Homeಮುಖಪುಟ370ನೇ ವಿಧಿ ರದ್ದು ವಿರೋಧಿಸಿ ಪ್ರತಿಭಟನೆ : ಫರೂಕ್ ಅಬ್ಬುಲ್ಲಾ ತಂಗಿ, ಮಗಳ ಬಂಧನ

370ನೇ ವಿಧಿ ರದ್ದು ವಿರೋಧಿಸಿ ಪ್ರತಿಭಟನೆ : ಫರೂಕ್ ಅಬ್ಬುಲ್ಲಾ ತಂಗಿ, ಮಗಳ ಬಂಧನ

- Advertisement -
- Advertisement -

ಕೇಂದ್ರ ಸರ್ಕಾರ ಸಂವಿಧಾನ 370ನೇ ವಿಧಿಯನ್ನು ರದ್ದುಗೊಳಿಸಿ ವಿಶೇಷ ಸ್ಥಾನವನ್ನು ತೆಗೆದುಹಾಕಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಫರೂಕ್ ಅಬ್ದುಲ್ಲಾ ಅವರ ತಂಗಿ ಸುರೈಯಾ ಮಗಳು ಸಫಿಯಾ ಸೇರಿದಂತೆ ಹಲವು ಮಹಿಳಾ ಕಾರ್ಯಕರ್ತೆಯರನ್ನು ಶ್ರೀನಗರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಸುರೈಯಾ ಮತ್ತು ಸಫಿಯಾ ನೇತೃತ್ವದಲ್ಲಿ ಮಹಿಳೆಯರು ಕೈಗಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನೆಯ ಆರಂಭದಲ್ಲೇ ಪೊಲೀಸರು ಮಹಿಳೆಯರು ಗುಂಪು ಸೇರುವುದರನ್ನು ತಡೆದರು. ಗುಂಪನ್ನು ಚದರಿಸಲು ಪ್ರಯತ್ನಿಸಿದರು.

ಪೊಲೀಸರು ತಡೆದರೂ ಬಿಡದೆ ಪ್ರತಿಭಟನಾಕಾರರು ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದರು. ಸ್ಥಳಕ್ಕೆ ಬಂದ ಸಿಆರ್ ಪಿಎಫ್ ಪೊಲೀಸರು ಮಹಿಳಾ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪೊಲೀಸ್ ವ್ಯಾನ್ ಗೆ ಹತ್ತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು ಕಾಶ್ಮೀರದ ಮಹಿಳೆಯರಾದ ನಾವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ ಮಾನವನ್ನು ಏಕಪಕ್ಷೀಯವಾಗಿ ಕೇಂದ್ರ ಸರ್ಕಾರ ರದ್ದು ಮಾಡಿದೆ. ಕೇಂದ್ರದ ಈ ಕ್ರಮವನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಕಣಿವೆಯಲ್ಲಿ ನಾಗರಿಕ ಸ್ವಾತಂತ್ರ್ಯವನ್ನು ಮತ್ತು ಮೂಲಭೂತ ಹಕ್ಕುಗಳನ್ನು ಮರುಸ್ಥಾಪಿಸಬೇಕು. ಈಗಾಗಲೇ ಬಂಧಿಸಿರುವ ಮತ್ತು ವಶಕ್ಕೆ ತೆಗೆದುಕೊಂಡಿರುವ ಎಲ್ಲರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನಿಯೋಜಿಸಿರುವ ಸೇನೆಯನ್ನು ಹಿಂಪಡೆಯಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...