Homeಚಳವಳಿಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಸಹರಾನ್‌ಪುರ ಮತ್ತು ಕಾನ್ಪುರದ ಬೀದಿಗಳಲ್ಲಿ ಶನಿವಾರ ಬುಲ್ಡೋಜರ್‌ಗಳು ಕಾಣಿಸಿಕೊಂಡಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಿವೆ.

ಬಿಜೆಪಿ ಮುಖಂಡರು ಪ್ರವಾದಿ ನಿಂದನೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಹಲವೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಜಾರ್ಖಂಡ್‌ನ ರಾಂಚಿ ಸೇರಿದಂತೆ ಕೆಲವಡೆ ಹಿಂಸಾಚಾರ ನಡೆದಿದೆ. ಉತ್ತರ ಪ್ರದೇಶ ಸಹರಾನ್‌ಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡ ಬೆನ್ನಲ್ಲೆ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಬುಲ್ಡೋಜರ್ ಹರಿಸುತ್ತಿದ್ದಾರೆ. ಈ ಕುರಿತು ಹಲವರು ತೀವ್ರ ವಿರೋಧ ದಾಖಲಿಸಿದ್ದು, ಯಾವ ಕಾನೂನಿನ ಆಧಾರದಲ್ಲಿ ಬುಲ್ಡೋಜರ್‌ಗಳಿಂದ ಮನೆ ಧ್ವಂಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಪೊಲೀಸರು ಮತ್ತು ಮುನ್ಸಿಪಲ್ ಅಧಿಕಾರಿಗಳು ಬುಲ್ಡೋಜರ್‌ ನಿಂದ ಕೆಡವುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ದೃಶ್ಯಗಳನ್ನು ಸ್ವತಃ ಪೊಲಿಸರೆ ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ.
ಸಹರಾನ್‌ಪುರದ ಪೊಲೀಸರು ಭಾರಿ ಪೊಲೀಸ್ ಭದ್ರತೆಯಲ್ಲಿ ಬುಲ್ಡೋಜರ್‌ಗಳೊಂದಿಗೆ, ಮುನ್ಸಿಪಲ್ ತಂಡಗಳೊಂದಿಗೆ ಬಂದು ಎರಡು ಮನೆಗಳನ್ನು ಧ್ವಂಸಗೊಳಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಬಂಧಿಸಲಾದ ಇಬ್ಬರು ಆರೋಪಿಗಳ ಮನೆಗಳ ಭಾಗಗಳನ್ನು ಕೆಡವಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿರುವ ದೃಶ್ಯಗಳಲ್ಲಿ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳಲ್ಲಿ ಪೊಲೀಸರು ಮತ್ತು ಮುನ್ಸಿಪಲ್ ತಂಡಗಳು ಕಾಣಿಸಿಕೊಂಡಿವೆ. ಮನೆಗಳ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಅಕ್ರಮ ನಿರ್ಮಾಣಗಳು ಎಂದು ಪೊಲೀಸರು ಹೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಉತ್ತರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, 200ಕ್ಕೂ ಹೆಚ್ಚು ಜನರ ಬಂಧನ

ಕಾನ್ಪುರದಲ್ಲಿ, ಹಿಂಸಾಚಾರದ ಪ್ರಮುಖ ಆರೋಪಿಯಾಗಿರುವ ಸ್ಥಳೀಯ ನಾಯಕ ಜಾಫರ್ ಹಯಾತ್ ಹಶ್ಮಿಗೆ ಸಂಬಂಧಿಸಿರುವ ಆಸ್ತಿಯನ್ನು ಪೊಲೀಸರು ಇಂದು ನೆಲಸಮಗೊಳಿಸಿ, ಭೂ ಮಾಫಿಯಾಕ್ಕೆ ಸಂಬಧಿಸಿರುವ ವ್ಯಕ್ತಿ ಎಂದು ಕರೆದಿದ್ದಾರೆ.

ಪ್ರಧಾನ ಆರೋಪಿ ಜಾಫರ್ ಹಯಾತ್ ಹಶ್ಮಿಯ ಹತ್ತಿರದ ಸಂಬಂಧಿ ಎನ್ನಲಾದ ಮೊಹಮ್ಮದ್ ಇಶ್ತಿಯಾಕ್ ಎಂಬಾತನ ಒಡೆತನದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಕೆಡವಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ಹೇಳಿದ್ದಾರೆ.

ಇನ್ನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ ಅವರು ಶನಿವಾರ ಬೆಳಗ್ಗೆಯೇ ಎಚ್ಚರಿಕೆ ನೀಡಿ ತಮ್ಮ ಟ್ವಿಟರ್‌ನಲ್ಲಿ ಬುಲ್ಡೋಜರ್‌ನ ಫೋಟೋದೊಂದಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನೆನಪಿಡಿ, ಪ್ರತಿ ಶುಕ್ರವಾರದ ನಂತರ ಶನಿವಾರ ಬರುತ್ತದೆ’ ಎಂದಿದ್ದಾರೆ.

 

ಪ್ರಯಾಗ್‌ರಾಜ್, ಸಹರಾನ್‌ಪುರ, ಬಿಜ್ನೋರ್, ಮೊರಾದಾಬಾದ್, ರಾಂಪುರ ಮತ್ತು ಲಕ್ನೋದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಆರು ಜಿಲ್ಲೆಗಳಿಂದ 227 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು?’: ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಂಡಂ ದಶಗುಣಂ ಬುಲ್ಡೆಜರ್ ಕಾನೂನಿಗೆ ನಮ್ಮ ಬೆಂಬಲ ಇದೆ,ಸಾರ್ವಜನಿಕರ ಆಸ್ತಿ ನಷ್ಟ ಮಾಡೋ ಪ್ರತಿಯೊಬ್ಬರಿಗೂ ದೇಶದಲ್ಲಿ ಈ ಕಾನೂನನ್ನು ಜಾರಿಗೆ ತರಬೇಕು,ಸಾರ್ವಜನಿಕರ ಆಸ್ತಿ ನಷ್ಟ ವನ್ನು ಅವರಿಂದಲೇ ವಸೂಲಿ ಮಾಡಿಸಬೇಕು ಜೈ ಯೋಗಿ ಸರ್ಕಾರ್

  2. ತಪ್ಪು ಮಾಡಿರೋ ಪ್ರತಿಯೊಬ್ಬನ ಮನೆ ಮೇಲೂ ಬುಲ್ದೊಜರ ಹತ್ತಿಸಬೇಕು ತಾಕತ್ತಿದ್ರೆ,, ಮಸೀದಿಗಳ ಮೇಲೆ ಹಲ್ಲೆ ಮಾಡಿರೋರೆಲ್ಲ ದೇಶ ಪ್ರೇಮಿಗಳು ತಮ್ಮ ಹಕ್ಕುಗಳಿಗೆ ಹೋರಾಟ ಮಾಡಿದ್ರೆ ದೇಶ ದ್ರೋಹಿಗಳ…? ಈ ದೇಶ ಯಾರಪ್ಪಂದು ಅಲ್ಲ ಇದು ಎಲ್ಲ ಭಾರತೀಯರಿಗೆ ಸೇರಿದ್ದು ಯಾವೋ 4 ಕೋಮು ಕ್ರಿಮಿಗಳಿಂದ ದೇಶ, ದೇಶದ ಮಾನ, ಹಾಳಾಗತಿದೆ. ಕೋಮುವಾದಿಗಳು ಎಂದೂ ದೇಶಪ್ರೇಮಿಗಳಾಗಲು ಸಧ್ಯವಿಲ್ಲ.. ಪುಟಗೋಸಿನು ಕದ್ದು ತೋಡೋ ಕೋಮುಕ್ರಿಮಿಗಳಿಗೇನು ಗೊತ್ತು ಸೌಹಾರ್ದತೆ, ಶಾಂತಿ, ಈ ದೇಶದ, ನೆಲ, ಜಲದ ಬೆಲೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...