Homeಮುಖಪುಟಕಾವೇರಿದ TSRTC ಪ್ರೊಟೆಸ್ಟ್: ಪ್ರತಿಭಟನಾನಿರತ ಮಹಿಳೆ ಆತ್ಮಹತ್ಯೆ, ಇದು ನಾಲ್ಕನೇ ಪ್ರಕರಣ

ಕಾವೇರಿದ TSRTC ಪ್ರೊಟೆಸ್ಟ್: ಪ್ರತಿಭಟನಾನಿರತ ಮಹಿಳೆ ಆತ್ಮಹತ್ಯೆ, ಇದು ನಾಲ್ಕನೇ ಪ್ರಕರಣ

- Advertisement -
- Advertisement -

ತೆಲಂಗಾಣದಲ್ಲಿ ಟಿಎಸ್‌ಆರ್‌ಟಿಸಿ (ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ) ನೌಕರರ ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದ್ದು, ಮಹಿಳಾ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಮೂವರು ಟಿಎಸ್‌ಆರ್‌ಟಿಸಿ ನೌಕರರು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಇಂದು ಮಹಿಳೆಯೊಬ್ಬರು ಸಾವಿಗೆ ಶರಣಾಗಿದ್ದು, ನಾಲ್ಕನೇ ಪ್ರಕರಣ ಇದಾಗಿದೆ.

ಅಕ್ಟೋಬರ್‌ ೧೪ರಂದು ಟಿಎಸ್‌ಆರ್‌ಟಿಸಿ ಚಾಲಕ ಶ್ರೀನಿವಾಸ್ ರೆಡ್ಡಿ ಬೆಂಕಿ ಹಚ್ಚಿಕೊಂಡು ಸೂಸೈಡ್ ಮಾಡಿಕೊಂಡರೆ, ದೊಡ್ಡಮೊಯಿನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರನ್ನು ಹೊರತುಪಡಿಸಿ ಇನ್ನೊಬ್ಬ ಬಸ್ ಕಂಡಕ್ಟರ್‌ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಈಗ ಮಹಿಳಾ ನೌಕರರು ಸೂಸೈಡ್ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ತಿಕ್ಕಾಟ ಮತ್ತಷ್ಟು ಹೆಚ್ಚಿದೆ.

ಇದನ್ನೂ ಓದಿ: ೪೮ ಸಾವಿರ ಸಾರಿಗೆ ನೌಕರರ ನೋವನ್ನು ಅಪಹಾಸ್ಯ ಮಾಡಿದ ತೆಲಂಗಾಣ ಸಿಎಂ ಕೆಸಿಆರ್‌

ಕಳೆದ ಕೆಲ ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟಿಎಸ್‌ಆರ್‌ಟಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ೪೮ ಸಾವಿರ ಟಿಎಸ್‌ಆರ್‌ಟಿಸಿ ನೌಕರರನ್ನು ಕೆಲಸದಿಂದ ತೆಗೆದು ಹಾಕಿತ್ತು. ಇದರಿಂದ ರೊಚ್ಚಿಗೆದ್ದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಆರ್‌ಟಿಸಿಯನ್ನು ಸರ್ಕಾರದಲ್ಲಿ ವಿಲೀನ ಮಾಡಬೇಕು ಮತ್ತು ನೌಕರರಿಗೆ ಭದ್ರತೆ ನೀಡಬೇಕು ಎಂಬುದು ಪ್ರತಿಭಟನಾನಿರತರ ಪ್ರಮುಖ ಬೇಡಿಕೆ.

ಇನ್ನು ಟಿಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆಗೆ ಕಾಂಗ್ರೆಸ್, ಸಿಪಿಐ, ಸಿಪಿಎಂ, ಸೇರಿದಂತೆ ಅನೇಕ ಪಕ್ಷಗಳು, ಸಂಘಟನೆಗಳು ಬೆಂಬಲ ಸೂಚಿಸಿವೆ. ನೌಕರರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಆದರೆ ತೆಲಂಗಾಣ ಸಿಎಂ ಚಂದ್ರಶೇಖರ್‌ ರಾವ್‌ ಮಾತ್ರ ನೌಕರರ ಪ್ರತಿಭಟನೆಗೆ ಸೊಪ್ಪು ಹಾಕುತ್ತಿಲ್ಲ. ಪ್ರತಿಭಟನಾಕಾರರನ್ನು ಸಂತೈಸುವ ಗೋಜಿಗೆ ಹೋಗಿಲ್ಲ. ಮೊನ್ನೆಯಷ್ಟೇ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ರಾವ್, ಟಿಎಸ್‌ಆರ್‌ಟಿಸಿ ಮುಚ್ಚಿ ಹೋಗಲಿದೆ. ಪ್ರತಿಭಟನೆ ಮೂಲಕವೇ ಬಂದ್ ಆಗಲಿದೆ ಎಂದು ದುರಹಂಕಾರದ ಮಾತುಗಳನ್ನಾಡಿದ್ದರು.

ತೆಲಂಗಾಣದಲ್ಲಿ ಪ್ರತಿಭಟನಾ ನಿರತ ನೌಕರರು ರಸ್ತೆ ಬದಿಯಲ್ಲೇ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಸಿಎಂ ಚಂದ್ರಶೇಖರ್‌ ರಾವ್‌ ಅವರ ನಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಬೇಡಿಕೆ ಈಡೇರದ ಹೊರತು ಕದಲುವುದಿಲ್ಲ. ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...