Homeಮುಖಪುಟಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ - ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

ಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ – ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

- Advertisement -
- Advertisement -

ಮಧ್ಯಪ್ರದೇಶದ ರಾಜ್ಯ ಸಚಿವ ಸ್ಥಾನಮಾನವಿರುವ ಬ್ರಾಹ್ಮಣ ಜಾತಿಯ ನಾಯಕನೊಬ್ಬ ತನ್ನ ಜಾತಿಯ ನವವಿವಾಹಿತ ದಂಪತಿಗಳಿಗೆ ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ.ಗಳನ್ನು ಪಡೆಯುವಂತೆ ಮನವಿ ಮಾಡಿದ ಒಂದು ತಿಂಗಳ ನಂತರ, ಅದೇ ರಾಜ್ಯದ ಮತ್ತೊಬ್ಬ ಜಾತಿಯ ನಾಯಕ ತನ್ನ ಸಮುದಾಯದ ನವವಿವಾಹಿತ ದಂಪತಿಗಳಿಗೆ ‘ಹಮ್ ದೋ ಹುಮಾರೆ ಪಾಂಚ್’ (ನಾವು ಇಬ್ಬರು ನಮ್ಮದು ಐದು) ಎಂಬ ಘೋಷಣೆಯನ್ನು ನೀಡಿದ್ದಾರೆ. ಹಿಂದೂ ಧರ್ಮದ

ಭಾನುವಾರ ನೈಋತ್ಯ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿಯಲ್ಲಿ ತಮ್ಮ ಮಾಝಿ-ಕಹಾರ್ ಜಾತಿಯ 201 ಆರ್ಥಿಕವಾಗಿ ದುರ್ಬಲ ದಂಪತಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ಮಾಡಿದ್ದಾರೆ. ಮಾಝಿ – ಕಹಾರ್ ಜಾತಿಯ ಖಾರ್ಗೋನ್ ಜಿಲ್ಲಾ ಅಧ್ಯಕ್ಷರಾಗಿರುವ ನರೇಂದ್ರ ವರ್ಮಾ, ಐದು ಮಕ್ಕಳಿಗೆ ಜನ್ಮ ನೀಡುವ ತಮ್ಮ ಜಾತಿಯ ಎಲ್ಲಾ ದಂಪತಿಗಳಿಗೆ 1 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಮುಖ ವಿಚಾರ ಏನೆಂದರೆ, ವರ್ಮಾ ಘೋಷಣೆ ಮಾಡಿರುವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡ ಜಿಲ್ಲಾ ಬಿಜೆಪಿ ಅಧ್ಯಕ್ಷೆ ನಂದಾ ಬ್ರಹ್ಮಣೆ ಮತ್ತು ನಗರ ಪುರಸಭೆಯ ಅಧ್ಯಕ್ಷೆ ಛಾಯಾ ಜೋಶಿ ಸೇರಿದಂತೆ ಜಿಲ್ಲೆಯ ಹಿರಿಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

“1990 ರ ದಶಕದಿಂದ ರಾಜಕೀಯ ಪಕ್ಷಗಳು ‘ಹಮ್ ದೋ ಹುಮಾರೆ ದೋ’ ಮತ್ತು ‘ಶೇರ್ ಕಾ ಬಚ್ಚಾ ಏಕ್ ಹೈ ಅಚ್ಚಾ’ ಮುಂತಾದ ಘೋಷಣೆಗಳ ಮೂಲಕ ನಮ್ಮ ಸಂಪ್ರದಾಯಗಳನ್ನು ಹಾಳುಮಾಡುತ್ತಿದ್ದಾರೆ. ಇಂತಹ ಘೋಷಣೆಗಳನ್ನು ಅನುಸರಿಸುವ ಮೂಲಕ, ಮಾಝಿ-ಕಹಾರ್ ಜಾತಿ ಸೇರಿದಂತೆ ಇಡೀ ಹಿಂದೂ ಸಮುದಾಯವು ಭವಿಷ್ಯದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾವು ನಮ್ಮ ಜಾತಿಗೆ ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ನೀಡುತ್ತಿದ್ದೇವೆ. ಈ ಘೋಷಣೆಯು ನಮ್ಮ ಆಚರಣೆಗಳು ಮುಂದುವರಿಯಲು ಸಹ ಸಹಾಯ ಮಾಡುತ್ತದೆ” ಎಂದು ವರ್ಮಾ ಹೊಸ ಖಾರ್ಗೋನ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ನಂದ ಬ್ರಹ್ಮಣೆ ಅವರೊಂದಿಗೆ ಹೇಳಿದ್ದಾರೆ. ಹಿಂದೂ ಧರ್ಮದ

“ಹಿಂದೂ ಧರ್ಮ ಮತ್ತು ಇಡೀ ಸನಾತನ ಸಮಾಜವನ್ನು ರಕ್ಷಿಸಲು ಇಂತಹ ಘೋಷಣೆಗಳು ಅವಶ್ಯಕ. ನಮ್ಮ ಎಲ್ಲಾ ಮಹಾಪುರುಷರು (ಮಹಾನ್ ಪುರುಷರು) ತಮ್ಮ ಪೋಷಕರ ಐದನೇ, ಆರನೇ ಅಥವಾ ಏಳನೇ ಮಗುವಾಗಿದ್ದಾರೆ. ಸ್ವಾಮಿ ವಿವೇಕಾನಂದರು ಅವರ ಪೋಷಕರ ಐದನೇ ಮಗು. ಹಾಗಾದರೆ ನಮಗೆ ಕನಿಷ್ಠ ಐದು ಮಕ್ಕಳಿಲ್ಲದಿದ್ದರೆ ನಾವು ನಮ್ಮ ಮಹಾಪುರುಷರನ್ನು (ಮಹಾನ್ ಪುರುಷರು) ಎಲ್ಲಿಂದ ಪಡೆಯುತ್ತೇವೆ” ಎಂದು ವರ್ಮಾ ಕೇಳಿದ್ದಾರೆ.

ಇದಕ್ಕೂ ಮೊದಲು, ಜನವರಿ 12 ರಂದು, ಬ್ರಾಹ್ಮಣ ಜಾತಿ ನಾಯಕ ಮತ್ತು ರಾಜ್ಯ ಸರ್ಕಾರದ ಪರಶುರಾಮ ಕಲ್ಯಾಣ ಮಂಡಳಿಯ ಮುಖ್ಯಸ್ಥ ವಿಷ್ಣು ರಾಜೋರಿಯಾ ಅವರು ನವವಿವಾಹಿತ ಬ್ರಾಹ್ಮಣ ದಂಪತಿಗಳಿಗೆ “ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ. ಬಹುಮಾನ ಪಡೆಯಿರಿ” ಎಂದು ಮನವಿ ಮಾಡಿದ್ದರು. ಜನವರಿ 12 ರಂದು ಇಂದೋರ್‌ನಲ್ಲಿ ನಡೆದ ಸನಧ್ಯ ಬ್ರಾಹ್ಮಣ ಸಮಾಜ ವಿವಾಹ ಪರಿಚಯ ಸಮ್ಮೇಳನದಲ್ಲಿ ರಾಜ್ಯ ಸಚಿವ ಸ್ಥಾನಮಾನ ಇರುವ ರಾಜೋರಿಯಾ ಅವರು ಈ ಮನವಿಯನ್ನು ಮಾಡಿದ್ದರು.

ದೇಶದಲ್ಲಿ ಹಿಂದೂಯೇತರ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಎಂದು ಹೇಳಿಕೊಂಡ ಅವರು, ಇಂದೋರ್‌ನಲ್ಲಿ ನಡೆದ ಬ್ರಾಹ್ಮಣರ ಸಭೆಯಲ್ಲಿ ಹಾಜರಿದ್ದ ಯುವಕರು ತಮ್ಮ ಮುಂಬರುವ ಪೀಳಿಗೆಯ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಮಾರ್ಚ್ 2023 ರಲ್ಲಿ, ಹಿಂದೂ ರಾಷ್ಟ್ರ ಬೆಂಬಲಿತ ಧಾರ್ಮಿಕ ಬೋಧಕ ಧೀರೇಂದ್ರ ಕೃಷ್ಣ ಶಾಸ್ತ್ರಿ ‘ಬಾಗೇಶ್ವರ ಬಾಬಾ’ ಕೂಡ ಹಿಂದೂಗಳು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕೆಂದು ಮನವಿ ಮಾಡಿದ್ದರು. ಒತೆಗೆ ಈ ನಾಲ್ಕು ಮಕ್ಕಳಲ್ಲಿ ಇಬ್ಬರನ್ನು ರಾಷ್ಟ್ರ ಮತ್ತು ಭಗವಾನ್ ರಾಮನ ಸೇವೆಗಾಗಿ ಬಿಡಬೇಕು ಎಂದು ಹೇಳಿದ್ದರು.

ಅಲ್ಲದೆ, ಜುಲೈ 2024 ರಲ್ಲಿ, ಪಂಚಾಯತಿ ನಿರಂಜನಿ ಅಖಾಡದ ಮಹಾಮಂಡಲೇಶ್ವರ ಎಂಬ ಹಿಂದೂ ಧರ್ಮಗುರು ಸ್ವಾಮಿ ಪ್ರೇಮಾನಂದ ಮಹಾರಾಜ್ ಅವರು ಪ್ರತಿಯೊಬ್ಬ ಹಿಂದೂ ಮಹಿಳೆಯೂ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಬೇಕೆಂದು ಕೇಳಿಕೊಂಡಿದ್ದರು.

ಇದನ್ನೂಓದಿ:  ಕೇರಳ | ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ಕೇರಳ| ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...