Homeಕರ್ನಾಟಕಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

ನಮ್ಮ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಬಚಾವೋ ಎಂಬ ಘೋಷಣೆ ನೀಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ರಕ್ಷಣೆ ಸಿಗುತ್ತಿಲ್ಲ- ಟಿ.ಎಚ್ ಹಾಲೇಶಪ್ಪ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಸಾಮೂಹಿಕವಾಗಿ ಅರ್ಚಕರು ನಡೆಸಿರುವ ಪೈಶಾಚಿಕ ಅತ್ಯಾಚಾರ ಘಟನೆಯನ್ನು ಖಂಡಿಸಿ ಇಂದು ಶಿವಮೊಗ್ಗದಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ನೂರಾರು ಕಾರ್ಯಕರ್ತರು “ಗೂಂಡಾ ರಾಜ್ಯ ಯುಪಿ ಸರ್ಕಾರಕ್ಕೆ, ಯುಪಿ ಪೊಲೀಸರಿಗೆ ಧಿಕ್ಕಾರ” ಎಂಬ ಘೋಷಣೆ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್‌ರವರು ಮಾತನಾಡಿ “ಉತ್ತರ ಪ್ರದೇಶದಲ್ಲಿ ದೇವರಿಗೆ ಪೂಜೆ ಮಾಡುವ ಅರ್ಚಕರು ಅಂಗನವಾಡಿ ಶಿಕ್ಷಕಿಯ ಮೇಲೆ ಸಾಮೂಹಿಕವಾಗಿ ಕ್ರೂರ ಅತ್ಯಾಚಾರ ನಡೆಸಿದ್ದಾರೆ. ನಾವು ದೇವರಿಗೆ ಪೂಜೆ ಮಾಡುವ ಪೂಜಾರಿಗಳನ್ನು ದೇವರೆಂದೇ ಭಾವಿಸುತ್ತೇವೆ. ಆ ಪೂಜಾರಿಗಳು 50 ವರ್ಷದ ಮಹಿಳೆಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿರುವುದು ನಾವೆಲ್ಲರೂ ತಲೆ ತಗ್ಗಿಸಬೇಕಾದ ವಿಚಾರ” ಎಂದರು.

ಈ ರೀತಿಯ ಬರ್ಬರ ಕೃತ್ಯಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ. ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಆತ ನಿಜಕ್ಕೂ ಯೋಗಿಯಲ್ಲ. ಯೋಗಿ ಅಂದರೆ ಆಧ್ಯಾತ್ಮ, ಒಳ್ಳೆಯವರು. ಆ ರೀತಿಯ ಒಳ್ಳೆಯ ಸ್ವಾಮಿಗಳಿದ್ದು, ಒಳ್ಳೆಯ ಕೆಲಸ ಮಾಡುತ್ತಾರೆ. ಆದರೆ ಆತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲಾಗದ ರೋಗಿ ಆಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2012ರಲ್ಲಿಯೂ ಸಹ ಒಬ್ಬ ದಲಿತ ಬಾಲಕಿಯ ಮೇಲೆ ಇದೇ ಯೋಗಿ ಆದಿತ್ಯನಾಥ್‌ ಕಡೆಯ ಗೂಂಡಾಗಳು ಅತ್ಯಾಚಾರ ಎಸಗಿ ಕೊಂದರು. ವಿಶ್ವದಲ್ಲಿ ಸುಮಾರು 200 ದೇಶಗಳಿವೆ, ಸಾವಿರಾರು ರಾಜ್ಯಗಳಿವೆ. ಆ ಎಲ್ಲಾ ದೇಶ-ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಹೆಚ್ಚು ಅತ್ಯಾಚಾರ-ಕೊಲೆಗಳು ನಡೆಯುತ್ತಿರುವುದು ಉತ್ತರ ಪ್ರದೇಶದಲ್ಲಿಯೇ ಆಗಿದೆ. ಒಬ್ಬ ಖಾವಿ ಬಟ್ಟೆಯನ್ನು ಹಾಕಿಕೊಂಡಿರುವ, ಜನರ ಪ್ರಾಣ – ಮಾನ ಕಾಪಾಡಬೇಕಾದ ಮುಖ್ಯಮಂತ್ರಿಯನ್ನು ಹೊಂದಿರುವ ರಾಜ್ಯದಲ್ಲಿ ಇವೆಲ್ಲ ನಡೆಯುತ್ತಿವೆ ಎಂದು ಕೆ.ಎಲ್ ಅಶೋಕ್ ಬೇಸರ ವ್ಯಕ್ತಪಡಿಸಿದರು.

ದಲಿತರು, ಬಡವರು, ಶೂದ್ರರು, ದಮನಿತರು ಎನ್ನುವ ಕಾರಣಕ್ಕೆ ಅತ್ಯಾಚಾರಕ್ಕೊಳಗಾದವರಿಗೆ ನ್ಯಾಯ ಸಿಗುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಈಗಾಗಿಯೇ ಇಂತಹ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿಂದೆ ಬಿಹಾರವನ್ನು ಗೂಂಡಾ ರಾಜ್ ಎಂದು ಕರೆಯಲಾಗುತ್ತಿದೆ. ಅದರ ಹತ್ತು ಪಟ್ಟು ಅಪರಾಧದ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿಯೇ ಒಬ್ಬ ಬಾಲಕಿಯ ಮೇಲೆ ಅತ್ಯಾಚಾರ ನಡೆಯಿತು. ಅತ್ಯಾಚಾರ ಎಂಬ ಪಿಡುಗು ನಮ್ಮ ಮನೆಯ ಬಾಗಿಲಿನಲ್ಲಿಯೇ ಇದೆ. ಹಾಗಾಗಿ ನಾವೆಲ್ಲ ಎಚ್ಚೆತ್ತುಕೊಂಡು ಇದರ ವಿರುದ್ಧ ಹೋರಾಡುವುದು ಅನಿವಾರ್ಯ ಎಂದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಕಾರ್ಯದರ್ಶಿ ಟಿ.ಎಚ್ ಹಾಲೇಶಪ್ಪನವರು ಮಾತನಾಡಿ “ನಮ್ಮ ಕರ್ನಾಟಕದಲ್ಲಿ ಅರ್ಚಕರನ್ನು ಮದುವೆಯಾದರೆ 3 ಲಕ್ಷ ರೂಗಳ ಬಾಂಡ್ ಕೊಡುತ್ತೇವೆ ಎಂದು ಸಿಎಂ ಯಡಿಯೂರಪ್ಪನವರು ಘೋಷಿಸಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಅದೇ ಹಣವನ್ನು ಮಹಿಳೆಯರ ರಕ್ಷಣೆಗೆ ನೀಡಬೇಕು” ಎಂದು ಆಗ್ರಹಿಸಿದರು.

ದೇವಸ್ಥಾನ ಪವಿತ್ರ ಎನ್ನುತ್ತಾರೆ. ಅಲ್ಲಿಯ ಅರ್ಚಕರೆ ಕಾಮುಕರಾದರೆ ಮಹಿಳೆಯರಿಗೆ ಇನ್ನೆಲ್ಲಿ ರಕ್ಷಣೆ ಇದೆ. ಇಂದು ನಮ್ಮ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಬಚಾವೋ ಎಂಬ ಘೋಷಣೆ ನೀಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ರಕ್ಷಣೆ ಸಿಗುತ್ತಿಲ್ಲ. ಈ ಗೂಂಡಾ ಸರ್ಕಾರಗಳನ್ನು ಕೆಳಗಿಳಿಸಬೇಕು, ಮಹಿಳೆಯರಿಗೆ ನಾವೇ ರಕ್ಷಣೆ ನೀಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ಪ್ರತಿಭಟನೆಯಲ್ಲಿ ರಾಮಚಂದ್ರಪ್ಪ, ಅನಿಲ್ ಕುಮಾರ್, ನಾಗವೇಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...