Homeಕರ್ನಾಟಕಸೋಮಶೇಖರ್‌ ರೆಡ್ಡಿ ಹೇಳಿಕೆ ಖಂಡಿಸಿ ಬಳ್ಳಾರಿಯಲ್ಲಿ ಭಾರೀ ಪ್ರತಿಭಟನೆ... ದೂರು ದಾಖಲಿಸಲು ಆಗ್ರಹ

ಸೋಮಶೇಖರ್‌ ರೆಡ್ಡಿ ಹೇಳಿಕೆ ಖಂಡಿಸಿ ಬಳ್ಳಾರಿಯಲ್ಲಿ ಭಾರೀ ಪ್ರತಿಭಟನೆ… ದೂರು ದಾಖಲಿಸಲು ಆಗ್ರಹ

- Advertisement -
- Advertisement -

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಿನ್ನೆ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಪ್ರಚೋದನಾಕಾರಿ ಭಾಷನ ಮಾಡಿದ್ದನ್ನು ಖಂಡಿಸಿ ಇಂದು ಬಳ್ಳಾರಿಯಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು, ಕೂಡಲೇ ಪೊಲೀಸರು ದೂರು ದಾಖಲಿಸುವಂತೆ ಆಗ್ರಹಿಸಿದ್ದಾರೆ.

ನಗರದ ಶಾದಿಮಹಲ್‌ ಬಳಿ ಜಮಾವಣೆಗೊಂಡ ಸಹಸ್ರಾರು ಜನರು ಸೋಮಶೇಖರ್‌ ರೆಡ್ಡಿಯ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಅಲ್ಲಿಂದ ನಿನ್ನೆ ಸೋಮಶೇಖರ್‌ ರೆಡ್ಡಿ ಭಾಷಣ ಮಾಡಿದ್ದ ಗಡಗಿ ಚೆನ್ನಪ್ಪ ವೃತ್ತಕ್ಕೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ರಸ್ತೆಗಳನ್ನು ಬಂದ್‌ ಮಾಡಿದ್ದಾರೆ.

ದಿಢೀರ್‌ ಪ್ರತಿಭಟನೆಯಿಂದ ಗೊಂದಲಗೊಂಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸಪಡುತ್ತಿದ್ದಾರೆ. ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಹೆಚ್ಚುವರಿ ಎಸ್ಪಿ ಬಿ.ಎನ್‌ ಲಾವಣ್ಯ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದಾರೆ.

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ಪಾಲ್ಗೊಂಡಿದ್ದು ಎಫ್‌ಐಆರ್‌ ದಾಖಲಾಗುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಿನ್ನೆ ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ತಮ್ಮ ನಾಲಿಗೆ ಹರಿಯಬಿಟ್ಟಿದ್ದರು. ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ, ನಾವು 80% ಇರೋರು. ನೀವು ಬರೀ 17% ಇರೋದು. ನಾವು ತಿರುಗಿಬಿದ್ರೆ ನಿಮ್‌ ಪರಿಸ್ಥಿತಿ ಎನಾಗುತ್ತೆ ಗೊತ್ತಾ? ಎಚ್ಚರವಿರಲಿ, ಮೈಮೇಲೆ ಎಚ್ಚರವಿಟ್ಟುಕೊಂಡು ನಮ್‌ ದೇಶದಲ್ಲಿರಿ… ಎಂದಿದ್ದರು.

ಶಾಸಕರ ಹೇಳಿಕೆಗೆ ಸಾಮಾಜಿಕ ತಾಲತಾಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನಮ್ಮ ಸರ್ವಜನಾಂಗದ ಶಾಂತಿಯ ತೋಟ ಇಲ್ಲಿ ದ್ವೇಷಕ್ಕೆ ಅವಕಾಶವಿಲ್ಲ ಎಂದು ಹಲವರು ಬುದ್ದಿಮಾತು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...