Homeಚಳವಳಿಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಸಹರಾನ್‌ಪುರ ಮತ್ತು ಕಾನ್ಪುರದ ಬೀದಿಗಳಲ್ಲಿ ಶನಿವಾರ ಬುಲ್ಡೋಜರ್‌ಗಳು ಕಾಣಿಸಿಕೊಂಡಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಿವೆ.

ಬಿಜೆಪಿ ಮುಖಂಡರು ಪ್ರವಾದಿ ನಿಂದನೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಹಲವೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಜಾರ್ಖಂಡ್‌ನ ರಾಂಚಿ ಸೇರಿದಂತೆ ಕೆಲವಡೆ ಹಿಂಸಾಚಾರ ನಡೆದಿದೆ. ಉತ್ತರ ಪ್ರದೇಶ ಸಹರಾನ್‌ಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡ ಬೆನ್ನಲ್ಲೆ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಬುಲ್ಡೋಜರ್ ಹರಿಸುತ್ತಿದ್ದಾರೆ. ಈ ಕುರಿತು ಹಲವರು ತೀವ್ರ ವಿರೋಧ ದಾಖಲಿಸಿದ್ದು, ಯಾವ ಕಾನೂನಿನ ಆಧಾರದಲ್ಲಿ ಬುಲ್ಡೋಜರ್‌ಗಳಿಂದ ಮನೆ ಧ್ವಂಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಪೊಲೀಸರು ಮತ್ತು ಮುನ್ಸಿಪಲ್ ಅಧಿಕಾರಿಗಳು ಬುಲ್ಡೋಜರ್‌ ನಿಂದ ಕೆಡವುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ದೃಶ್ಯಗಳನ್ನು ಸ್ವತಃ ಪೊಲಿಸರೆ ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ.
ಸಹರಾನ್‌ಪುರದ ಪೊಲೀಸರು ಭಾರಿ ಪೊಲೀಸ್ ಭದ್ರತೆಯಲ್ಲಿ ಬುಲ್ಡೋಜರ್‌ಗಳೊಂದಿಗೆ, ಮುನ್ಸಿಪಲ್ ತಂಡಗಳೊಂದಿಗೆ ಬಂದು ಎರಡು ಮನೆಗಳನ್ನು ಧ್ವಂಸಗೊಳಿಸಿದ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಬಂಧಿಸಲಾದ ಇಬ್ಬರು ಆರೋಪಿಗಳ ಮನೆಗಳ ಭಾಗಗಳನ್ನು ಕೆಡವಿದ್ದಾರೆ. ಪ್ರತಿಭಟನೆ ಹಿನ್ನೆಲೆ ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿರುವ ದೃಶ್ಯಗಳಲ್ಲಿ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳಲ್ಲಿ ಪೊಲೀಸರು ಮತ್ತು ಮುನ್ಸಿಪಲ್ ತಂಡಗಳು ಕಾಣಿಸಿಕೊಂಡಿವೆ. ಮನೆಗಳ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಅಕ್ರಮ ನಿರ್ಮಾಣಗಳು ಎಂದು ಪೊಲೀಸರು ಹೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಉತ್ತರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, 200ಕ್ಕೂ ಹೆಚ್ಚು ಜನರ ಬಂಧನ

ಕಾನ್ಪುರದಲ್ಲಿ, ಹಿಂಸಾಚಾರದ ಪ್ರಮುಖ ಆರೋಪಿಯಾಗಿರುವ ಸ್ಥಳೀಯ ನಾಯಕ ಜಾಫರ್ ಹಯಾತ್ ಹಶ್ಮಿಗೆ ಸಂಬಂಧಿಸಿರುವ ಆಸ್ತಿಯನ್ನು ಪೊಲೀಸರು ಇಂದು ನೆಲಸಮಗೊಳಿಸಿ, ಭೂ ಮಾಫಿಯಾಕ್ಕೆ ಸಂಬಧಿಸಿರುವ ವ್ಯಕ್ತಿ ಎಂದು ಕರೆದಿದ್ದಾರೆ.

ಪ್ರಧಾನ ಆರೋಪಿ ಜಾಫರ್ ಹಯಾತ್ ಹಶ್ಮಿಯ ಹತ್ತಿರದ ಸಂಬಂಧಿ ಎನ್ನಲಾದ ಮೊಹಮ್ಮದ್ ಇಶ್ತಿಯಾಕ್ ಎಂಬಾತನ ಒಡೆತನದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಕೆಡವಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ಹೇಳಿದ್ದಾರೆ.

ಇನ್ನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ ಅವರು ಶನಿವಾರ ಬೆಳಗ್ಗೆಯೇ ಎಚ್ಚರಿಕೆ ನೀಡಿ ತಮ್ಮ ಟ್ವಿಟರ್‌ನಲ್ಲಿ ಬುಲ್ಡೋಜರ್‌ನ ಫೋಟೋದೊಂದಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನೆನಪಿಡಿ, ಪ್ರತಿ ಶುಕ್ರವಾರದ ನಂತರ ಶನಿವಾರ ಬರುತ್ತದೆ’ ಎಂದಿದ್ದಾರೆ.

 

ಪ್ರಯಾಗ್‌ರಾಜ್, ಸಹರಾನ್‌ಪುರ, ಬಿಜ್ನೋರ್, ಮೊರಾದಾಬಾದ್, ರಾಂಪುರ ಮತ್ತು ಲಕ್ನೋದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಆರು ಜಿಲ್ಲೆಗಳಿಂದ 227 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿ ಮಾಡುವ ಪಾಪಗಳಿಗೆ ಜನರು ಏಕೆ ನರಳಬೇಕು?’: ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಂಡಂ ದಶಗುಣಂ ಬುಲ್ಡೆಜರ್ ಕಾನೂನಿಗೆ ನಮ್ಮ ಬೆಂಬಲ ಇದೆ,ಸಾರ್ವಜನಿಕರ ಆಸ್ತಿ ನಷ್ಟ ಮಾಡೋ ಪ್ರತಿಯೊಬ್ಬರಿಗೂ ದೇಶದಲ್ಲಿ ಈ ಕಾನೂನನ್ನು ಜಾರಿಗೆ ತರಬೇಕು,ಸಾರ್ವಜನಿಕರ ಆಸ್ತಿ ನಷ್ಟ ವನ್ನು ಅವರಿಂದಲೇ ವಸೂಲಿ ಮಾಡಿಸಬೇಕು ಜೈ ಯೋಗಿ ಸರ್ಕಾರ್

  2. ತಪ್ಪು ಮಾಡಿರೋ ಪ್ರತಿಯೊಬ್ಬನ ಮನೆ ಮೇಲೂ ಬುಲ್ದೊಜರ ಹತ್ತಿಸಬೇಕು ತಾಕತ್ತಿದ್ರೆ,, ಮಸೀದಿಗಳ ಮೇಲೆ ಹಲ್ಲೆ ಮಾಡಿರೋರೆಲ್ಲ ದೇಶ ಪ್ರೇಮಿಗಳು ತಮ್ಮ ಹಕ್ಕುಗಳಿಗೆ ಹೋರಾಟ ಮಾಡಿದ್ರೆ ದೇಶ ದ್ರೋಹಿಗಳ…? ಈ ದೇಶ ಯಾರಪ್ಪಂದು ಅಲ್ಲ ಇದು ಎಲ್ಲ ಭಾರತೀಯರಿಗೆ ಸೇರಿದ್ದು ಯಾವೋ 4 ಕೋಮು ಕ್ರಿಮಿಗಳಿಂದ ದೇಶ, ದೇಶದ ಮಾನ, ಹಾಳಾಗತಿದೆ. ಕೋಮುವಾದಿಗಳು ಎಂದೂ ದೇಶಪ್ರೇಮಿಗಳಾಗಲು ಸಧ್ಯವಿಲ್ಲ.. ಪುಟಗೋಸಿನು ಕದ್ದು ತೋಡೋ ಕೋಮುಕ್ರಿಮಿಗಳಿಗೇನು ಗೊತ್ತು ಸೌಹಾರ್ದತೆ, ಶಾಂತಿ, ಈ ದೇಶದ, ನೆಲ, ಜಲದ ಬೆಲೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...