Homeಮುಖಪುಟಕಾವೇರಿದ TSRTC ಪ್ರೊಟೆಸ್ಟ್: ಪ್ರತಿಭಟನಾನಿರತ ಮಹಿಳೆ ಆತ್ಮಹತ್ಯೆ, ಇದು ನಾಲ್ಕನೇ ಪ್ರಕರಣ

ಕಾವೇರಿದ TSRTC ಪ್ರೊಟೆಸ್ಟ್: ಪ್ರತಿಭಟನಾನಿರತ ಮಹಿಳೆ ಆತ್ಮಹತ್ಯೆ, ಇದು ನಾಲ್ಕನೇ ಪ್ರಕರಣ

- Advertisement -
- Advertisement -

ತೆಲಂಗಾಣದಲ್ಲಿ ಟಿಎಸ್‌ಆರ್‌ಟಿಸಿ (ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ) ನೌಕರರ ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದ್ದು, ಮಹಿಳಾ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಮೂವರು ಟಿಎಸ್‌ಆರ್‌ಟಿಸಿ ನೌಕರರು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಇಂದು ಮಹಿಳೆಯೊಬ್ಬರು ಸಾವಿಗೆ ಶರಣಾಗಿದ್ದು, ನಾಲ್ಕನೇ ಪ್ರಕರಣ ಇದಾಗಿದೆ.

ಅಕ್ಟೋಬರ್‌ ೧೪ರಂದು ಟಿಎಸ್‌ಆರ್‌ಟಿಸಿ ಚಾಲಕ ಶ್ರೀನಿವಾಸ್ ರೆಡ್ಡಿ ಬೆಂಕಿ ಹಚ್ಚಿಕೊಂಡು ಸೂಸೈಡ್ ಮಾಡಿಕೊಂಡರೆ, ದೊಡ್ಡಮೊಯಿನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರನ್ನು ಹೊರತುಪಡಿಸಿ ಇನ್ನೊಬ್ಬ ಬಸ್ ಕಂಡಕ್ಟರ್‌ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಈಗ ಮಹಿಳಾ ನೌಕರರು ಸೂಸೈಡ್ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ತಿಕ್ಕಾಟ ಮತ್ತಷ್ಟು ಹೆಚ್ಚಿದೆ.

ಇದನ್ನೂ ಓದಿ: ೪೮ ಸಾವಿರ ಸಾರಿಗೆ ನೌಕರರ ನೋವನ್ನು ಅಪಹಾಸ್ಯ ಮಾಡಿದ ತೆಲಂಗಾಣ ಸಿಎಂ ಕೆಸಿಆರ್‌

ಕಳೆದ ಕೆಲ ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟಿಎಸ್‌ಆರ್‌ಟಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ೪೮ ಸಾವಿರ ಟಿಎಸ್‌ಆರ್‌ಟಿಸಿ ನೌಕರರನ್ನು ಕೆಲಸದಿಂದ ತೆಗೆದು ಹಾಕಿತ್ತು. ಇದರಿಂದ ರೊಚ್ಚಿಗೆದ್ದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಆರ್‌ಟಿಸಿಯನ್ನು ಸರ್ಕಾರದಲ್ಲಿ ವಿಲೀನ ಮಾಡಬೇಕು ಮತ್ತು ನೌಕರರಿಗೆ ಭದ್ರತೆ ನೀಡಬೇಕು ಎಂಬುದು ಪ್ರತಿಭಟನಾನಿರತರ ಪ್ರಮುಖ ಬೇಡಿಕೆ.

ಇನ್ನು ಟಿಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆಗೆ ಕಾಂಗ್ರೆಸ್, ಸಿಪಿಐ, ಸಿಪಿಎಂ, ಸೇರಿದಂತೆ ಅನೇಕ ಪಕ್ಷಗಳು, ಸಂಘಟನೆಗಳು ಬೆಂಬಲ ಸೂಚಿಸಿವೆ. ನೌಕರರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಆದರೆ ತೆಲಂಗಾಣ ಸಿಎಂ ಚಂದ್ರಶೇಖರ್‌ ರಾವ್‌ ಮಾತ್ರ ನೌಕರರ ಪ್ರತಿಭಟನೆಗೆ ಸೊಪ್ಪು ಹಾಕುತ್ತಿಲ್ಲ. ಪ್ರತಿಭಟನಾಕಾರರನ್ನು ಸಂತೈಸುವ ಗೋಜಿಗೆ ಹೋಗಿಲ್ಲ. ಮೊನ್ನೆಯಷ್ಟೇ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ರಾವ್, ಟಿಎಸ್‌ಆರ್‌ಟಿಸಿ ಮುಚ್ಚಿ ಹೋಗಲಿದೆ. ಪ್ರತಿಭಟನೆ ಮೂಲಕವೇ ಬಂದ್ ಆಗಲಿದೆ ಎಂದು ದುರಹಂಕಾರದ ಮಾತುಗಳನ್ನಾಡಿದ್ದರು.

ತೆಲಂಗಾಣದಲ್ಲಿ ಪ್ರತಿಭಟನಾ ನಿರತ ನೌಕರರು ರಸ್ತೆ ಬದಿಯಲ್ಲೇ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಸಿಎಂ ಚಂದ್ರಶೇಖರ್‌ ರಾವ್‌ ಅವರ ನಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಬೇಡಿಕೆ ಈಡೇರದ ಹೊರತು ಕದಲುವುದಿಲ್ಲ. ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...