್ ಹಶ್ಮಿಯ ಹತ್ತಿರದ ಸಂಬಂಧಿ ಎನ್ನಲಾದ ಮೊಹಮ್ಮದ್ ಇಶ್ತಿಯಾಕ್ ಎಂಬಾತನ ಒಡೆತನದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಕೆಡವಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ಹೇಳಿದ್ದಾರೆ.

ಇನ್ನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ ಅವರು ಶನಿವಾರ ಬೆಳಗ್ಗೆಯೇ ಎಚ್ಚರಿಕೆ ನೀಡಿ ತಮ್ಮ ಟ್ವಿಟರ್‌ನಲ್ಲಿ ಬುಲ್ಡೋಜರ್‌ನ ಫೋಟೋದೊಂದಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನೆನಪಿಡಿ, ಪ್ರತಿ ಶುಕ್ರವಾರದ ನಂತರ ಶನಿವಾರ ಬರುತ್ತದೆ’ ಎಂದಿದ್ದಾರೆ.

 

ಪ್ರಯಾಗ್‌ರಾಜ್, ಸಹರಾನ್‌ಪುರ, ಬಿಜ್ನೋರ್, ಮೊರಾದಾಬಾದ್, ರಾಂಪುರ ಮತ್ತು ಲಕ್ನೋದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಆರು ಜಿಲ್ಲೆಗಳಿಂದ 227 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು?’: ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಂಡಂ ದಶಗುಣಂ ಬುಲ್ಡೆಜರ್ ಕಾನೂನಿಗೆ ನಮ್ಮ ಬೆಂಬಲ ಇದೆ,ಸಾರ್ವಜನಿಕರ ಆಸ್ತಿ ನಷ್ಟ ಮಾಡೋ ಪ್ರತಿಯೊಬ್ಬರಿಗೂ ದೇಶದಲ್ಲಿ ಈ ಕಾನೂನನ್ನು ಜಾರಿಗೆ ತರಬೇಕು,ಸಾರ್ವಜನಿಕರ ಆಸ್ತಿ ನಷ್ಟ ವನ್ನು ಅವರಿಂದಲೇ ವಸೂಲಿ ಮಾಡಿಸಬೇಕು ಜೈ ಯೋಗಿ ಸರ್ಕಾರ್

  2. ತಪ್ಪು ಮಾಡಿರೋ ಪ್ರತಿಯೊಬ್ಬನ ಮನೆ ಮೇಲೂ ಬುಲ್ದೊಜರ ಹತ್ತಿಸಬೇಕು ತಾಕತ್ತಿದ್ರೆ,, ಮಸೀದಿಗಳ ಮೇಲೆ ಹಲ್ಲೆ ಮಾಡಿರೋರೆಲ್ಲ ದೇಶ ಪ್ರೇಮಿಗಳು ತಮ್ಮ ಹಕ್ಕುಗಳಿಗೆ ಹೋರಾಟ ಮಾಡಿದ್ರೆ ದೇಶ ದ್ರೋಹಿಗಳ…? ಈ ದೇಶ ಯಾರಪ್ಪಂದು ಅಲ್ಲ ಇದು ಎಲ್ಲ ಭಾರತೀಯರಿಗೆ ಸೇರಿದ್ದು ಯಾವೋ 4 ಕೋಮು ಕ್ರಿಮಿಗಳಿಂದ ದೇಶ, ದೇಶದ ಮಾನ, ಹಾಳಾಗತಿದೆ. ಕೋಮುವಾದಿಗಳು ಎಂದೂ ದೇಶಪ್ರೇಮಿಗಳಾಗಲು ಸಧ್ಯವಿಲ್ಲ.. ಪುಟಗೋಸಿನು ಕದ್ದು ತೋಡೋ ಕೋಮುಕ್ರಿಮಿಗಳಿಗೇನು ಗೊತ್ತು ಸೌಹಾರ್ದತೆ, ಶಾಂತಿ, ಈ ದೇಶದ, ನೆಲ, ಜಲದ ಬೆಲೆ.

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...