Homeಕರ್ನಾಟಕಆರೋಗ್ಯ ಇಲಾಖೆಗೆ ಬೇಕಾದ ಅನುದಾನವನ್ನು SCSP, TSP ನಿಧಿಯಿಂದ ಪಡೆಯಲು ಪ್ರಸ್ತಾಪ: ತೀವ್ರ ವಿರೋಧ

ಆರೋಗ್ಯ ಇಲಾಖೆಗೆ ಬೇಕಾದ ಅನುದಾನವನ್ನು SCSP, TSP ನಿಧಿಯಿಂದ ಪಡೆಯಲು ಪ್ರಸ್ತಾಪ: ತೀವ್ರ ವಿರೋಧ

ಎಸ್‌ಇಪಿ ಟಿಎಸ್‌ಪಿ ಕಾಯ್ದೆಯಲ್ಲಿನ 7ಡಿ ಸೆಕ್ಷನ್ ಬಳಸಿ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಈ 7ಡಿ ರದ್ದುಪಡಿಸಬೇಕೆಂಬುದು ನಮ್ಮ ಆಗ್ರಹವಾಗಿದೆ - ಮಾವಳ್ಳಿ ಶಂಕರ್

- Advertisement -
- Advertisement -

ನೂತನ ಕಾಂಗ್ರೆಸ್ ಸರ್ಕಾರವು ಆರೋಗ್ಯ ಇಲಾಖೆಯನ್ನು ಬಲವರ್ಧನೆಗೊಳಿಸಲು ಮುಂದಾಗಿದೆ. ಅದಕ್ಕಾಗಿ ಹೆಚ್ಚುವರಿಯಾಗಿ 1,118 ರೂಗಳ ಅನುದಾನ ಅಗತ್ಯವಿದ್ದು, ಅದನ್ನು SCSP, TSP ನಿಧಿಯಿಂದ ಪಡೆಯಲು ಪ್ರಸ್ತಾಪಿಸಲಾಗಿದೆ ಎಂದು ದಿ.ಫೈಲ್ ವಿಶೇಷ ವರದಿ ಪ್ರಕಟಿಸಿದೆ.

ಮೂರು ಹಂತದಲ್ಲಿ ಆರೋಗ್ಯ ಇಲಾಖೆಯನ್ನು ಬಲವರ್ಧನೆಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ. ಅದೇ ರೀತಿ ಪ್ರಣಾಳಿಕೆಯಲ್ಲಿ ಘೋಷಿಸಿರುವ ಕೆಲ ಕಾರ್ಯಕ್ರಮಗಳಿಗೆ ಹೆಚ್ಚುವರಿ ರಾಜ್ಯ ಅನುದಾನದ ಅವಶ್ಯಕತೆ ಇಲ್ಲ ಎಂದು ಹೇಳಿರುವ ಆರೋಗ್ಯ ಇಲಾಖೆಯು, ಈ ಕಾರ್ಯಕ್ರಮಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆ ಮತ್ತು 15ನೇ ಹಣಕಾಸು ಆಯೋಗದಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.

ಜೂನ್ 13 ರಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆಯು 2023-24ನೇ ಸಾಲಿನ ಆರ್ಥಿಕ ವರ್ಷಕ್ಕೆ ಅವಶ್ಯವಿರುವ ಮತ್ತು ಹೆಚ್ಚುವರಿ ಅನುದಾನದ ವಿವರಗಳ ಪ್ರಾತ್ಯಕ್ಷಿಕೆಯನ್ನು ಒದಗಿಸಿದೆ. ಇದರ ಪ್ರತಿಯನ್ನು ‘ದಿ ಫೈಲ್‌’ ಪ್ರಕಟಿಸಿದ್ದು, ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನ ಹೆಚ್ಚಳಕ್ಕೆ 430 ಕೋಟಿ ರೂ, ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ 172 ಕೋಟಿ ರೂ, ಡಾ ಪುನೀತ್‌ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಗೆ 13.02 ಕೋಟಿ ರೂ ಸೇರಿದಂತೆ ಇದುವರೆಗೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯಲ್ಲಿ ಒಟ್ಟಾರೆ 1,013.85 ಕೋಟಿ ರೂ ಅನುದಾನ ಲಭ್ಯವಿದೆ ಎಂದು ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 50 ಸಂಚಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಎಸ್‌ಸಿಸಿಪಿ ಮತ್ತು ಎಸ್‌ಟಿಪಿ ಅನುದಾನದಡಿಯಲ್ಲಿ 34 ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿಯಲ್ಲಿ ಕಾರ್ಯಗತಗೊಳಿಸಲು ಉದ್ದೇಶಿಸಿದೆ. ಪ್ರತೀ ಸಂಚಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ವಹಣೆಗೆ ಪ್ರತಿ ತಿಂಗಳಿಗೆ 2.82 ಲಕ್ಷ ರು.ನಂತೆ ಒಟ್ಟಾರೆ ವಾರ್ಷಿಕವಾಗಿ 28.42 ಕೋಟಿ ರು.ಗಳನ್ನು ಎಸ್‌ಸಿಎಸ್‌ಪಿ ಟಿಎಸ್‌ಪಿ ಅನುದಾನಗಳಡಿಯಲ್ಲಿ ಭರಿಸಲಾಗುತ್ತದೆ. ಇದಕ್ಕಾಗಿ ಹೆಚ್ಚುವರಿ ಅನುದಾನದ ಅವಶ್ಯವಿರುವುದಿಲ್ಲ ಎಂದು ವಿವರಿಸಲಾಗಿದೆ.

SCSP, TSP ಹಣ ದುರ್ಬಳಕೆ ನಿಲ್ಲಲಿ: ಮಾವಳ್ಳಿ ಶಂಕರ್ ಆಗ್ರಹ

ಎಸ್‌ಸಿಎಸ್‌ಪಿ ಟಿಎಸ್‌ಪಿ ಹಣವನ್ನು ಯಾವುದೇ ಕಾರಣಕ್ಕೂ ಇತರೆ ಕೆಲಸಗಳಿಗೆ ಬಳಸಬಾರದು. ಕಾನೂನಿನಲ್ಲಿ ಏನಿದೆಯೋ ಅದನ್ನು ಪಾಲಿಸಬೇಕು. ದಲಿತರ ಕಲ್ಯಾಣಕ್ಕಾಗಿ ಮಾತ್ರ ಆ ಹಣ ಬಳಕೆಯಾಗಬೇಕು. ಇಲ್ಲದಿದ್ದಲ್ಲಿ ದಲಿತರಿಗೆ ಮಾಡುವ ಮಹಾ ಅನ್ಯಾಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಮುಖಂಡರಾದ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಸಿ, ಎಸ್‌ಟಿ ಡೆವೆಲೆವ್‌ಮೆಂಟ್‌ ಕಾರ್ಪೋರೇಷನ್ ಬೋರ್ಡ್‌ಗಳಲ್ಲಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅವರ್ಯಾರಿಗೆ ಈ ಹಣ ಬಳಕೆಯಾಗಿಲ್ಲ. ಸ್ವ ಉದ್ಯೋಗ ಮಾಡುವವರಿಗೆ ಈ ನಿಧಿಯಿಂದ ನೇರ ಸಾಲ ಕೊಡಬಹುದಲ್ಲವೇ? ಈ ಹಣವನ್ನು ಬಳಸಬಹುದಲ್ಲವೇ? ಅದನ್ನು ಬಿಟ್ಟು ಬ್ಯಾಂಕಿನ ಬಳಿ ಏಕೆ ಕಳಿಸುತ್ತಾರೆ? ಉತ್ತರ ಕರ್ನಾಟಕದ ದಲಿತ ಯುವಕರು ಉದ್ಯೋಗ ಅರಸಿ ಬೆಂಗಳೂರಿಗೆ ಬಂದು ಅಲೆಯುತ್ತಿದ್ದಾರೆ. ಇದೆಲ್ಲವೂ ಸರ್ಕಾರದ ಗಮನಕ್ಕಿಲ್ಲವೇ ಎಂದು ಪ್ರಶ್ನಿಸಿದರು.

ಕಾಯ್ದೆಯು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಮಾತ್ರ ಈ ಹಣವನ್ನು ಬಳಸಬೇಕೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೂ ಕಾಯ್ದೆಯಲ್ಲಿನ 7ಡಿ ಸೆಕ್ಷನ್ ಬಳಸಿ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಈ 7ಡಿ ರದ್ದು ಪಡಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು.

ನಿಧಿಯಲ್ಲಿ ಹಣವಿದೆ ಎಂದು ಪಿಡಬ್ಲೂಡಿ, ನೀರಾವರಿ, ಆರೋಗ್ಯ ಇಲಾಖೆಗೆ ಅನುದಾನ ನೀಡುವುದು ಸರಿಯಲ್ಲ. ಇದನ್ನು ತಡೆಯಲು ಏಕಗವಾಕ್ಷಿ ಏಜೆನ್ಸಿ ಮಾಡಿ ಹಣ ನೇರವಾಗಿ ಅಲ್ಲಿಗೆ ಹೋಗುವಂತೆ ಮಾಡಬೇಕು. ಮಧ್ಯಪ್ರದೇಶ ರಾಜ್ಯದಲ್ಲಿ ಈ ವ್ಯವಸ್ಥೆ ಇದ್ದು, ಅದಕ್ಕಾಗಿ ಒಂದು ಸಚಿವಾಲಯ ಸ್ಥಾಪಿಸಲಾಗಿದೆ. ಈ ಮಾದರಿಯನ್ನು ರಾಜ್ಯದಲ್ಲಿಯೂ ಅಳವಡಿಸಬೇಕು ಎಂದರು.

ಸಿಎಂರವರನ್ನು ಭೇಟಿ ಮಾಡಿ ಮನವಿ ಮಾಡುತ್ತೇವೆ: ಧರ್ಮಸೇನಾ

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಎಸ್‌ಸಿ ವಿಭಾಗದ ಅಧ್ಯಕ್ಷ ಆರ್ ಧರ್ಮಸೇನಾರವರು ಮಾತನಾಡಿ, “ಸಂವಿಧಾನ ಜಾರಿಯಾದಾಗಿನಿಂದಲೂ ಮೀಸಲಾತಿ ಜಾರಿಯಾಗಿದೆ. 2013ರಲ್ಲಿ ಎಸ್‌ಇಪಿ ಟಿಎಸ್‌ಪಿ ಯೋಜನೆ ಜಾರಿಗೆ ಬಂದಿದೆ. ಆದರೂ ಎಲ್ಲಾ ದಲಿತರಿಗೆ ಸರ್ಕಾರದ ಸೌಲಭ್ಯಗಳು ದೊರಕಿಲ್ಲ. ಕೇವಲ 9% ದಲಿತರಿಗೆ ಮಾತ್ರ ಕೆಲ ಯೋಜನೆಗಳು ತಲುಪಿವೆ ಎಂದು ರಾಷ್ಟ್ರೀಯ ಎಸ್‌ಸಿ, ಎಸ್‌ಟಿ ಆಯೋಗ ಹೇಳಿದೆ. ಹೀಗಿರುವಾಗ ಎಸ್‌ಇಪಿ ಟಿಎಸ್‌ಪಿ ನಿಧಿಯನ್ನು ದಲಿತರನ್ನು ಹೊರತುಪಡಿಸಿ ಇತರ ಯೋಜನೆಗಳಿಗೆ ಬಳಸುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ. ಈ ಕುರಿತು ನಮ್ಮ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡುತ್ತೇವೆ” ಎಂದರು.

ಬಿಜೆಪಿ ಸರ್ಕಾರ ಮಾಡಿದ ತಪ್ಪನ್ನು ಕಾಂಗ್ರೆಸ್ ಕೂಡ ಮಾಡಬಾರದು: ಶ್ರೀನಾಥ್ ಪೂಜಾರಿ

ವಕೀಲರು ಮತ್ತು ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ಶ್ರೀನಾಥ್ ಪೂಜಾರಿಯವರು ಮಾತನಾಡಿ, “ಆರೋಗ್ಯ ಇಲಾಖೆ ಅನುದಾನಕ್ಕಾಗಿ ಎಸ್‌ಇಪಿ ಟಿಎಸ್‌ಪಿ ನಿಧಿ ಬಳಸುವುದಾದರೆ, ನಾಳೆ ಎಲ್ಲಾ ಇಲಾಖೆಗಳು ಇದೇ ರೀತಿ ಕೇಳುತ್ತವೆ. ರಸ್ತೆ ಹಾಕಿಸುತ್ತೇವೆ, ಬೋರ್‌ವೆಲ್ ಹಾಕಿಸುತ್ತೇವೆ ಎಂದು ದಲಿತರ ಹಣ ಬಳಸಲಾಗುತ್ತದೆ. ಈ ಕೆಲಸಗಳಿಗೆ ಜನರಲ್ ಫಂಡ್ ಬಳಸಬೇಕೆ ಹೊರತು ಎಸ್‌ಇಪಿ ಟಿಎಸ್‌ಪಿ ನಿಧಿ ಬಳಸುವುದು ತಪ್ಪು. ಈ ಹಣವನ್ನು ದಲಿತ ಯುವಜನರ ಸಬಲೀಕರಣಕ್ಕಾಗಿ ಬಳಸಬೇಕು. ಆರೋಗ್ಯ ಇಲಾಖೆಯಲ್ಲಿಯೂ ದಲಿತರ ಆರೋಗ್ಯ ವೃದ್ದಿಸಲು ಬಳಸಬೇಕು. ಅದನ್ನು ಬಿಟ್ಟು ಬೇರೆ ಕೆಲಸಗಳಿಗೆ ಬಳಸುವುದು ದೊಡ್ಡ ತಪ್ಪು. ಬಿಜೆಪಿ ಸರ್ಕಾರ ಮಾಡಿದ ತಪ್ಪನ್ನು ಕಾಂಗ್ರೆಸ್ ಕೂಡ ಮಾಡಬಾರದು. ಇದನ್ನು ಪಕ್ಷದಲ್ಲಿದ್ದುಕೊಂಡೇ ತೀವ್ರವಾಗಿ ವಿರೋಧಿಸುತ್ತೇವೆ” ಎಂದು ತಿಳಿಸಿದರು.

ದಲಿತರ ಹಣವನ್ನು ದಲಿತರ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು – ಹನುಮೇಶ್ ಗುಂಡೂರು

ಎಸ್‌ಇಪಿ ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಯಾವುದೇ ಕಾರಣಕ್ಕೂ ಆ ನಿಧಿಯನ್ನು ಇತರ ಉದ್ದೇಶಗಳಿಗೆ ಬಳಸಬಾರದು. ಏಕೆಂದರೆ ತಾನು ತಂದ ಕಾನೂನಿಗೆ ತಾನೇ ವಿರುದ್ಧವಾಗಿ ನಡೆದುಕೊಂಡಂತೆ ಆಗುತ್ತದೆ. ಹಾಗಾಗಿ ದಲಿತರ ಹಣವನ್ನು ದಲಿತರ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕೆಂದು ವಕೀಲರಾದ ಹನುಮೇಶ್ ಗುಂಡೂರು ಒತ್ತಾಯಿಸಿದರು.

ಇದನ್ನೂ ಓದಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...