Homeಕರ್ನಾಟಕಆರೋಗ್ಯ ಇಲಾಖೆಗೆ ಬೇಕಾದ ಅನುದಾನವನ್ನು SCSP, TSP ನಿಧಿಯಿಂದ ಪಡೆಯಲು ಪ್ರಸ್ತಾಪ: ತೀವ್ರ ವಿರೋಧ

ಆರೋಗ್ಯ ಇಲಾಖೆಗೆ ಬೇಕಾದ ಅನುದಾನವನ್ನು SCSP, TSP ನಿಧಿಯಿಂದ ಪಡೆಯಲು ಪ್ರಸ್ತಾಪ: ತೀವ್ರ ವಿರೋಧ

ಎಸ್‌ಇಪಿ ಟಿಎಸ್‌ಪಿ ಕಾಯ್ದೆಯಲ್ಲಿನ 7ಡಿ ಸೆಕ್ಷನ್ ಬಳಸಿ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಈ 7ಡಿ ರದ್ದುಪಡಿಸಬೇಕೆಂಬುದು ನಮ್ಮ ಆಗ್ರಹವಾಗಿದೆ - ಮಾವಳ್ಳಿ ಶಂಕರ್

- Advertisement -
- Advertisement -

ನೂತನ ಕಾಂಗ್ರೆಸ್ ಸರ್ಕಾರವು ಆರೋಗ್ಯ ಇಲಾಖೆಯನ್ನು ಬಲವರ್ಧನೆಗೊಳಿಸಲು ಮುಂದಾಗಿದೆ. ಅದಕ್ಕಾಗಿ ಹೆಚ್ಚುವರಿಯಾಗಿ 1,118 ರೂಗಳ ಅನುದಾನ ಅಗತ್ಯವಿದ್ದು, ಅದನ್ನು SCSP, TSP ನಿಧಿಯಿಂದ ಪಡೆಯಲು ಪ್ರಸ್ತಾಪಿಸಲಾಗಿದೆ ಎಂದು ದಿ.ಫೈಲ್ ವಿಶೇಷ ವರದಿ ಪ್ರಕಟಿಸಿದೆ.

ಮೂರು ಹಂತದಲ್ಲಿ ಆರೋಗ್ಯ ಇಲಾಖೆಯನ್ನು ಬಲವರ್ಧನೆಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ. ಅದೇ ರೀತಿ ಪ್ರಣಾಳಿಕೆಯಲ್ಲಿ ಘೋಷಿಸಿರುವ ಕೆಲ ಕಾರ್ಯಕ್ರಮಗಳಿಗೆ ಹೆಚ್ಚುವರಿ ರಾಜ್ಯ ಅನುದಾನದ ಅವಶ್ಯಕತೆ ಇಲ್ಲ ಎಂದು ಹೇಳಿರುವ ಆರೋಗ್ಯ ಇಲಾಖೆಯು, ಈ ಕಾರ್ಯಕ್ರಮಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆ ಮತ್ತು 15ನೇ ಹಣಕಾಸು ಆಯೋಗದಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.

ಜೂನ್ 13 ರಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆಯು 2023-24ನೇ ಸಾಲಿನ ಆರ್ಥಿಕ ವರ್ಷಕ್ಕೆ ಅವಶ್ಯವಿರುವ ಮತ್ತು ಹೆಚ್ಚುವರಿ ಅನುದಾನದ ವಿವರಗಳ ಪ್ರಾತ್ಯಕ್ಷಿಕೆಯನ್ನು ಒದಗಿಸಿದೆ. ಇದರ ಪ್ರತಿಯನ್ನು ‘ದಿ ಫೈಲ್‌’ ಪ್ರಕಟಿಸಿದ್ದು, ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನ ಹೆಚ್ಚಳಕ್ಕೆ 430 ಕೋಟಿ ರೂ, ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ 172 ಕೋಟಿ ರೂ, ಡಾ ಪುನೀತ್‌ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಗೆ 13.02 ಕೋಟಿ ರೂ ಸೇರಿದಂತೆ ಇದುವರೆಗೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯಲ್ಲಿ ಒಟ್ಟಾರೆ 1,013.85 ಕೋಟಿ ರೂ ಅನುದಾನ ಲಭ್ಯವಿದೆ ಎಂದು ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 50 ಸಂಚಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಎಸ್‌ಸಿಸಿಪಿ ಮತ್ತು ಎಸ್‌ಟಿಪಿ ಅನುದಾನದಡಿಯಲ್ಲಿ 34 ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿಯಲ್ಲಿ ಕಾರ್ಯಗತಗೊಳಿಸಲು ಉದ್ದೇಶಿಸಿದೆ. ಪ್ರತೀ ಸಂಚಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ವಹಣೆಗೆ ಪ್ರತಿ ತಿಂಗಳಿಗೆ 2.82 ಲಕ್ಷ ರು.ನಂತೆ ಒಟ್ಟಾರೆ ವಾರ್ಷಿಕವಾಗಿ 28.42 ಕೋಟಿ ರು.ಗಳನ್ನು ಎಸ್‌ಸಿಎಸ್‌ಪಿ ಟಿಎಸ್‌ಪಿ ಅನುದಾನಗಳಡಿಯಲ್ಲಿ ಭರಿಸಲಾಗುತ್ತದೆ. ಇದಕ್ಕಾಗಿ ಹೆಚ್ಚುವರಿ ಅನುದಾನದ ಅವಶ್ಯವಿರುವುದಿಲ್ಲ ಎಂದು ವಿವರಿಸಲಾಗಿದೆ.

SCSP, TSP ಹಣ ದುರ್ಬಳಕೆ ನಿಲ್ಲಲಿ: ಮಾವಳ್ಳಿ ಶಂಕರ್ ಆಗ್ರಹ

ಎಸ್‌ಸಿಎಸ್‌ಪಿ ಟಿಎಸ್‌ಪಿ ಹಣವನ್ನು ಯಾವುದೇ ಕಾರಣಕ್ಕೂ ಇತರೆ ಕೆಲಸಗಳಿಗೆ ಬಳಸಬಾರದು. ಕಾನೂನಿನಲ್ಲಿ ಏನಿದೆಯೋ ಅದನ್ನು ಪಾಲಿಸಬೇಕು. ದಲಿತರ ಕಲ್ಯಾಣಕ್ಕಾಗಿ ಮಾತ್ರ ಆ ಹಣ ಬಳಕೆಯಾಗಬೇಕು. ಇಲ್ಲದಿದ್ದಲ್ಲಿ ದಲಿತರಿಗೆ ಮಾಡುವ ಮಹಾ ಅನ್ಯಾಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಮುಖಂಡರಾದ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಸಿ, ಎಸ್‌ಟಿ ಡೆವೆಲೆವ್‌ಮೆಂಟ್‌ ಕಾರ್ಪೋರೇಷನ್ ಬೋರ್ಡ್‌ಗಳಲ್ಲಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅವರ್ಯಾರಿಗೆ ಈ ಹಣ ಬಳಕೆಯಾಗಿಲ್ಲ. ಸ್ವ ಉದ್ಯೋಗ ಮಾಡುವವರಿಗೆ ಈ ನಿಧಿಯಿಂದ ನೇರ ಸಾಲ ಕೊಡಬಹುದಲ್ಲವೇ? ಈ ಹಣವನ್ನು ಬಳಸಬಹುದಲ್ಲವೇ? ಅದನ್ನು ಬಿಟ್ಟು ಬ್ಯಾಂಕಿನ ಬಳಿ ಏಕೆ ಕಳಿಸುತ್ತಾರೆ? ಉತ್ತರ ಕರ್ನಾಟಕದ ದಲಿತ ಯುವಕರು ಉದ್ಯೋಗ ಅರಸಿ ಬೆಂಗಳೂರಿಗೆ ಬಂದು ಅಲೆಯುತ್ತಿದ್ದಾರೆ. ಇದೆಲ್ಲವೂ ಸರ್ಕಾರದ ಗಮನಕ್ಕಿಲ್ಲವೇ ಎಂದು ಪ್ರಶ್ನಿಸಿದರು.

ಕಾಯ್ದೆಯು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಮಾತ್ರ ಈ ಹಣವನ್ನು ಬಳಸಬೇಕೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೂ ಕಾಯ್ದೆಯಲ್ಲಿನ 7ಡಿ ಸೆಕ್ಷನ್ ಬಳಸಿ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಈ 7ಡಿ ರದ್ದು ಪಡಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು.

ನಿಧಿಯಲ್ಲಿ ಹಣವಿದೆ ಎಂದು ಪಿಡಬ್ಲೂಡಿ, ನೀರಾವರಿ, ಆರೋಗ್ಯ ಇಲಾಖೆಗೆ ಅನುದಾನ ನೀಡುವುದು ಸರಿಯಲ್ಲ. ಇದನ್ನು ತಡೆಯಲು ಏಕಗವಾಕ್ಷಿ ಏಜೆನ್ಸಿ ಮಾಡಿ ಹಣ ನೇರವಾಗಿ ಅಲ್ಲಿಗೆ ಹೋಗುವಂತೆ ಮಾಡಬೇಕು. ಮಧ್ಯಪ್ರದೇಶ ರಾಜ್ಯದಲ್ಲಿ ಈ ವ್ಯವಸ್ಥೆ ಇದ್ದು, ಅದಕ್ಕಾಗಿ ಒಂದು ಸಚಿವಾಲಯ ಸ್ಥಾಪಿಸಲಾಗಿದೆ. ಈ ಮಾದರಿಯನ್ನು ರಾಜ್ಯದಲ್ಲಿಯೂ ಅಳವಡಿಸಬೇಕು ಎಂದರು.

ಸಿಎಂರವರನ್ನು ಭೇಟಿ ಮಾಡಿ ಮನವಿ ಮಾಡುತ್ತೇವೆ: ಧರ್ಮಸೇನಾ

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಎಸ್‌ಸಿ ವಿಭಾಗದ ಅಧ್ಯಕ್ಷ ಆರ್ ಧರ್ಮಸೇನಾರವರು ಮಾತನಾಡಿ, “ಸಂವಿಧಾನ ಜಾರಿಯಾದಾಗಿನಿಂದಲೂ ಮೀಸಲಾತಿ ಜಾರಿಯಾಗಿದೆ. 2013ರಲ್ಲಿ ಎಸ್‌ಇಪಿ ಟಿಎಸ್‌ಪಿ ಯೋಜನೆ ಜಾರಿಗೆ ಬಂದಿದೆ. ಆದರೂ ಎಲ್ಲಾ ದಲಿತರಿಗೆ ಸರ್ಕಾರದ ಸೌಲಭ್ಯಗಳು ದೊರಕಿಲ್ಲ. ಕೇವಲ 9% ದಲಿತರಿಗೆ ಮಾತ್ರ ಕೆಲ ಯೋಜನೆಗಳು ತಲುಪಿವೆ ಎಂದು ರಾಷ್ಟ್ರೀಯ ಎಸ್‌ಸಿ, ಎಸ್‌ಟಿ ಆಯೋಗ ಹೇಳಿದೆ. ಹೀಗಿರುವಾಗ ಎಸ್‌ಇಪಿ ಟಿಎಸ್‌ಪಿ ನಿಧಿಯನ್ನು ದಲಿತರನ್ನು ಹೊರತುಪಡಿಸಿ ಇತರ ಯೋಜನೆಗಳಿಗೆ ಬಳಸುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ. ಈ ಕುರಿತು ನಮ್ಮ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡುತ್ತೇವೆ” ಎಂದರು.

ಬಿಜೆಪಿ ಸರ್ಕಾರ ಮಾಡಿದ ತಪ್ಪನ್ನು ಕಾಂಗ್ರೆಸ್ ಕೂಡ ಮಾಡಬಾರದು: ಶ್ರೀನಾಥ್ ಪೂಜಾರಿ

ವಕೀಲರು ಮತ್ತು ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ಶ್ರೀನಾಥ್ ಪೂಜಾರಿಯವರು ಮಾತನಾಡಿ, “ಆರೋಗ್ಯ ಇಲಾಖೆ ಅನುದಾನಕ್ಕಾಗಿ ಎಸ್‌ಇಪಿ ಟಿಎಸ್‌ಪಿ ನಿಧಿ ಬಳಸುವುದಾದರೆ, ನಾಳೆ ಎಲ್ಲಾ ಇಲಾಖೆಗಳು ಇದೇ ರೀತಿ ಕೇಳುತ್ತವೆ. ರಸ್ತೆ ಹಾಕಿಸುತ್ತೇವೆ, ಬೋರ್‌ವೆಲ್ ಹಾಕಿಸುತ್ತೇವೆ ಎಂದು ದಲಿತರ ಹಣ ಬಳಸಲಾಗುತ್ತದೆ. ಈ ಕೆಲಸಗಳಿಗೆ ಜನರಲ್ ಫಂಡ್ ಬಳಸಬೇಕೆ ಹೊರತು ಎಸ್‌ಇಪಿ ಟಿಎಸ್‌ಪಿ ನಿಧಿ ಬಳಸುವುದು ತಪ್ಪು. ಈ ಹಣವನ್ನು ದಲಿತ ಯುವಜನರ ಸಬಲೀಕರಣಕ್ಕಾಗಿ ಬಳಸಬೇಕು. ಆರೋಗ್ಯ ಇಲಾಖೆಯಲ್ಲಿಯೂ ದಲಿತರ ಆರೋಗ್ಯ ವೃದ್ದಿಸಲು ಬಳಸಬೇಕು. ಅದನ್ನು ಬಿಟ್ಟು ಬೇರೆ ಕೆಲಸಗಳಿಗೆ ಬಳಸುವುದು ದೊಡ್ಡ ತಪ್ಪು. ಬಿಜೆಪಿ ಸರ್ಕಾರ ಮಾಡಿದ ತಪ್ಪನ್ನು ಕಾಂಗ್ರೆಸ್ ಕೂಡ ಮಾಡಬಾರದು. ಇದನ್ನು ಪಕ್ಷದಲ್ಲಿದ್ದುಕೊಂಡೇ ತೀವ್ರವಾಗಿ ವಿರೋಧಿಸುತ್ತೇವೆ” ಎಂದು ತಿಳಿಸಿದರು.

ದಲಿತರ ಹಣವನ್ನು ದಲಿತರ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು – ಹನುಮೇಶ್ ಗುಂಡೂರು

ಎಸ್‌ಇಪಿ ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಯಾವುದೇ ಕಾರಣಕ್ಕೂ ಆ ನಿಧಿಯನ್ನು ಇತರ ಉದ್ದೇಶಗಳಿಗೆ ಬಳಸಬಾರದು. ಏಕೆಂದರೆ ತಾನು ತಂದ ಕಾನೂನಿಗೆ ತಾನೇ ವಿರುದ್ಧವಾಗಿ ನಡೆದುಕೊಂಡಂತೆ ಆಗುತ್ತದೆ. ಹಾಗಾಗಿ ದಲಿತರ ಹಣವನ್ನು ದಲಿತರ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕೆಂದು ವಕೀಲರಾದ ಹನುಮೇಶ್ ಗುಂಡೂರು ಒತ್ತಾಯಿಸಿದರು.

ಇದನ್ನೂ ಓದಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...