Homeಕರ್ನಾಟಕಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

ಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

- Advertisement -
- Advertisement -

ಇಂದು ದೇಶಾದ್ಯಂತ ಪೌರತ್ವ ಕಾಯ್ದೆಯ ವಿರುದ್ಧ ಶಾಂತಿಯುವ ಪ್ರತಿಭಟನೆಗೆ ಪ್ರಗತಿಪರ ಸಂಘಟನೆಗಳು ಮತ್ತು ಎಡಪಕ್ಷಗಳು ಪ್ರತಿಭಟನೆಗೆ ಕರೆ ನೀಡಿದ್ದವರು. ಜನರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದರಿಂದ ಬೆದರಿದ ಸರ್ಕಾರಗಳು ಹಲವು ಬಿಜೆಪಿ ಆಡಳಿತವಿರುವಲ್ಲಿ ಪ್ರತಿಭಟನೆಗಳಿಗೆ ಅನುಮತಿ ರದ್ದುಪಡಿಸಿ 144 ಸೆಕ್ಷನ್‌ ಜಾರಿಗೊಳಿಸಿದ್ದಾರೆ.

ಆದರೆ ನಿಷೇದಾಜ್ಞೆಯನ್ನು ಧಿಕ್ಕರಿಸಿರುವ ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆಗೆ ದೇಶದೆಲ್ಲೆಡೆ ಮುಂದಾಗಿದ್ದಾರೆ. ಅದರಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ಪ್ರತಿಭಟನೆಗಳು ಇನ್ನು ನಡೆಯುತ್ತಲೇ ಇವೆ.

ಈ ನಡುವೆ ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಪ್ರಪಂಚದ ಖ್ಯಾತ ಇತಿಹಾಸಕಾರರಾದ ರಾಮಚಂದ್ರ ಗುಹರವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

ದುರಹಂಕಾರಿ ಆಳುವವರೇ, ಇಂತಹ ಚಿತ್ರಗಳು ನಿಮ್ಮ ವಿಶ್ವಗುರುವಿನ ಮರ್ಯಾದೆಯನ್ನು ಜಾಗತಿಕವಾಗಿ ಇನ್ನಷ್ಟು ಹರಾಜು ಹಾಕುತ್ತವೆ. ರಾಮಚಂದ್ರ ಗುಹಾ ಎಂದರೆ ಯಾರು ಎನ್ನುವುದು ನಿಮಗೆ ಗೊತ್ತೇ?

ಶಾಂತಿಯುತ ಪ್ರತಿಭಟನೆಗಳಿಗೂ ಸಹ ಅನುಮತಿ ಇಲ್ಲ. ಮೂಲಭೂತ ಹಕ್ಕುಗಳು ಭಾರತದಲ್ಲಿ ಜೋಕ್‌ಗಳಾಗಿವೆ ಎಂದು ಶ್ರೀನಿವಾಸ್‌ ಕಾರ್ಕಳರವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಭಾರತದ ಅಗ್ರಗಣ್ಯ ಸಾರ್ವಜನಿಕ ಬುದ್ಧಿಜೀವಿಗಳಲ್ಲಿ ಒಬ್ಬರಾದ ರಾಮಚಂದ್ರ ಗುಹಾ, ಗಾಂಧಿ ಮತ್ತು ಅಂಬೇಡ್ಕರ್‌ರವರ ಪೋಸ್ಟರ್ ಗಳನ್ನು ಎತ್ತಿ ಹಿಡಿದಿದ್ದಕ್ಕಾಗಿ ಮತ್ತು ಸಿಎಎ-ಎನ್ಆರ್ಸಿ ಬಗ್ಗೆ ಪತ್ರಿಕೆಗಳೊಂದಿಗೆ ಮಾತನಾಡಿದ್ದಕ್ಕಾಗಿ ಬೆಂಗಳೂರಿನಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಮತ್ತು ಬಂಧಿಸಿದ್ದಾರೆ. ಭಾರತವು ಸರ್ವಾಧಿಕಾರಕ್ಕೆ ಇಳಿಯುತ್ತಿರುವ ಮೈಲಿಗಲ್ಲು ಇದಾಗಿದೆ ಎಂದು ಖ್ಯಾತ ಬರಹಗಾರರ ಶಿವಂ ವಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಚಿಕೆಗೆಟ್ಟ ಸರ್ಕಾರ ಒಕ್ಕೂಟದ ರಾಜಧಾನಿ ದೆಹಲಿಯ ಹೆಚ್ಚಿನ ಕಡೆಗಳಲ್ಲಿ ಮೊಬೈಲ್ ಸಂಪರ್ಕ ಸ್ಥಗಿತಗೊಳಿಸಿದೆ . ಲೋಕಪಾಲ್ ಚಳುವಳಿಯ ಸಮಯದಲ್ಲಿ ಹಿಂದಿನ ಸರಕಾರವೂ ಜನ ಸೇರಲು ಬಿಡದೆ ಇಂತದ್ದೊಂದು ಕ್ರಮಕ್ಕೆ ಮುಂದಾಗಬಹುದಿತ್ತು. ಆದರೆ ಮಾಡಿರಲಿಲ್ಲ ಯಾಕೆ? ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ಸರ್ಕಾರವೊಂದು ನಡೆದುಕೊಳ್ಳುವ ರೀತಿಯದು. ಬೆಂಗಳೂರಿನಲ್ಲಿ ನಿಷೇದಾಜ್ಞೆಯ ಹೊರತಾಗಿಯೂ ಪ್ರತಿಭಟನೆಗಳಾಗಿವೆ. ಎಲ್ಲೂ ಹಿಂಸಾಚಾರಕ್ಕೆ ತಿರುಗಿದ ಸುದ್ದಿ ಇದುವರೆಗೆ ಬಂದಿಲ್ಲ . ಈ ಮಧ್ಯೆ ಕರ್ನಾಟಕ ಹೈಕೋರ್ಟಿನಲ್ಲಿ ಸರ್ಕಾರದ ನಿಷೇದಾಜ್ಞೆ ಪ್ರಶ್ನಿಸಿ 40 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ನಾಳೆ ಅದು ವಿಚಾರಣೆಗೆ ಬರಲಿದೆ. ಅಲ್ಲಿಯ ತನಕ ನಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ. ಸರ್ಕಾರಕ್ಕೆ ನಾಳೆ ಕೋರ್ಟಿನಲ್ಲಿ ಕೊಡಲು ಹಿಂಸಾಚಾರದ ಕಾರಣ ಇಲ್ಲದಿರಲಿ ಎಂದು ಕುಂಟಾಡಿ ನಿತೇಶ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಬಿಜೆಪಿ ಅಡಿಯಲ್ಲಿ ಭಾರತ !!! ರಾಮಚಂದ್ರ ಗುಹಾ ಯಾರೆಂದು ನಿಮಗೆ ತಿಳಿದಿಲ್ಲ- ಅದನ್ನು ಮರೆತುಬಿಡಿ. ಆದರೆ ಅವರು ಗಾಂಧಿಯವರ ಆತ್ಮಚರಿತ್ರೆಯನ್ನು ವಿರೋಧಿಸುತ್ತಿದ್ದರು. ಗಾಂಧೀಜಿ ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ದಶಕಗಳಿಂದ ಪ್ರತಿಭಟಿಸಿದ ವ್ಯಕ್ತಿ ಎಂದು ವಿನ್ನೀತ್‌ ಕೊನ್ನಟ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...