Homeಮುಖಪುಟಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ - ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

ಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ – ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

- Advertisement -
- Advertisement -

ಮಧ್ಯಪ್ರದೇಶದ ರಾಜ್ಯ ಸಚಿವ ಸ್ಥಾನಮಾನವಿರುವ ಬ್ರಾಹ್ಮಣ ಜಾತಿಯ ನಾಯಕನೊಬ್ಬ ತನ್ನ ಜಾತಿಯ ನವವಿವಾಹಿತ ದಂಪತಿಗಳಿಗೆ ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ.ಗಳನ್ನು ಪಡೆಯುವಂತೆ ಮನವಿ ಮಾಡಿದ ಒಂದು ತಿಂಗಳ ನಂತರ, ಅದೇ ರಾಜ್ಯದ ಮತ್ತೊಬ್ಬ ಜಾತಿಯ ನಾಯಕ ತನ್ನ ಸಮುದಾಯದ ನವವಿವಾಹಿತ ದಂಪತಿಗಳಿಗೆ ‘ಹಮ್ ದೋ ಹುಮಾರೆ ಪಾಂಚ್’ (ನಾವು ಇಬ್ಬರು ನಮ್ಮದು ಐದು) ಎಂಬ ಘೋಷಣೆಯನ್ನು ನೀಡಿದ್ದಾರೆ. ಹಿಂದೂ ಧರ್ಮದ

ಭಾನುವಾರ ನೈಋತ್ಯ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿಯಲ್ಲಿ ತಮ್ಮ ಮಾಝಿ-ಕಹಾರ್ ಜಾತಿಯ 201 ಆರ್ಥಿಕವಾಗಿ ದುರ್ಬಲ ದಂಪತಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ಮಾಡಿದ್ದಾರೆ. ಮಾಝಿ – ಕಹಾರ್ ಜಾತಿಯ ಖಾರ್ಗೋನ್ ಜಿಲ್ಲಾ ಅಧ್ಯಕ್ಷರಾಗಿರುವ ನರೇಂದ್ರ ವರ್ಮಾ, ಐದು ಮಕ್ಕಳಿಗೆ ಜನ್ಮ ನೀಡುವ ತಮ್ಮ ಜಾತಿಯ ಎಲ್ಲಾ ದಂಪತಿಗಳಿಗೆ 1 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಮುಖ ವಿಚಾರ ಏನೆಂದರೆ, ವರ್ಮಾ ಘೋಷಣೆ ಮಾಡಿರುವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡ ಜಿಲ್ಲಾ ಬಿಜೆಪಿ ಅಧ್ಯಕ್ಷೆ ನಂದಾ ಬ್ರಹ್ಮಣೆ ಮತ್ತು ನಗರ ಪುರಸಭೆಯ ಅಧ್ಯಕ್ಷೆ ಛಾಯಾ ಜೋಶಿ ಸೇರಿದಂತೆ ಜಿಲ್ಲೆಯ ಹಿರಿಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

“1990 ರ ದಶಕದಿಂದ ರಾಜಕೀಯ ಪಕ್ಷಗಳು ‘ಹಮ್ ದೋ ಹುಮಾರೆ ದೋ’ ಮತ್ತು ‘ಶೇರ್ ಕಾ ಬಚ್ಚಾ ಏಕ್ ಹೈ ಅಚ್ಚಾ’ ಮುಂತಾದ ಘೋಷಣೆಗಳ ಮೂಲಕ ನಮ್ಮ ಸಂಪ್ರದಾಯಗಳನ್ನು ಹಾಳುಮಾಡುತ್ತಿದ್ದಾರೆ. ಇಂತಹ ಘೋಷಣೆಗಳನ್ನು ಅನುಸರಿಸುವ ಮೂಲಕ, ಮಾಝಿ-ಕಹಾರ್ ಜಾತಿ ಸೇರಿದಂತೆ ಇಡೀ ಹಿಂದೂ ಸಮುದಾಯವು ಭವಿಷ್ಯದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾವು ನಮ್ಮ ಜಾತಿಗೆ ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ನೀಡುತ್ತಿದ್ದೇವೆ. ಈ ಘೋಷಣೆಯು ನಮ್ಮ ಆಚರಣೆಗಳು ಮುಂದುವರಿಯಲು ಸಹ ಸಹಾಯ ಮಾಡುತ್ತದೆ” ಎಂದು ವರ್ಮಾ ಹೊಸ ಖಾರ್ಗೋನ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ನಂದ ಬ್ರಹ್ಮಣೆ ಅವರೊಂದಿಗೆ ಹೇಳಿದ್ದಾರೆ. ಹಿಂದೂ ಧರ್ಮದ

“ಹಿಂದೂ ಧರ್ಮ ಮತ್ತು ಇಡೀ ಸನಾತನ ಸಮಾಜವನ್ನು ರಕ್ಷಿಸಲು ಇಂತಹ ಘೋಷಣೆಗಳು ಅವಶ್ಯಕ. ನಮ್ಮ ಎಲ್ಲಾ ಮಹಾಪುರುಷರು (ಮಹಾನ್ ಪುರುಷರು) ತಮ್ಮ ಪೋಷಕರ ಐದನೇ, ಆರನೇ ಅಥವಾ ಏಳನೇ ಮಗುವಾಗಿದ್ದಾರೆ. ಸ್ವಾಮಿ ವಿವೇಕಾನಂದರು ಅವರ ಪೋಷಕರ ಐದನೇ ಮಗು. ಹಾಗಾದರೆ ನಮಗೆ ಕನಿಷ್ಠ ಐದು ಮಕ್ಕಳಿಲ್ಲದಿದ್ದರೆ ನಾವು ನಮ್ಮ ಮಹಾಪುರುಷರನ್ನು (ಮಹಾನ್ ಪುರುಷರು) ಎಲ್ಲಿಂದ ಪಡೆಯುತ್ತೇವೆ” ಎಂದು ವರ್ಮಾ ಕೇಳಿದ್ದಾರೆ.

ಇದಕ್ಕೂ ಮೊದಲು, ಜನವರಿ 12 ರಂದು, ಬ್ರಾಹ್ಮಣ ಜಾತಿ ನಾಯಕ ಮತ್ತು ರಾಜ್ಯ ಸರ್ಕಾರದ ಪರಶುರಾಮ ಕಲ್ಯಾಣ ಮಂಡಳಿಯ ಮುಖ್ಯಸ್ಥ ವಿಷ್ಣು ರಾಜೋರಿಯಾ ಅವರು ನವವಿವಾಹಿತ ಬ್ರಾಹ್ಮಣ ದಂಪತಿಗಳಿಗೆ “ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ. ಬಹುಮಾನ ಪಡೆಯಿರಿ” ಎಂದು ಮನವಿ ಮಾಡಿದ್ದರು. ಜನವರಿ 12 ರಂದು ಇಂದೋರ್‌ನಲ್ಲಿ ನಡೆದ ಸನಧ್ಯ ಬ್ರಾಹ್ಮಣ ಸಮಾಜ ವಿವಾಹ ಪರಿಚಯ ಸಮ್ಮೇಳನದಲ್ಲಿ ರಾಜ್ಯ ಸಚಿವ ಸ್ಥಾನಮಾನ ಇರುವ ರಾಜೋರಿಯಾ ಅವರು ಈ ಮನವಿಯನ್ನು ಮಾಡಿದ್ದರು.

ದೇಶದಲ್ಲಿ ಹಿಂದೂಯೇತರ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಎಂದು ಹೇಳಿಕೊಂಡ ಅವರು, ಇಂದೋರ್‌ನಲ್ಲಿ ನಡೆದ ಬ್ರಾಹ್ಮಣರ ಸಭೆಯಲ್ಲಿ ಹಾಜರಿದ್ದ ಯುವಕರು ತಮ್ಮ ಮುಂಬರುವ ಪೀಳಿಗೆಯ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಮಾರ್ಚ್ 2023 ರಲ್ಲಿ, ಹಿಂದೂ ರಾಷ್ಟ್ರ ಬೆಂಬಲಿತ ಧಾರ್ಮಿಕ ಬೋಧಕ ಧೀರೇಂದ್ರ ಕೃಷ್ಣ ಶಾಸ್ತ್ರಿ ‘ಬಾಗೇಶ್ವರ ಬಾಬಾ’ ಕೂಡ ಹಿಂದೂಗಳು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕೆಂದು ಮನವಿ ಮಾಡಿದ್ದರು. ಒತೆಗೆ ಈ ನಾಲ್ಕು ಮಕ್ಕಳಲ್ಲಿ ಇಬ್ಬರನ್ನು ರಾಷ್ಟ್ರ ಮತ್ತು ಭಗವಾನ್ ರಾಮನ ಸೇವೆಗಾಗಿ ಬಿಡಬೇಕು ಎಂದು ಹೇಳಿದ್ದರು.

ಅಲ್ಲದೆ, ಜುಲೈ 2024 ರಲ್ಲಿ, ಪಂಚಾಯತಿ ನಿರಂಜನಿ ಅಖಾಡದ ಮಹಾಮಂಡಲೇಶ್ವರ ಎಂಬ ಹಿಂದೂ ಧರ್ಮಗುರು ಸ್ವಾಮಿ ಪ್ರೇಮಾನಂದ ಮಹಾರಾಜ್ ಅವರು ಪ್ರತಿಯೊಬ್ಬ ಹಿಂದೂ ಮಹಿಳೆಯೂ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಬೇಕೆಂದು ಕೇಳಿಕೊಂಡಿದ್ದರು.

ಇದನ್ನೂಓದಿ:  ಕೇರಳ | ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ಕೇರಳ| ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...