Homeಕರ್ನಾಟಕಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

ನಮ್ಮ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಬಚಾವೋ ಎಂಬ ಘೋಷಣೆ ನೀಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ರಕ್ಷಣೆ ಸಿಗುತ್ತಿಲ್ಲ- ಟಿ.ಎಚ್ ಹಾಲೇಶಪ್ಪ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಸಾಮೂಹಿಕವಾಗಿ ಅರ್ಚಕರು ನಡೆಸಿರುವ ಪೈಶಾಚಿಕ ಅತ್ಯಾಚಾರ ಘಟನೆಯನ್ನು ಖಂಡಿಸಿ ಇಂದು ಶಿವಮೊಗ್ಗದಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ನೂರಾರು ಕಾರ್ಯಕರ್ತರು “ಗೂಂಡಾ ರಾಜ್ಯ ಯುಪಿ ಸರ್ಕಾರಕ್ಕೆ, ಯುಪಿ ಪೊಲೀಸರಿಗೆ ಧಿಕ್ಕಾರ” ಎಂಬ ಘೋಷಣೆ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್‌ರವರು ಮಾತನಾಡಿ “ಉತ್ತರ ಪ್ರದೇಶದಲ್ಲಿ ದೇವರಿಗೆ ಪೂಜೆ ಮಾಡುವ ಅರ್ಚಕರು ಅಂಗನವಾಡಿ ಶಿಕ್ಷಕಿಯ ಮೇಲೆ ಸಾಮೂಹಿಕವಾಗಿ ಕ್ರೂರ ಅತ್ಯಾಚಾರ ನಡೆಸಿದ್ದಾರೆ. ನಾವು ದೇವರಿಗೆ ಪೂಜೆ ಮಾಡುವ ಪೂಜಾರಿಗಳನ್ನು ದೇವರೆಂದೇ ಭಾವಿಸುತ್ತೇವೆ. ಆ ಪೂಜಾರಿಗಳು 50 ವರ್ಷದ ಮಹಿಳೆಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿರುವುದು ನಾವೆಲ್ಲರೂ ತಲೆ ತಗ್ಗಿಸಬೇಕಾದ ವಿಚಾರ” ಎಂದರು.

ಈ ರೀತಿಯ ಬರ್ಬರ ಕೃತ್ಯಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ. ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಆತ ನಿಜಕ್ಕೂ ಯೋಗಿಯಲ್ಲ. ಯೋಗಿ ಅಂದರೆ ಆಧ್ಯಾತ್ಮ, ಒಳ್ಳೆಯವರು. ಆ ರೀತಿಯ ಒಳ್ಳೆಯ ಸ್ವಾಮಿಗಳಿದ್ದು, ಒಳ್ಳೆಯ ಕೆಲಸ ಮಾಡುತ್ತಾರೆ. ಆದರೆ ಆತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲಾಗದ ರೋಗಿ ಆಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2012ರಲ್ಲಿಯೂ ಸಹ ಒಬ್ಬ ದಲಿತ ಬಾಲಕಿಯ ಮೇಲೆ ಇದೇ ಯೋಗಿ ಆದಿತ್ಯನಾಥ್‌ ಕಡೆಯ ಗೂಂಡಾಗಳು ಅತ್ಯಾಚಾರ ಎಸಗಿ ಕೊಂದರು. ವಿಶ್ವದಲ್ಲಿ ಸುಮಾರು 200 ದೇಶಗಳಿವೆ, ಸಾವಿರಾರು ರಾಜ್ಯಗಳಿವೆ. ಆ ಎಲ್ಲಾ ದೇಶ-ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಹೆಚ್ಚು ಅತ್ಯಾಚಾರ-ಕೊಲೆಗಳು ನಡೆಯುತ್ತಿರುವುದು ಉತ್ತರ ಪ್ರದೇಶದಲ್ಲಿಯೇ ಆಗಿದೆ. ಒಬ್ಬ ಖಾವಿ ಬಟ್ಟೆಯನ್ನು ಹಾಕಿಕೊಂಡಿರುವ, ಜನರ ಪ್ರಾಣ – ಮಾನ ಕಾಪಾಡಬೇಕಾದ ಮುಖ್ಯಮಂತ್ರಿಯನ್ನು ಹೊಂದಿರುವ ರಾಜ್ಯದಲ್ಲಿ ಇವೆಲ್ಲ ನಡೆಯುತ್ತಿವೆ ಎಂದು ಕೆ.ಎಲ್ ಅಶೋಕ್ ಬೇಸರ ವ್ಯಕ್ತಪಡಿಸಿದರು.

ದಲಿತರು, ಬಡವರು, ಶೂದ್ರರು, ದಮನಿತರು ಎನ್ನುವ ಕಾರಣಕ್ಕೆ ಅತ್ಯಾಚಾರಕ್ಕೊಳಗಾದವರಿಗೆ ನ್ಯಾಯ ಸಿಗುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಈಗಾಗಿಯೇ ಇಂತಹ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿಂದೆ ಬಿಹಾರವನ್ನು ಗೂಂಡಾ ರಾಜ್ ಎಂದು ಕರೆಯಲಾಗುತ್ತಿದೆ. ಅದರ ಹತ್ತು ಪಟ್ಟು ಅಪರಾಧದ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿಯೇ ಒಬ್ಬ ಬಾಲಕಿಯ ಮೇಲೆ ಅತ್ಯಾಚಾರ ನಡೆಯಿತು. ಅತ್ಯಾಚಾರ ಎಂಬ ಪಿಡುಗು ನಮ್ಮ ಮನೆಯ ಬಾಗಿಲಿನಲ್ಲಿಯೇ ಇದೆ. ಹಾಗಾಗಿ ನಾವೆಲ್ಲ ಎಚ್ಚೆತ್ತುಕೊಂಡು ಇದರ ವಿರುದ್ಧ ಹೋರಾಡುವುದು ಅನಿವಾರ್ಯ ಎಂದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಕಾರ್ಯದರ್ಶಿ ಟಿ.ಎಚ್ ಹಾಲೇಶಪ್ಪನವರು ಮಾತನಾಡಿ “ನಮ್ಮ ಕರ್ನಾಟಕದಲ್ಲಿ ಅರ್ಚಕರನ್ನು ಮದುವೆಯಾದರೆ 3 ಲಕ್ಷ ರೂಗಳ ಬಾಂಡ್ ಕೊಡುತ್ತೇವೆ ಎಂದು ಸಿಎಂ ಯಡಿಯೂರಪ್ಪನವರು ಘೋಷಿಸಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಅದೇ ಹಣವನ್ನು ಮಹಿಳೆಯರ ರಕ್ಷಣೆಗೆ ನೀಡಬೇಕು” ಎಂದು ಆಗ್ರಹಿಸಿದರು.

ದೇವಸ್ಥಾನ ಪವಿತ್ರ ಎನ್ನುತ್ತಾರೆ. ಅಲ್ಲಿಯ ಅರ್ಚಕರೆ ಕಾಮುಕರಾದರೆ ಮಹಿಳೆಯರಿಗೆ ಇನ್ನೆಲ್ಲಿ ರಕ್ಷಣೆ ಇದೆ. ಇಂದು ನಮ್ಮ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಬಚಾವೋ ಎಂಬ ಘೋಷಣೆ ನೀಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ರಕ್ಷಣೆ ಸಿಗುತ್ತಿಲ್ಲ. ಈ ಗೂಂಡಾ ಸರ್ಕಾರಗಳನ್ನು ಕೆಳಗಿಳಿಸಬೇಕು, ಮಹಿಳೆಯರಿಗೆ ನಾವೇ ರಕ್ಷಣೆ ನೀಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ಪ್ರತಿಭಟನೆಯಲ್ಲಿ ರಾಮಚಂದ್ರಪ್ಪ, ಅನಿಲ್ ಕುಮಾರ್, ನಾಗವೇಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....