Homeಕರ್ನಾಟಕಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

ಶಾಂತಿಯುತ ಪ್ರತಿಭಟನಕಾರರ ಮೇಲೆ ಪೊಲೀಸ್‌ ದಾಳಿ, ಬಂಧನ ಖಂಡಿಸಿ ವ್ಯಾಪಕ ಪ್ರತಿರೋಧ

- Advertisement -
- Advertisement -

ಇಂದು ದೇಶಾದ್ಯಂತ ಪೌರತ್ವ ಕಾಯ್ದೆಯ ವಿರುದ್ಧ ಶಾಂತಿಯುವ ಪ್ರತಿಭಟನೆಗೆ ಪ್ರಗತಿಪರ ಸಂಘಟನೆಗಳು ಮತ್ತು ಎಡಪಕ್ಷಗಳು ಪ್ರತಿಭಟನೆಗೆ ಕರೆ ನೀಡಿದ್ದವರು. ಜನರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದರಿಂದ ಬೆದರಿದ ಸರ್ಕಾರಗಳು ಹಲವು ಬಿಜೆಪಿ ಆಡಳಿತವಿರುವಲ್ಲಿ ಪ್ರತಿಭಟನೆಗಳಿಗೆ ಅನುಮತಿ ರದ್ದುಪಡಿಸಿ 144 ಸೆಕ್ಷನ್‌ ಜಾರಿಗೊಳಿಸಿದ್ದಾರೆ.

ಆದರೆ ನಿಷೇದಾಜ್ಞೆಯನ್ನು ಧಿಕ್ಕರಿಸಿರುವ ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆಗೆ ದೇಶದೆಲ್ಲೆಡೆ ಮುಂದಾಗಿದ್ದಾರೆ. ಅದರಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ಪ್ರತಿಭಟನೆಗಳು ಇನ್ನು ನಡೆಯುತ್ತಲೇ ಇವೆ.

ಈ ನಡುವೆ ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಪ್ರಪಂಚದ ಖ್ಯಾತ ಇತಿಹಾಸಕಾರರಾದ ರಾಮಚಂದ್ರ ಗುಹರವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.

ದುರಹಂಕಾರಿ ಆಳುವವರೇ, ಇಂತಹ ಚಿತ್ರಗಳು ನಿಮ್ಮ ವಿಶ್ವಗುರುವಿನ ಮರ್ಯಾದೆಯನ್ನು ಜಾಗತಿಕವಾಗಿ ಇನ್ನಷ್ಟು ಹರಾಜು ಹಾಕುತ್ತವೆ. ರಾಮಚಂದ್ರ ಗುಹಾ ಎಂದರೆ ಯಾರು ಎನ್ನುವುದು ನಿಮಗೆ ಗೊತ್ತೇ?

ಶಾಂತಿಯುತ ಪ್ರತಿಭಟನೆಗಳಿಗೂ ಸಹ ಅನುಮತಿ ಇಲ್ಲ. ಮೂಲಭೂತ ಹಕ್ಕುಗಳು ಭಾರತದಲ್ಲಿ ಜೋಕ್‌ಗಳಾಗಿವೆ ಎಂದು ಶ್ರೀನಿವಾಸ್‌ ಕಾರ್ಕಳರವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಭಾರತದ ಅಗ್ರಗಣ್ಯ ಸಾರ್ವಜನಿಕ ಬುದ್ಧಿಜೀವಿಗಳಲ್ಲಿ ಒಬ್ಬರಾದ ರಾಮಚಂದ್ರ ಗುಹಾ, ಗಾಂಧಿ ಮತ್ತು ಅಂಬೇಡ್ಕರ್‌ರವರ ಪೋಸ್ಟರ್ ಗಳನ್ನು ಎತ್ತಿ ಹಿಡಿದಿದ್ದಕ್ಕಾಗಿ ಮತ್ತು ಸಿಎಎ-ಎನ್ಆರ್ಸಿ ಬಗ್ಗೆ ಪತ್ರಿಕೆಗಳೊಂದಿಗೆ ಮಾತನಾಡಿದ್ದಕ್ಕಾಗಿ ಬೆಂಗಳೂರಿನಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಮತ್ತು ಬಂಧಿಸಿದ್ದಾರೆ. ಭಾರತವು ಸರ್ವಾಧಿಕಾರಕ್ಕೆ ಇಳಿಯುತ್ತಿರುವ ಮೈಲಿಗಲ್ಲು ಇದಾಗಿದೆ ಎಂದು ಖ್ಯಾತ ಬರಹಗಾರರ ಶಿವಂ ವಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಚಿಕೆಗೆಟ್ಟ ಸರ್ಕಾರ ಒಕ್ಕೂಟದ ರಾಜಧಾನಿ ದೆಹಲಿಯ ಹೆಚ್ಚಿನ ಕಡೆಗಳಲ್ಲಿ ಮೊಬೈಲ್ ಸಂಪರ್ಕ ಸ್ಥಗಿತಗೊಳಿಸಿದೆ . ಲೋಕಪಾಲ್ ಚಳುವಳಿಯ ಸಮಯದಲ್ಲಿ ಹಿಂದಿನ ಸರಕಾರವೂ ಜನ ಸೇರಲು ಬಿಡದೆ ಇಂತದ್ದೊಂದು ಕ್ರಮಕ್ಕೆ ಮುಂದಾಗಬಹುದಿತ್ತು. ಆದರೆ ಮಾಡಿರಲಿಲ್ಲ ಯಾಕೆ? ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ಸರ್ಕಾರವೊಂದು ನಡೆದುಕೊಳ್ಳುವ ರೀತಿಯದು. ಬೆಂಗಳೂರಿನಲ್ಲಿ ನಿಷೇದಾಜ್ಞೆಯ ಹೊರತಾಗಿಯೂ ಪ್ರತಿಭಟನೆಗಳಾಗಿವೆ. ಎಲ್ಲೂ ಹಿಂಸಾಚಾರಕ್ಕೆ ತಿರುಗಿದ ಸುದ್ದಿ ಇದುವರೆಗೆ ಬಂದಿಲ್ಲ . ಈ ಮಧ್ಯೆ ಕರ್ನಾಟಕ ಹೈಕೋರ್ಟಿನಲ್ಲಿ ಸರ್ಕಾರದ ನಿಷೇದಾಜ್ಞೆ ಪ್ರಶ್ನಿಸಿ 40 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ನಾಳೆ ಅದು ವಿಚಾರಣೆಗೆ ಬರಲಿದೆ. ಅಲ್ಲಿಯ ತನಕ ನಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ. ಸರ್ಕಾರಕ್ಕೆ ನಾಳೆ ಕೋರ್ಟಿನಲ್ಲಿ ಕೊಡಲು ಹಿಂಸಾಚಾರದ ಕಾರಣ ಇಲ್ಲದಿರಲಿ ಎಂದು ಕುಂಟಾಡಿ ನಿತೇಶ್‌ ಅಭಿಪ್ರಾಯಪಟ್ಟಿದ್ದಾರೆ.

ಇದು ಬಿಜೆಪಿ ಅಡಿಯಲ್ಲಿ ಭಾರತ !!! ರಾಮಚಂದ್ರ ಗುಹಾ ಯಾರೆಂದು ನಿಮಗೆ ತಿಳಿದಿಲ್ಲ- ಅದನ್ನು ಮರೆತುಬಿಡಿ. ಆದರೆ ಅವರು ಗಾಂಧಿಯವರ ಆತ್ಮಚರಿತ್ರೆಯನ್ನು ವಿರೋಧಿಸುತ್ತಿದ್ದರು. ಗಾಂಧೀಜಿ ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ದಶಕಗಳಿಂದ ಪ್ರತಿಭಟಿಸಿದ ವ್ಯಕ್ತಿ ಎಂದು ವಿನ್ನೀತ್‌ ಕೊನ್ನಟ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...