Homeಕರ್ನಾಟಕಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

ಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

- Advertisement -
- Advertisement -

ಇಂದು ದೇಶಾದ್ಯಂತ ಪೌರತ್ವ ಕಾಯ್ದೆಯ ವಿರುದ್ಧ ಶಾಂತಿಯುವ ಪ್ರತಿಭಟನೆಗೆ ಪ್ರಗತಿಪರ ಸಂಘಟನೆಗಳು ಮತ್ತು ಎಡಪಕ್ಷಗಳು ಪ್ರತಿಭಟನೆಗೆ ಕರೆ ನೀಡಿದ್ದವರು. ಜನರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದರಿಂದ ಬೆದರಿದ ಸರ್ಕಾರಗಳು ಹಲವು ಬಿಜೆಪಿ ಆಡಳಿತವಿರುವಲ್ಲಿ ಪ್ರತಿಭಟನೆಗಳಿಗೆ ಅನುಮತಿ ರದ್ದುಪಡಿಸಿ 144 ಸೆಕ್ಷನ್‌ ಜಾರಿಗೊಳಿಸಿದ್ದಾರೆ.

ಆದರೆ ನಿಷೇದಾಜ್ಞೆಯನ್ನು ಧಿಕ್ಕರಿಸಿರುವ ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆಗೆ ದೇಶದೆಲ್ಲೆಡೆ ಮುಂದಾಗಿದ್ದಾರೆ. ಅದರಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ಪ್ರತಿಭಟನೆಗಳು ಇನ್ನು ನಡೆಯುತ್ತಲೇ ಇವೆ.

ಈ ನಡುವೆ ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಪ್ರಪಂಚದ ಖ್ಯಾತ ಇತಿಹಾಸಕಾರರಾದ ರಾಮಚಂದ್ರ ಗುಹರವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

ದುರಹಂಕಾರಿ ಆಳುವವರೇ, ಇಂತಹ ಚಿತ್ರಗಳು ನಿಮ್ಮ ವಿಶ್ವಗುರುವಿನ ಮರ್ಯಾದೆಯನ್ನು ಜಾಗತಿಕವಾಗಿ ಇನ್ನಷ್ಟು ಹರಾಜು ಹಾಕುತ್ತವೆ. ರಾಮಚಂದ್ರ ಗುಹಾ ಎಂದರೆ ಯಾರು ಎನ್ನುವುದು ನಿಮಗೆ ಗೊತ್ತೇ?

ಶಾಂತಿಯುತ ಪ್ರತಿಭಟನೆಗಳಿಗೂ ಸಹ ಅನುಮತಿ ಇಲ್ಲ. ಮೂಲಭೂತ ಹಕ್ಕುಗಳು ಭಾರತದಲ್ಲಿ ಜೋಕ್‌ಗಳಾಗಿವೆ ಎಂದು ಶ್ರೀನಿವಾಸ್‌ ಕಾರ್ಕಳರವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಭಾರತದ ಅಗ್ರಗಣ್ಯ ಸಾರ್ವಜನಿಕ ಬುದ್ಧಿಜೀವಿಗಳಲ್ಲಿ ಒಬ್ಬರಾದ ರಾಮಚಂದ್ರ ಗುಹಾ, ಗಾಂಧಿ ಮತ್ತು ಅಂಬೇಡ್ಕರ್‌ರವರ ಪೋಸ್ಟರ್ ಗಳನ್ನು ಎತ್ತಿ ಹಿಡಿದಿದ್ದಕ್ಕಾಗಿ ಮತ್ತು ಸಿಎಎ-ಎನ್ಆರ್ಸಿ ಬಗ್ಗೆ ಪತ್ರಿಕೆಗಳೊಂದಿಗೆ ಮಾತನಾಡಿದ್ದಕ್ಕಾಗಿ ಬೆಂಗಳೂರಿನಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಮತ್ತು ಬಂಧಿಸಿದ್ದಾರೆ. ಭಾರತವು ಸರ್ವಾಧಿಕಾರಕ್ಕೆ ಇಳಿಯುತ್ತಿರುವ ಮೈಲಿಗಲ್ಲು ಇದಾಗಿದೆ ಎಂದು ಖ್ಯಾತ ಬರಹಗಾರರ ಶಿವಂ ವಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಚಿಕೆಗೆಟ್ಟ ಸರ್ಕಾರ ಒಕ್ಕೂಟದ ರಾಜಧಾನಿ ದೆಹಲಿಯ ಹೆಚ್ಚಿನ ಕಡೆಗಳಲ್ಲಿ ಮೊಬೈಲ್ ಸಂಪರ್ಕ ಸ್ಥಗಿತಗೊಳಿಸಿದೆ . ಲೋಕಪಾಲ್ ಚಳುವಳಿಯ ಸಮಯದಲ್ಲಿ ಹಿಂದಿನ ಸರಕಾರವೂ ಜನ ಸೇರಲು ಬಿಡದೆ ಇಂತದ್ದೊಂದು ಕ್ರಮಕ್ಕೆ ಮುಂದಾಗಬಹುದಿತ್ತು. ಆದರೆ ಮಾಡಿರಲಿಲ್ಲ ಯಾಕೆ? ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ಸರ್ಕಾರವೊಂದು ನಡೆದುಕೊಳ್ಳುವ ರೀತಿಯದು. ಬೆಂಗಳೂರಿನಲ್ಲಿ ನಿಷೇದಾಜ್ಞೆಯ ಹೊರತಾಗಿಯೂ ಪ್ರತಿಭಟನೆಗಳಾಗಿವೆ. ಎಲ್ಲೂ ಹಿಂಸಾಚಾರಕ್ಕೆ ತಿರುಗಿದ ಸುದ್ದಿ ಇದುವರೆಗೆ ಬಂದಿಲ್ಲ . ಈ ಮಧ್ಯೆ ಕರ್ನಾಟಕ ಹೈಕೋರ್ಟಿನಲ್ಲಿ ಸರ್ಕಾರದ ನಿಷೇದಾಜ್ಞೆ ಪ್ರಶ್ನಿಸಿ 40 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ನಾಳೆ ಅದು ವಿಚಾರಣೆಗೆ ಬರಲಿದೆ. ಅಲ್ಲಿಯ ತನಕ ನಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ. ಸರ್ಕಾರಕ್ಕೆ ನಾಳೆ ಕೋರ್ಟಿನಲ್ಲಿ ಕೊಡಲು ಹಿಂಸಾಚಾರದ ಕಾರಣ ಇಲ್ಲದಿರಲಿ ಎಂದು ಕುಂಟಾಡಿ ನಿತೇಶ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಬಿಜೆಪಿ ಅಡಿಯಲ್ಲಿ ಭಾರತ !!! ರಾಮಚಂದ್ರ ಗುಹಾ ಯಾರೆಂದು ನಿಮಗೆ ತಿಳಿದಿಲ್ಲ- ಅದನ್ನು ಮರೆತುಬಿಡಿ. ಆದರೆ ಅವರು ಗಾಂಧಿಯವರ ಆತ್ಮಚರಿತ್ರೆಯನ್ನು ವಿರೋಧಿಸುತ್ತಿದ್ದರು. ಗಾಂಧೀಜಿ ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ದಶಕಗಳಿಂದ ಪ್ರತಿಭಟಿಸಿದ ವ್ಯಕ್ತಿ ಎಂದು ವಿನ್ನೀತ್‌ ಕೊನ್ನಟ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...