Homeಮುಖಪುಟಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ - ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

ಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ – ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

- Advertisement -
- Advertisement -

ಮಧ್ಯಪ್ರದೇಶದ ರಾಜ್ಯ ಸಚಿವ ಸ್ಥಾನಮಾನವಿರುವ ಬ್ರಾಹ್ಮಣ ಜಾತಿಯ ನಾಯಕನೊಬ್ಬ ತನ್ನ ಜಾತಿಯ ನವವಿವಾಹಿತ ದಂಪತಿಗಳಿಗೆ ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ.ಗಳನ್ನು ಪಡೆಯುವಂತೆ ಮನವಿ ಮಾಡಿದ ಒಂದು ತಿಂಗಳ ನಂತರ, ಅದೇ ರಾಜ್ಯದ ಮತ್ತೊಬ್ಬ ಜಾತಿಯ ನಾಯಕ ತನ್ನ ಸಮುದಾಯದ ನವವಿವಾಹಿತ ದಂಪತಿಗಳಿಗೆ ‘ಹಮ್ ದೋ ಹುಮಾರೆ ಪಾಂಚ್’ (ನಾವು ಇಬ್ಬರು ನಮ್ಮದು ಐದು) ಎಂಬ ಘೋಷಣೆಯನ್ನು ನೀಡಿದ್ದಾರೆ. ಹಿಂದೂ ಧರ್ಮದ

ಭಾನುವಾರ ನೈಋತ್ಯ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿಯಲ್ಲಿ ತಮ್ಮ ಮಾಝಿ-ಕಹಾರ್ ಜಾತಿಯ 201 ಆರ್ಥಿಕವಾಗಿ ದುರ್ಬಲ ದಂಪತಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ಮಾಡಿದ್ದಾರೆ. ಮಾಝಿ – ಕಹಾರ್ ಜಾತಿಯ ಖಾರ್ಗೋನ್ ಜಿಲ್ಲಾ ಅಧ್ಯಕ್ಷರಾಗಿರುವ ನರೇಂದ್ರ ವರ್ಮಾ, ಐದು ಮಕ್ಕಳಿಗೆ ಜನ್ಮ ನೀಡುವ ತಮ್ಮ ಜಾತಿಯ ಎಲ್ಲಾ ದಂಪತಿಗಳಿಗೆ 1 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಮುಖ ವಿಚಾರ ಏನೆಂದರೆ, ವರ್ಮಾ ಘೋಷಣೆ ಮಾಡಿರುವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡ ಜಿಲ್ಲಾ ಬಿಜೆಪಿ ಅಧ್ಯಕ್ಷೆ ನಂದಾ ಬ್ರಹ್ಮಣೆ ಮತ್ತು ನಗರ ಪುರಸಭೆಯ ಅಧ್ಯಕ್ಷೆ ಛಾಯಾ ಜೋಶಿ ಸೇರಿದಂತೆ ಜಿಲ್ಲೆಯ ಹಿರಿಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

“1990 ರ ದಶಕದಿಂದ ರಾಜಕೀಯ ಪಕ್ಷಗಳು ‘ಹಮ್ ದೋ ಹುಮಾರೆ ದೋ’ ಮತ್ತು ‘ಶೇರ್ ಕಾ ಬಚ್ಚಾ ಏಕ್ ಹೈ ಅಚ್ಚಾ’ ಮುಂತಾದ ಘೋಷಣೆಗಳ ಮೂಲಕ ನಮ್ಮ ಸಂಪ್ರದಾಯಗಳನ್ನು ಹಾಳುಮಾಡುತ್ತಿದ್ದಾರೆ. ಇಂತಹ ಘೋಷಣೆಗಳನ್ನು ಅನುಸರಿಸುವ ಮೂಲಕ, ಮಾಝಿ-ಕಹಾರ್ ಜಾತಿ ಸೇರಿದಂತೆ ಇಡೀ ಹಿಂದೂ ಸಮುದಾಯವು ಭವಿಷ್ಯದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾವು ನಮ್ಮ ಜಾತಿಗೆ ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ನೀಡುತ್ತಿದ್ದೇವೆ. ಈ ಘೋಷಣೆಯು ನಮ್ಮ ಆಚರಣೆಗಳು ಮುಂದುವರಿಯಲು ಸಹ ಸಹಾಯ ಮಾಡುತ್ತದೆ” ಎಂದು ವರ್ಮಾ ಹೊಸ ಖಾರ್ಗೋನ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ನಂದ ಬ್ರಹ್ಮಣೆ ಅವರೊಂದಿಗೆ ಹೇಳಿದ್ದಾರೆ. ಹಿಂದೂ ಧರ್ಮದ

“ಹಿಂದೂ ಧರ್ಮ ಮತ್ತು ಇಡೀ ಸನಾತನ ಸಮಾಜವನ್ನು ರಕ್ಷಿಸಲು ಇಂತಹ ಘೋಷಣೆಗಳು ಅವಶ್ಯಕ. ನಮ್ಮ ಎಲ್ಲಾ ಮಹಾಪುರುಷರು (ಮಹಾನ್ ಪುರುಷರು) ತಮ್ಮ ಪೋಷಕರ ಐದನೇ, ಆರನೇ ಅಥವಾ ಏಳನೇ ಮಗುವಾಗಿದ್ದಾರೆ. ಸ್ವಾಮಿ ವಿವೇಕಾನಂದರು ಅವರ ಪೋಷಕರ ಐದನೇ ಮಗು. ಹಾಗಾದರೆ ನಮಗೆ ಕನಿಷ್ಠ ಐದು ಮಕ್ಕಳಿಲ್ಲದಿದ್ದರೆ ನಾವು ನಮ್ಮ ಮಹಾಪುರುಷರನ್ನು (ಮಹಾನ್ ಪುರುಷರು) ಎಲ್ಲಿಂದ ಪಡೆಯುತ್ತೇವೆ” ಎಂದು ವರ್ಮಾ ಕೇಳಿದ್ದಾರೆ.

ಇದಕ್ಕೂ ಮೊದಲು, ಜನವರಿ 12 ರಂದು, ಬ್ರಾಹ್ಮಣ ಜಾತಿ ನಾಯಕ ಮತ್ತು ರಾಜ್ಯ ಸರ್ಕಾರದ ಪರಶುರಾಮ ಕಲ್ಯಾಣ ಮಂಡಳಿಯ ಮುಖ್ಯಸ್ಥ ವಿಷ್ಣು ರಾಜೋರಿಯಾ ಅವರು ನವವಿವಾಹಿತ ಬ್ರಾಹ್ಮಣ ದಂಪತಿಗಳಿಗೆ “ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ. ಬಹುಮಾನ ಪಡೆಯಿರಿ” ಎಂದು ಮನವಿ ಮಾಡಿದ್ದರು. ಜನವರಿ 12 ರಂದು ಇಂದೋರ್‌ನಲ್ಲಿ ನಡೆದ ಸನಧ್ಯ ಬ್ರಾಹ್ಮಣ ಸಮಾಜ ವಿವಾಹ ಪರಿಚಯ ಸಮ್ಮೇಳನದಲ್ಲಿ ರಾಜ್ಯ ಸಚಿವ ಸ್ಥಾನಮಾನ ಇರುವ ರಾಜೋರಿಯಾ ಅವರು ಈ ಮನವಿಯನ್ನು ಮಾಡಿದ್ದರು.

ದೇಶದಲ್ಲಿ ಹಿಂದೂಯೇತರ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಎಂದು ಹೇಳಿಕೊಂಡ ಅವರು, ಇಂದೋರ್‌ನಲ್ಲಿ ನಡೆದ ಬ್ರಾಹ್ಮಣರ ಸಭೆಯಲ್ಲಿ ಹಾಜರಿದ್ದ ಯುವಕರು ತಮ್ಮ ಮುಂಬರುವ ಪೀಳಿಗೆಯ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಮಾರ್ಚ್ 2023 ರಲ್ಲಿ, ಹಿಂದೂ ರಾಷ್ಟ್ರ ಬೆಂಬಲಿತ ಧಾರ್ಮಿಕ ಬೋಧಕ ಧೀರೇಂದ್ರ ಕೃಷ್ಣ ಶಾಸ್ತ್ರಿ ‘ಬಾಗೇಶ್ವರ ಬಾಬಾ’ ಕೂಡ ಹಿಂದೂಗಳು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕೆಂದು ಮನವಿ ಮಾಡಿದ್ದರು. ಒತೆಗೆ ಈ ನಾಲ್ಕು ಮಕ್ಕಳಲ್ಲಿ ಇಬ್ಬರನ್ನು ರಾಷ್ಟ್ರ ಮತ್ತು ಭಗವಾನ್ ರಾಮನ ಸೇವೆಗಾಗಿ ಬಿಡಬೇಕು ಎಂದು ಹೇಳಿದ್ದರು.

ಅಲ್ಲದೆ, ಜುಲೈ 2024 ರಲ್ಲಿ, ಪಂಚಾಯತಿ ನಿರಂಜನಿ ಅಖಾಡದ ಮಹಾಮಂಡಲೇಶ್ವರ ಎಂಬ ಹಿಂದೂ ಧರ್ಮಗುರು ಸ್ವಾಮಿ ಪ್ರೇಮಾನಂದ ಮಹಾರಾಜ್ ಅವರು ಪ್ರತಿಯೊಬ್ಬ ಹಿಂದೂ ಮಹಿಳೆಯೂ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಬೇಕೆಂದು ಕೇಳಿಕೊಂಡಿದ್ದರು.

ಇದನ್ನೂಓದಿ:  ಕೇರಳ | ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ಕೇರಳ| ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...