Homeಮುಖಪುಟಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ - ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

ಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ – ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

- Advertisement -
- Advertisement -

ಮಧ್ಯಪ್ರದೇಶದ ರಾಜ್ಯ ಸಚಿವ ಸ್ಥಾನಮಾನವಿರುವ ಬ್ರಾಹ್ಮಣ ಜಾತಿಯ ನಾಯಕನೊಬ್ಬ ತನ್ನ ಜಾತಿಯ ನವವಿವಾಹಿತ ದಂಪತಿಗಳಿಗೆ ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ.ಗಳನ್ನು ಪಡೆಯುವಂತೆ ಮನವಿ ಮಾಡಿದ ಒಂದು ತಿಂಗಳ ನಂತರ, ಅದೇ ರಾಜ್ಯದ ಮತ್ತೊಬ್ಬ ಜಾತಿಯ ನಾಯಕ ತನ್ನ ಸಮುದಾಯದ ನವವಿವಾಹಿತ ದಂಪತಿಗಳಿಗೆ ‘ಹಮ್ ದೋ ಹುಮಾರೆ ಪಾಂಚ್’ (ನಾವು ಇಬ್ಬರು ನಮ್ಮದು ಐದು) ಎಂಬ ಘೋಷಣೆಯನ್ನು ನೀಡಿದ್ದಾರೆ. ಹಿಂದೂ ಧರ್ಮದ

ಭಾನುವಾರ ನೈಋತ್ಯ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿಯಲ್ಲಿ ತಮ್ಮ ಮಾಝಿ-ಕಹಾರ್ ಜಾತಿಯ 201 ಆರ್ಥಿಕವಾಗಿ ದುರ್ಬಲ ದಂಪತಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ಮಾಡಿದ್ದಾರೆ. ಮಾಝಿ – ಕಹಾರ್ ಜಾತಿಯ ಖಾರ್ಗೋನ್ ಜಿಲ್ಲಾ ಅಧ್ಯಕ್ಷರಾಗಿರುವ ನರೇಂದ್ರ ವರ್ಮಾ, ಐದು ಮಕ್ಕಳಿಗೆ ಜನ್ಮ ನೀಡುವ ತಮ್ಮ ಜಾತಿಯ ಎಲ್ಲಾ ದಂಪತಿಗಳಿಗೆ 1 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಮುಖ ವಿಚಾರ ಏನೆಂದರೆ, ವರ್ಮಾ ಘೋಷಣೆ ಮಾಡಿರುವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡ ಜಿಲ್ಲಾ ಬಿಜೆಪಿ ಅಧ್ಯಕ್ಷೆ ನಂದಾ ಬ್ರಹ್ಮಣೆ ಮತ್ತು ನಗರ ಪುರಸಭೆಯ ಅಧ್ಯಕ್ಷೆ ಛಾಯಾ ಜೋಶಿ ಸೇರಿದಂತೆ ಜಿಲ್ಲೆಯ ಹಿರಿಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

“1990 ರ ದಶಕದಿಂದ ರಾಜಕೀಯ ಪಕ್ಷಗಳು ‘ಹಮ್ ದೋ ಹುಮಾರೆ ದೋ’ ಮತ್ತು ‘ಶೇರ್ ಕಾ ಬಚ್ಚಾ ಏಕ್ ಹೈ ಅಚ್ಚಾ’ ಮುಂತಾದ ಘೋಷಣೆಗಳ ಮೂಲಕ ನಮ್ಮ ಸಂಪ್ರದಾಯಗಳನ್ನು ಹಾಳುಮಾಡುತ್ತಿದ್ದಾರೆ. ಇಂತಹ ಘೋಷಣೆಗಳನ್ನು ಅನುಸರಿಸುವ ಮೂಲಕ, ಮಾಝಿ-ಕಹಾರ್ ಜಾತಿ ಸೇರಿದಂತೆ ಇಡೀ ಹಿಂದೂ ಸಮುದಾಯವು ಭವಿಷ್ಯದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾವು ನಮ್ಮ ಜಾತಿಗೆ ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ನೀಡುತ್ತಿದ್ದೇವೆ. ಈ ಘೋಷಣೆಯು ನಮ್ಮ ಆಚರಣೆಗಳು ಮುಂದುವರಿಯಲು ಸಹ ಸಹಾಯ ಮಾಡುತ್ತದೆ” ಎಂದು ವರ್ಮಾ ಹೊಸ ಖಾರ್ಗೋನ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ನಂದ ಬ್ರಹ್ಮಣೆ ಅವರೊಂದಿಗೆ ಹೇಳಿದ್ದಾರೆ. ಹಿಂದೂ ಧರ್ಮದ

“ಹಿಂದೂ ಧರ್ಮ ಮತ್ತು ಇಡೀ ಸನಾತನ ಸಮಾಜವನ್ನು ರಕ್ಷಿಸಲು ಇಂತಹ ಘೋಷಣೆಗಳು ಅವಶ್ಯಕ. ನಮ್ಮ ಎಲ್ಲಾ ಮಹಾಪುರುಷರು (ಮಹಾನ್ ಪುರುಷರು) ತಮ್ಮ ಪೋಷಕರ ಐದನೇ, ಆರನೇ ಅಥವಾ ಏಳನೇ ಮಗುವಾಗಿದ್ದಾರೆ. ಸ್ವಾಮಿ ವಿವೇಕಾನಂದರು ಅವರ ಪೋಷಕರ ಐದನೇ ಮಗು. ಹಾಗಾದರೆ ನಮಗೆ ಕನಿಷ್ಠ ಐದು ಮಕ್ಕಳಿಲ್ಲದಿದ್ದರೆ ನಾವು ನಮ್ಮ ಮಹಾಪುರುಷರನ್ನು (ಮಹಾನ್ ಪುರುಷರು) ಎಲ್ಲಿಂದ ಪಡೆಯುತ್ತೇವೆ” ಎಂದು ವರ್ಮಾ ಕೇಳಿದ್ದಾರೆ.

ಇದಕ್ಕೂ ಮೊದಲು, ಜನವರಿ 12 ರಂದು, ಬ್ರಾಹ್ಮಣ ಜಾತಿ ನಾಯಕ ಮತ್ತು ರಾಜ್ಯ ಸರ್ಕಾರದ ಪರಶುರಾಮ ಕಲ್ಯಾಣ ಮಂಡಳಿಯ ಮುಖ್ಯಸ್ಥ ವಿಷ್ಣು ರಾಜೋರಿಯಾ ಅವರು ನವವಿವಾಹಿತ ಬ್ರಾಹ್ಮಣ ದಂಪತಿಗಳಿಗೆ “ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ. ಬಹುಮಾನ ಪಡೆಯಿರಿ” ಎಂದು ಮನವಿ ಮಾಡಿದ್ದರು. ಜನವರಿ 12 ರಂದು ಇಂದೋರ್‌ನಲ್ಲಿ ನಡೆದ ಸನಧ್ಯ ಬ್ರಾಹ್ಮಣ ಸಮಾಜ ವಿವಾಹ ಪರಿಚಯ ಸಮ್ಮೇಳನದಲ್ಲಿ ರಾಜ್ಯ ಸಚಿವ ಸ್ಥಾನಮಾನ ಇರುವ ರಾಜೋರಿಯಾ ಅವರು ಈ ಮನವಿಯನ್ನು ಮಾಡಿದ್ದರು.

ದೇಶದಲ್ಲಿ ಹಿಂದೂಯೇತರ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಎಂದು ಹೇಳಿಕೊಂಡ ಅವರು, ಇಂದೋರ್‌ನಲ್ಲಿ ನಡೆದ ಬ್ರಾಹ್ಮಣರ ಸಭೆಯಲ್ಲಿ ಹಾಜರಿದ್ದ ಯುವಕರು ತಮ್ಮ ಮುಂಬರುವ ಪೀಳಿಗೆಯ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಮಾರ್ಚ್ 2023 ರಲ್ಲಿ, ಹಿಂದೂ ರಾಷ್ಟ್ರ ಬೆಂಬಲಿತ ಧಾರ್ಮಿಕ ಬೋಧಕ ಧೀರೇಂದ್ರ ಕೃಷ್ಣ ಶಾಸ್ತ್ರಿ ‘ಬಾಗೇಶ್ವರ ಬಾಬಾ’ ಕೂಡ ಹಿಂದೂಗಳು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕೆಂದು ಮನವಿ ಮಾಡಿದ್ದರು. ಒತೆಗೆ ಈ ನಾಲ್ಕು ಮಕ್ಕಳಲ್ಲಿ ಇಬ್ಬರನ್ನು ರಾಷ್ಟ್ರ ಮತ್ತು ಭಗವಾನ್ ರಾಮನ ಸೇವೆಗಾಗಿ ಬಿಡಬೇಕು ಎಂದು ಹೇಳಿದ್ದರು.

ಅಲ್ಲದೆ, ಜುಲೈ 2024 ರಲ್ಲಿ, ಪಂಚಾಯತಿ ನಿರಂಜನಿ ಅಖಾಡದ ಮಹಾಮಂಡಲೇಶ್ವರ ಎಂಬ ಹಿಂದೂ ಧರ್ಮಗುರು ಸ್ವಾಮಿ ಪ್ರೇಮಾನಂದ ಮಹಾರಾಜ್ ಅವರು ಪ್ರತಿಯೊಬ್ಬ ಹಿಂದೂ ಮಹಿಳೆಯೂ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಬೇಕೆಂದು ಕೇಳಿಕೊಂಡಿದ್ದರು.

ಇದನ್ನೂಓದಿ:  ಕೇರಳ | ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ಕೇರಳ| ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...