Homeಕರ್ನಾಟಕರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ಇಂದು ದೇಶಕ್ಕೆ ಅನ್ನ ಕೊಡುತ್ತಿರುವುದು ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳಲ್ಲ, ಬದಲಿಗೆ ಈ ದೇಶದ ರೈತರಾಗಿದ್ದಾರೆ. ಇಂತಹ ರೈತ ವಿರೋಧಿ ಮಸೂದೆಗಳು ನಮಗೆ ಬೇಡ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಸರ್ಕಾರ ಜಾರಿಗೆ ತರುತ್ತಿರುವ ರೈತವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕದ ರೈತ, ದಲಿತ, ಕಾರ್ಮಿಕ ಸಂಘಟನೆಗಳು ಸೇರಿ ಇಂದು ಬೆಂಗಳೂರಿನಲ್ಲಿ ಬೃಹತ್ ಐಕ್ಯ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ನುರಾರು ರೈತರು ರಸ್ತೆಯ ನಡುವೆ ಅರೆಬೆತ್ತಲೆ ಕುಳಿತು ಸರ್ಕಾರದ ರೈತವಿರೋಧಿ ಧೋರಣೆ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ಹೊರಟ ಹೋರಾಟಗಾರರನ್ನು ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಬಳಿ ಪೊಲೀಸರು ತಡೆದಾಗ ಹೋರಾಟಗಾರರು ರಸ್ತೆಯ ನಡುವೆಯೇ ಅರೆ ಬೆತ್ತಲೆ ಕುಳಿತು, ರಸ್ತೆ ತಡೆ ನಡೆಸಿದರು.

ಇಂದು ದೇಶಕ್ಕೆ ಅನ್ನ ಕೊಡುತ್ತಿರುವುದು ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳಲ್ಲ, ಬದಲಿಗೆ ಈ ದೇಶದ ರೈತರಾಗಿದ್ದಾರೆ. ಇಂತಹ ರೈತ ವಿರೋಧಿ ಮಸೂದೆಗಳು ನಮಗೆ ಬೇಡ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇರ ಪ್ರಸಾರ ಮಾಡಲು ಇಲ್ಲಿ ಕ್ಲಿಕ್ ಮಾಡಿ

https://www.facebook.com/watch/?v=672452536704037&extid=KPO1rMRrJPYJr2rd

ರೈತರಿಗೆ ವೈಜ್ಞಾನಿಕ ಬೆಲೆ ನೀಡುತ್ತಿಲ್ಲ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಅವರನ್ನು ಅತಂತ್ರಗೊಳಿಸಲಾಗುತ್ತಿದೆ. ಭುಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಭೂಮಿ ಕಿತ್ತುಕೊಳ್ಳಲಾಗುತ್ತಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸಲು ರೈತರಿಗೆ ಅವಕಾಶ ನೀಡುತ್ತಿಲ್ಲ, ಇದು ರೈತ ವಿರೋಧಿ ಸರ್ಕಾರ ಎಂದು ರೈತರು ಅಸಮಾನಧಾನ ವ್ಯಕ್ತಪಡಿಸಿದರು.

ಬೃಹತ್ ಮೆರವಣಿಗೆಯನ್ನು ಪೊಲೀಸರು ತಡೆದಾಗ ಕೋಪೋದ್ರೋಕ್ತರಾದ ರೈತರು ತಮ್ಮ ಮೇಲು ಅಂಗಿಗಳನ್ನು ಕಳಚಿ ಅರೆಬೆತ್ತಲೆ ಪ್ರತಿಭಟನೆಗೆ ಮುಂದಾದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ನಂತರ ರೈತರ ಒತ್ತಾಯಕ್ಕೆ ಮಣಿದ ಪೊಲೀಸರು ಮೆರವಣಿಗೆಗೆ ಅವಕಾಶಮಾಡಿಕೊಟ್ಟರು. ರೈತರು ಇದೀಗ ಫ್ರೀಡಂ ಪಾರ್ಕ್‌ ಕಡೆಗೆ ಮೆರವಣಿಗೆ ಹೊರಟಿದ್ದಾರೆ. ಅಲ್ಲಿ ಸರ್ಕಾರಕ್ಕೆ ಪ್ರತಿಯಾಗಿ ಪರ್ಯಾಯ ಅಧಿವೇಶನ ನಡೆಯಲಿದೆ.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೋರಾಟವನ್ನು ಮುನ್ನಡೆಸಿದರು. ಇದೇ ಸಂದರ್ಭದಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಯೋಗೇಂದ್ರ ಯಾದವ್‌ರವರು ಉಪಸ್ಥಿತರಿದ್ದರು.


ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...