Homeಕರ್ನಾಟಕಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

ಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

- Advertisement -
- Advertisement -

ಇಂದು ದೇಶಾದ್ಯಂತ ಪೌರತ್ವ ಕಾಯ್ದೆಯ ವಿರುದ್ಧ ಶಾಂತಿಯುವ ಪ್ರತಿಭಟನೆಗೆ ಪ್ರಗತಿಪರ ಸಂಘಟನೆಗಳು ಮತ್ತು ಎಡಪಕ್ಷಗಳು ಪ್ರತಿಭಟನೆಗೆ ಕರೆ ನೀಡಿದ್ದವರು. ಜನರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದರಿಂದ ಬೆದರಿದ ಸರ್ಕಾರಗಳು ಹಲವು ಬಿಜೆಪಿ ಆಡಳಿತವಿರುವಲ್ಲಿ ಪ್ರತಿಭಟನೆಗಳಿಗೆ ಅನುಮತಿ ರದ್ದುಪಡಿಸಿ 144 ಸೆಕ್ಷನ್‌ ಜಾರಿಗೊಳಿಸಿದ್ದಾರೆ.

ಆದರೆ ನಿಷೇದಾಜ್ಞೆಯನ್ನು ಧಿಕ್ಕರಿಸಿರುವ ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆಗೆ ದೇಶದೆಲ್ಲೆಡೆ ಮುಂದಾಗಿದ್ದಾರೆ. ಅದರಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ಪ್ರತಿಭಟನೆಗಳು ಇನ್ನು ನಡೆಯುತ್ತಲೇ ಇವೆ.

ಈ ನಡುವೆ ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಪ್ರಪಂಚದ ಖ್ಯಾತ ಇತಿಹಾಸಕಾರರಾದ ರಾಮಚಂದ್ರ ಗುಹರವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

ದುರಹಂಕಾರಿ ಆಳುವವರೇ, ಇಂತಹ ಚಿತ್ರಗಳು ನಿಮ್ಮ ವಿಶ್ವಗುರುವಿನ ಮರ್ಯಾದೆಯನ್ನು ಜಾಗತಿಕವಾಗಿ ಇನ್ನಷ್ಟು ಹರಾಜು ಹಾಕುತ್ತವೆ. ರಾಮಚಂದ್ರ ಗುಹಾ ಎಂದರೆ ಯಾರು ಎನ್ನುವುದು ನಿಮಗೆ ಗೊತ್ತೇ?

ಶಾಂತಿಯುತ ಪ್ರತಿಭಟನೆಗಳಿಗೂ ಸಹ ಅನುಮತಿ ಇಲ್ಲ. ಮೂಲಭೂತ ಹಕ್ಕುಗಳು ಭಾರತದಲ್ಲಿ ಜೋಕ್‌ಗಳಾಗಿವೆ ಎಂದು ಶ್ರೀನಿವಾಸ್‌ ಕಾರ್ಕಳರವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಭಾರತದ ಅಗ್ರಗಣ್ಯ ಸಾರ್ವಜನಿಕ ಬುದ್ಧಿಜೀವಿಗಳಲ್ಲಿ ಒಬ್ಬರಾದ ರಾಮಚಂದ್ರ ಗುಹಾ, ಗಾಂಧಿ ಮತ್ತು ಅಂಬೇಡ್ಕರ್‌ರವರ ಪೋಸ್ಟರ್ ಗಳನ್ನು ಎತ್ತಿ ಹಿಡಿದಿದ್ದಕ್ಕಾಗಿ ಮತ್ತು ಸಿಎಎ-ಎನ್ಆರ್ಸಿ ಬಗ್ಗೆ ಪತ್ರಿಕೆಗಳೊಂದಿಗೆ ಮಾತನಾಡಿದ್ದಕ್ಕಾಗಿ ಬೆಂಗಳೂರಿನಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಮತ್ತು ಬಂಧಿಸಿದ್ದಾರೆ. ಭಾರತವು ಸರ್ವಾಧಿಕಾರಕ್ಕೆ ಇಳಿಯುತ್ತಿರುವ ಮೈಲಿಗಲ್ಲು ಇದಾಗಿದೆ ಎಂದು ಖ್ಯಾತ ಬರಹಗಾರರ ಶಿವಂ ವಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಚಿಕೆಗೆಟ್ಟ ಸರ್ಕಾರ ಒಕ್ಕೂಟದ ರಾಜಧಾನಿ ದೆಹಲಿಯ ಹೆಚ್ಚಿನ ಕಡೆಗಳಲ್ಲಿ ಮೊಬೈಲ್ ಸಂಪರ್ಕ ಸ್ಥಗಿತಗೊಳಿಸಿದೆ . ಲೋಕಪಾಲ್ ಚಳುವಳಿಯ ಸಮಯದಲ್ಲಿ ಹಿಂದಿನ ಸರಕಾರವೂ ಜನ ಸೇರಲು ಬಿಡದೆ ಇಂತದ್ದೊಂದು ಕ್ರಮಕ್ಕೆ ಮುಂದಾಗಬಹುದಿತ್ತು. ಆದರೆ ಮಾಡಿರಲಿಲ್ಲ ಯಾಕೆ? ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ಸರ್ಕಾರವೊಂದು ನಡೆದುಕೊಳ್ಳುವ ರೀತಿಯದು. ಬೆಂಗಳೂರಿನಲ್ಲಿ ನಿಷೇದಾಜ್ಞೆಯ ಹೊರತಾಗಿಯೂ ಪ್ರತಿಭಟನೆಗಳಾಗಿವೆ. ಎಲ್ಲೂ ಹಿಂಸಾಚಾರಕ್ಕೆ ತಿರುಗಿದ ಸುದ್ದಿ ಇದುವರೆಗೆ ಬಂದಿಲ್ಲ . ಈ ಮಧ್ಯೆ ಕರ್ನಾಟಕ ಹೈಕೋರ್ಟಿನಲ್ಲಿ ಸರ್ಕಾರದ ನಿಷೇದಾಜ್ಞೆ ಪ್ರಶ್ನಿಸಿ 40 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ನಾಳೆ ಅದು ವಿಚಾರಣೆಗೆ ಬರಲಿದೆ. ಅಲ್ಲಿಯ ತನಕ ನಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ. ಸರ್ಕಾರಕ್ಕೆ ನಾಳೆ ಕೋರ್ಟಿನಲ್ಲಿ ಕೊಡಲು ಹಿಂಸಾಚಾರದ ಕಾರಣ ಇಲ್ಲದಿರಲಿ ಎಂದು ಕುಂಟಾಡಿ ನಿತೇಶ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಬಿಜೆಪಿ ಅಡಿಯಲ್ಲಿ ಭಾರತ !!! ರಾಮಚಂದ್ರ ಗುಹಾ ಯಾರೆಂದು ನಿಮಗೆ ತಿಳಿದಿಲ್ಲ- ಅದನ್ನು ಮರೆತುಬಿಡಿ. ಆದರೆ ಅವರು ಗಾಂಧಿಯವರ ಆತ್ಮಚರಿತ್ರೆಯನ್ನು ವಿರೋಧಿಸುತ್ತಿದ್ದರು. ಗಾಂಧೀಜಿ ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ದಶಕಗಳಿಂದ ಪ್ರತಿಭಟಿಸಿದ ವ್ಯಕ್ತಿ ಎಂದು ವಿನ್ನೀತ್‌ ಕೊನ್ನಟ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...