Homeಮುಖಪುಟಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ - ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

ಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ – ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

- Advertisement -
- Advertisement -

ಮಧ್ಯಪ್ರದೇಶದ ರಾಜ್ಯ ಸಚಿವ ಸ್ಥಾನಮಾನವಿರುವ ಬ್ರಾಹ್ಮಣ ಜಾತಿಯ ನಾಯಕನೊಬ್ಬ ತನ್ನ ಜಾತಿಯ ನವವಿವಾಹಿತ ದಂಪತಿಗಳಿಗೆ ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ.ಗಳನ್ನು ಪಡೆಯುವಂತೆ ಮನವಿ ಮಾಡಿದ ಒಂದು ತಿಂಗಳ ನಂತರ, ಅದೇ ರಾಜ್ಯದ ಮತ್ತೊಬ್ಬ ಜಾತಿಯ ನಾಯಕ ತನ್ನ ಸಮುದಾಯದ ನವವಿವಾಹಿತ ದಂಪತಿಗಳಿಗೆ ‘ಹಮ್ ದೋ ಹುಮಾರೆ ಪಾಂಚ್’ (ನಾವು ಇಬ್ಬರು ನಮ್ಮದು ಐದು) ಎಂಬ ಘೋಷಣೆಯನ್ನು ನೀಡಿದ್ದಾರೆ. ಹಿಂದೂ ಧರ್ಮದ

ಭಾನುವಾರ ನೈಋತ್ಯ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿಯಲ್ಲಿ ತಮ್ಮ ಮಾಝಿ-ಕಹಾರ್ ಜಾತಿಯ 201 ಆರ್ಥಿಕವಾಗಿ ದುರ್ಬಲ ದಂಪತಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ಮಾಡಿದ್ದಾರೆ. ಮಾಝಿ – ಕಹಾರ್ ಜಾತಿಯ ಖಾರ್ಗೋನ್ ಜಿಲ್ಲಾ ಅಧ್ಯಕ್ಷರಾಗಿರುವ ನರೇಂದ್ರ ವರ್ಮಾ, ಐದು ಮಕ್ಕಳಿಗೆ ಜನ್ಮ ನೀಡುವ ತಮ್ಮ ಜಾತಿಯ ಎಲ್ಲಾ ದಂಪತಿಗಳಿಗೆ 1 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಮುಖ ವಿಚಾರ ಏನೆಂದರೆ, ವರ್ಮಾ ಘೋಷಣೆ ಮಾಡಿರುವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡ ಜಿಲ್ಲಾ ಬಿಜೆಪಿ ಅಧ್ಯಕ್ಷೆ ನಂದಾ ಬ್ರಹ್ಮಣೆ ಮತ್ತು ನಗರ ಪುರಸಭೆಯ ಅಧ್ಯಕ್ಷೆ ಛಾಯಾ ಜೋಶಿ ಸೇರಿದಂತೆ ಜಿಲ್ಲೆಯ ಹಿರಿಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

“1990 ರ ದಶಕದಿಂದ ರಾಜಕೀಯ ಪಕ್ಷಗಳು ‘ಹಮ್ ದೋ ಹುಮಾರೆ ದೋ’ ಮತ್ತು ‘ಶೇರ್ ಕಾ ಬಚ್ಚಾ ಏಕ್ ಹೈ ಅಚ್ಚಾ’ ಮುಂತಾದ ಘೋಷಣೆಗಳ ಮೂಲಕ ನಮ್ಮ ಸಂಪ್ರದಾಯಗಳನ್ನು ಹಾಳುಮಾಡುತ್ತಿದ್ದಾರೆ. ಇಂತಹ ಘೋಷಣೆಗಳನ್ನು ಅನುಸರಿಸುವ ಮೂಲಕ, ಮಾಝಿ-ಕಹಾರ್ ಜಾತಿ ಸೇರಿದಂತೆ ಇಡೀ ಹಿಂದೂ ಸಮುದಾಯವು ಭವಿಷ್ಯದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾವು ನಮ್ಮ ಜಾತಿಗೆ ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ನೀಡುತ್ತಿದ್ದೇವೆ. ಈ ಘೋಷಣೆಯು ನಮ್ಮ ಆಚರಣೆಗಳು ಮುಂದುವರಿಯಲು ಸಹ ಸಹಾಯ ಮಾಡುತ್ತದೆ” ಎಂದು ವರ್ಮಾ ಹೊಸ ಖಾರ್ಗೋನ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ನಂದ ಬ್ರಹ್ಮಣೆ ಅವರೊಂದಿಗೆ ಹೇಳಿದ್ದಾರೆ. ಹಿಂದೂ ಧರ್ಮದ

“ಹಿಂದೂ ಧರ್ಮ ಮತ್ತು ಇಡೀ ಸನಾತನ ಸಮಾಜವನ್ನು ರಕ್ಷಿಸಲು ಇಂತಹ ಘೋಷಣೆಗಳು ಅವಶ್ಯಕ. ನಮ್ಮ ಎಲ್ಲಾ ಮಹಾಪುರುಷರು (ಮಹಾನ್ ಪುರುಷರು) ತಮ್ಮ ಪೋಷಕರ ಐದನೇ, ಆರನೇ ಅಥವಾ ಏಳನೇ ಮಗುವಾಗಿದ್ದಾರೆ. ಸ್ವಾಮಿ ವಿವೇಕಾನಂದರು ಅವರ ಪೋಷಕರ ಐದನೇ ಮಗು. ಹಾಗಾದರೆ ನಮಗೆ ಕನಿಷ್ಠ ಐದು ಮಕ್ಕಳಿಲ್ಲದಿದ್ದರೆ ನಾವು ನಮ್ಮ ಮಹಾಪುರುಷರನ್ನು (ಮಹಾನ್ ಪುರುಷರು) ಎಲ್ಲಿಂದ ಪಡೆಯುತ್ತೇವೆ” ಎಂದು ವರ್ಮಾ ಕೇಳಿದ್ದಾರೆ.

ಇದಕ್ಕೂ ಮೊದಲು, ಜನವರಿ 12 ರಂದು, ಬ್ರಾಹ್ಮಣ ಜಾತಿ ನಾಯಕ ಮತ್ತು ರಾಜ್ಯ ಸರ್ಕಾರದ ಪರಶುರಾಮ ಕಲ್ಯಾಣ ಮಂಡಳಿಯ ಮುಖ್ಯಸ್ಥ ವಿಷ್ಣು ರಾಜೋರಿಯಾ ಅವರು ನವವಿವಾಹಿತ ಬ್ರಾಹ್ಮಣ ದಂಪತಿಗಳಿಗೆ “ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ. ಬಹುಮಾನ ಪಡೆಯಿರಿ” ಎಂದು ಮನವಿ ಮಾಡಿದ್ದರು. ಜನವರಿ 12 ರಂದು ಇಂದೋರ್‌ನಲ್ಲಿ ನಡೆದ ಸನಧ್ಯ ಬ್ರಾಹ್ಮಣ ಸಮಾಜ ವಿವಾಹ ಪರಿಚಯ ಸಮ್ಮೇಳನದಲ್ಲಿ ರಾಜ್ಯ ಸಚಿವ ಸ್ಥಾನಮಾನ ಇರುವ ರಾಜೋರಿಯಾ ಅವರು ಈ ಮನವಿಯನ್ನು ಮಾಡಿದ್ದರು.

ದೇಶದಲ್ಲಿ ಹಿಂದೂಯೇತರ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಎಂದು ಹೇಳಿಕೊಂಡ ಅವರು, ಇಂದೋರ್‌ನಲ್ಲಿ ನಡೆದ ಬ್ರಾಹ್ಮಣರ ಸಭೆಯಲ್ಲಿ ಹಾಜರಿದ್ದ ಯುವಕರು ತಮ್ಮ ಮುಂಬರುವ ಪೀಳಿಗೆಯ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಮಾರ್ಚ್ 2023 ರಲ್ಲಿ, ಹಿಂದೂ ರಾಷ್ಟ್ರ ಬೆಂಬಲಿತ ಧಾರ್ಮಿಕ ಬೋಧಕ ಧೀರೇಂದ್ರ ಕೃಷ್ಣ ಶಾಸ್ತ್ರಿ ‘ಬಾಗೇಶ್ವರ ಬಾಬಾ’ ಕೂಡ ಹಿಂದೂಗಳು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕೆಂದು ಮನವಿ ಮಾಡಿದ್ದರು. ಒತೆಗೆ ಈ ನಾಲ್ಕು ಮಕ್ಕಳಲ್ಲಿ ಇಬ್ಬರನ್ನು ರಾಷ್ಟ್ರ ಮತ್ತು ಭಗವಾನ್ ರಾಮನ ಸೇವೆಗಾಗಿ ಬಿಡಬೇಕು ಎಂದು ಹೇಳಿದ್ದರು.

ಅಲ್ಲದೆ, ಜುಲೈ 2024 ರಲ್ಲಿ, ಪಂಚಾಯತಿ ನಿರಂಜನಿ ಅಖಾಡದ ಮಹಾಮಂಡಲೇಶ್ವರ ಎಂಬ ಹಿಂದೂ ಧರ್ಮಗುರು ಸ್ವಾಮಿ ಪ್ರೇಮಾನಂದ ಮಹಾರಾಜ್ ಅವರು ಪ್ರತಿಯೊಬ್ಬ ಹಿಂದೂ ಮಹಿಳೆಯೂ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಬೇಕೆಂದು ಕೇಳಿಕೊಂಡಿದ್ದರು.

ಇದನ್ನೂಓದಿ:  ಕೇರಳ | ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ಕೇರಳ| ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...