Homeಮುಖಪುಟಹೆಣ್ಣುಮಕ್ಕಳ ರಕ್ಷಣೆ ಬದಲಿಗೆ ಬಿಜೆಪಿ ಅಪರಾಧಿಗಳ ರಕ್ಷಣೆಗಿಳಿದಿದೆ: ಕಾಂಗ್ರೆಸ್

ಹೆಣ್ಣುಮಕ್ಕಳ ರಕ್ಷಣೆ ಬದಲಿಗೆ ಬಿಜೆಪಿ ಅಪರಾಧಿಗಳ ರಕ್ಷಣೆಗಿಳಿದಿದೆ: ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಸರ್ಕಾರದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಉಪಕ್ರಮವು 10 ವರ್ಷಗಳನ್ನು ಪೂರೈಸಿದ ಹಿನ್ನಲೆ, ಈ ಬಗ್ಗೆ ಬುಧವಾರ ಪ್ರತಿಕ್ರಿಯಿಸಿರುವ, ಬಿಜೆಪಿಯನ್ನು ಬೂಟಾಟಿಕೆ ಎಂದು ಆರೋಪಿಸಿದೆ. ಆಡಳಿತರೂಢ ಪಕ್ಷವು “ಹೆಣ್ಣುಮಕ್ಕಳನ್ನು ಉಳಿಸಿ” ಎಂಬ ಬದಲು ”ಅಪರಾಧಿಗಳನ್ನು ಉಳಿಸಿ” ಎಂಬ ನೀತಿಯನ್ನು ಅಳವಡಿಸಿಕೊಂಡಿದೆ ಎಂದು ಕೇಳಿದೆ. ಹೆಣ್ಣುಮಕ್ಕಳ ರಕ್ಷಣೆ

‘ಬೇಟಿ ಬಚಾವೋ ಬೇಟಿ ಪಡಾವೋ’ (BBBP) ಅನ್ನು ಪ್ರಧಾನಿಯವರು ಜನವರಿ 22, 2015 ರಂದು ಹರಿಯಾಣದ ಪಾಣಿಪತ್‌ನಲ್ಲಿ ಪ್ರಾರಂಭಿಸಿದ್ದರು. ಬಿಬಿಬಿಪಿ ಜೀವನ ಚಕ್ರದ ನಿರಂತರತೆಯಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಲಿಂಗ ಅನುಪಾತ (CSR) ಮತ್ತು ಮಹಿಳಾ ಸಬಲೀಕರಣದ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪರಿಚಯಿಸಲಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಬೇಟಿ ಬಚಾವೋದ ಹತ್ತು ವರ್ಷಗಳು, ಮೋದಿ ಅವರಿಗೆ ನಮ್ಮ ಮೂರು ಪ್ರಶ್ನೆಗಳು ‘BJP ಹೆಣ್ಣುಮಕ್ಕಳನ್ನು ಉಳಿಸಿ ಎಂಬ ಬದಲು ಅಪರಾಧಿಗಳನ್ನು ಉಳಿಸಿ’ ಎಂಬ ನೀತಿಯನ್ನು ಏಕೆ ಅಳವಡಿಸಿಕೊಂಡಿತು? ಮಣಿಪುರದ ಮಹಿಳೆಯರಿಗೆ ನ್ಯಾಯ ಯಾವಾಗ ಸಿಗುತ್ತದೆ? ಅದು ಹತ್ರಾಸ್‌ನ ದಲಿತ ಮಗಳಾಗಲಿ ಅಥವಾ ಉನ್ನಾವ್‌ನ ಮಗಳಾಗಲಿ ಅಥವಾ ನಮ್ಮ ಚಾಂಪಿಯನ್ ಮಹಿಳಾ ಕುಸ್ತಿಪಟುಗಳಾಗಲಿ, ಬಿಜೆಪಿ ಯಾವಾಗಲೂ ಅಪರಾಧಿಗಳನ್ನು ಏಕೆ ರಕ್ಷಿಸಿದೆ?” ಎಂದು ಅವರು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದಲ್ಲಿ ಪ್ರತಿ ಗಂಟೆಗೆ ಮಹಿಳೆಯರ ವಿರುದ್ಧ 43 ಅಪರಾಧಗಳು ಏಕೆ ದಾಖಲಾಗುತ್ತಿವೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ. ನಮ್ಮ ದೇಶದ ಅತ್ಯಂತ ದುರ್ಬಲ ದಲಿತ-ಬುಡಕಟ್ಟು ವರ್ಗದ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಪ್ರತಿದಿನ 22 ಅಪರಾಧಗಳು ದಾಖಲಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಹೆಣ್ಣುಮಕ್ಕಳ ರಕ್ಷಣೆ

ಮೋದಿ ಅವರು ಕೆಂಪು ಕೋಟೆಯಿಂದ ಭಾಷಣ ಮಾಡುತ್ತಾ, ಮಹಿಳಾ ಸುರಕ್ಷತೆಯ ಬಗ್ಗೆ ಹಲವು ಬಾರಿ ಮಾತನಾಡಿದ್ದಾರೆ. ಆದರೆ ಅವರ ಮಾತುಗಳು ಮತ್ತು ಕಾರ್ಯಗಳ ನಡುವೆ ವ್ಯತ್ಯಾಸ ಏಕಿದೆ? ಎಂದು ಖರ್ಗೆ ಕೇಳಿದ್ದಾರೆ. 2019 ರವರೆಗೆ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಗೆ ನಿಗದಿಪಡಿಸಿದ ಒಟ್ಟು ಮೊತ್ತದ ಸುಮಾರು 80% ವನ್ನು ಮಾಧ್ಯಮ ಜಾಹೀರಾತಿಗಾಗಿ ಮಾತ್ರ ಖರ್ಚು ಮಾಡಲು ಕಾರಣವೇನು ಎಂದು ಅವರು ಕೇಳಿದ್ದಾರೆ.

“ಈ ಸಂಗತಿಯನ್ನು ಸಂಸದೀಯ ಸ್ಥಾಯಿ ಸಮಿತಿ ಬಹಿರಂಗಪಡಿಸಿತ್ತು. 2018-19 ಮತ್ತು 2022-23 ರ ನಡುವೆ ಯೋಜನೆಗೆ ಬಳಸಲಾದ ಹಣವನ್ನು 63% ರಷ್ಟು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಲಾಯಿತು. ನಂತರ ಅದನ್ನು ‘ಮಿಷನ್ ಶಕ್ತಿ’ ಅಡಿಯಲ್ಲಿ ‘ಸಂಬಲ್’ ಎಂಬ ಯೋಜನೆಯೊಂದಿಗೆ ವಿಲೀನಗೊಳಿಸುವ ಮೂಲಕ, ಮೋದಿ ಸರ್ಕಾರವು ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಗೆ ಖರ್ಚು ಮಾಡಿದ ಡೇಟಾವನ್ನು ನೀಡುವುದನ್ನು ನಿಲ್ಲಿಸಿತು” ಎಂದು ಅವರು ಹೇಳಿದ್ದಾರೆ.

2023-24ರಲ್ಲಿ ‘ಸಂಬಲ್’ ಕಾರ್ಯಕ್ರಮಕ್ಕೆ ಹಂಚಿಕೆಯಾದ ನಿಧಿ ಮತ್ತು ಬಳಸಲಾದ ನಿಧಿಯಲ್ಲಿ 30%ದಷ್ಟು ಕಡಿತವಾಗಿದೆ ಎಂದು ಅವರು ಆರೋಪಿಸಿದ್ದು, ಈ ದತ್ತಾಂಶದ “ತಿದ್ದುಪಡಿ”ಯಿಂದ ಸರ್ಕಾರ ಏನನ್ನು ಮರೆಮಾಡಲು ಬಯಸಿದೆ ಎಂದು ಕೇಳಿದ್ದಾರೆ.

ಪ್ರತಿ ಟ್ರಕ್‌ನ ಹಿಂಭಾಗದಲ್ಲಿ “ಬೇಟಿ ಬಚಾವೋ” ಎಂದು ಅಂಟಿಸುವುದರಿಂದ ಅಥವಾ ಪ್ರತಿ ಗೋಡೆಯ ಮೇಲೆ ಚಿತ್ರಿಸುವುದರಿಂದ ಮಹಿಳೆಯರ ಮೇಲಿನ ಅಪರಾಧಗಳು ನಿಲ್ಲುತ್ತವೆಯೇ, ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತವೆಯೇ, ಅವರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ನೀಡುತ್ತವೆಯೇ ಅಥವಾ ದೌರ್ಜನ್ಯದ ನಂತರ ಮಹಿಳೆಯರಿಗೆ ನ್ಯಾಯ ಒದಗಿಸುತ್ತವೆಯೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

“‘ಮಹಿಳೆಯರ ಮೇಲಿನ ದಾಳಿಗಳು ಸಾಕು, ಇದು ಬಿಜೆಪಿಯ ಟೊಳ್ಳು ಜಾಹೀರಾತಾಗಿದ್ದು 10 ವರ್ಷಗಳ ನಂತರ ಅದರ ಸಂಪೂರ್ಣ ಬೂಟಾಟಿಕೆಯನ್ನು ತೋರಿಸುತ್ತದೆ!” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...