Homeಮುಖಪುಟಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

ಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಫರ್ಹಾನ್ ಜುಬೇರಿ ಮತ್ತು ರವೀಶ್ ಅಲಿ ಖಾನ್ ಅವರನ್ನು ನಿನ್ನೆ ಬಂಧಿಸಲಾಗಿದೆ. ಆನಂತರ ರವೀಶ್‌ನನ್ನು ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ್ದರೆ, ಫರ್ಹಾನ್ ಅವರನ್ನು ಅಲಿಘರ್‌ನ ಜೈಲಿಗೆ ಕಳುಹಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಭಾರತವು ನಾಲ್ಕನೇ ಹಂತದ ಲಾಕ್‌ಡೌನ್ ಅನ್ನು ಎದುರಿಸುತ್ತಿರುವಾಗ ಹಲವಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಈ ಬಂಧನಗಳು ಸಹ ಜರುಗಿವೆ.

ಫರ್ಹಾನ್ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರೆ, ರವೀಶ್ ಪ್ರಸ್ತುತ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಫರ್ಹಾನ್ ಅವರ ವಿರುದ್ಧ ಸುಮಾರು 10-11 ಆರೋಪಗಳನ್ನು ಪೊಲೀಸರು ಹೊರಿಸಿದ್ದಾರೆ. ಫರ್ಹಾನ್ ಮತ್ತು ರವಿಶ್ ವೈಯಕ್ತಿಕ ಕೆಲಸಗಳಿಗಾಗಿ ಮದ್ರಾಕ್ ಬಳಿ ಕಾರಿನಲ್ಲಿ ಚಲಿಸುತ್ತಿದ್ದಾಗ, ನಾಗರಿಕರ ಬಟ್ಟೆಯಲ್ಲಿದ್ದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನಾವು ವೇಗವಾಗಿ ಕಾರು ಚಲಾಯಿಸುತ್ತಿದ್ದೆವು. ಪೊಲೀಸರು ನಮ್ಮ ಕಾರನ್ನು ನಿಲ್ಲಿಸಿ, ಬ್ಯಾರಿಕೇಡ್ ಅನ್ನು ನಮ್ಮ ಕಾರಿನ ಕಡೆಗೆ ಎಸೆದರು, ಅದು ಸೈಡ್ ವ್ಯೂ ಕನ್ನಡಿ ಬಿದ್ದು ನನ್ನ ಕೈಗೆ ಬಡಿಯಿತು. ನನಗೆ ಗಾಯಗಳಾಗಿವೆ ಆದರೆ ಗಂಭೀರವಾಗಿಲ್ಲ” ಎಂದು ರವಿಶ್ ದಿ ಕ್ವಿಂಟ್‌ಗೆ ತಿಳಿಸಿದ್ದಾರೆ.

ಫರ್ಹಾನ್ ವಿರುದ್ಧ ಪೊಲೀಸರು ಹಲವು ಆರೋಪಗಳನ್ನು ಹೊರಿಸಿದ್ದಾರೆ. ನನ್ನ ಮೇಲೆ ಯಾವುದೇ ಪ್ರಕರಣಗಳಿಗಲ್ಲ. ಆದರೂ ಸಹ ನನ್ನನ್ನು ಸುಮಾರು ಆರು ಗಂಟೆಗಳ ಕಾಲ ಬಂಧಿಸಿದ್ದರು ಎಂದು ರವೀಶ್‌ ತಿಳಿಸಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿಗೆ ಸಂಬಂಧಿಸಿದಂತೆ ಈ ಬಂಧನಗಳು ನಡೆಯುತ್ತಿರುವುದು ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.

ಫರ್ಹಾನ್ ವಿರುದ್ಧ ದೇಶದ್ರೋಹ, ಕೊಲೆ ಯತ್ನದ ಆರೋಪ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಫರ್ಹಾನ್ ಅವರು ವಿಶ್ವವಿದ್ಯಾಲಯದ ಸಮನ್ವಯ ಸಮಿತಿಯ ಸದಸ್ಯರಗಿದ್ದರು. ಅವರ ವಿರುದ್ಧದ ಆರೋಪಗಳ ಕೆಲವು ಐಪಿಸಿ ವಿಭಾಗಗಳು ಕೆಳಗಿನಂತಿವೆ.

188 – ಸಾರ್ವಜನಿಕ ಕೆಲಸಕ್ಕೆ ಅಡ್ಡಿ ಮತ್ತು ಅಸಹಕಾರ.
147 – ಗಲಭೆ ಪ್ರಯತ್ನ.
307 – ಕೊಲೆ ಯತ್ನ.
353 – ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಪರಾಧ.
504 – ಶಾಂತಿ ಉಲ್ಲಂಘಿಸುವ ಪ್ರಚೋದನೆ.
506 – ಕ್ರಿಮಿನಲ್ ಬೆದರಿಕೆ.
336 – ಜೀವಬೆದರಿಕೆ.
124 ಎ – ದೇಶದ್ರೋಹ.
153 ಎ – ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು.

ಕಳೆದ ವಾರವಷ್ಟೇ ಜೆಎನ್‌ಯೂ ವಿಶ್ವವಿದ್ಯಾನಿಲಯ ಪಿಂಜ್ರಾತೋಡ್‌ ಸಂಘಟನೆಯ ಕಾರ್ಯಕರ್ತರಾದ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಬಂಧಿಸಲಾಗಿತ್ತು. ನಾಲ್ಕು ದಿನಗಳಿಂದ ಅವರನ್ನು ಕಸ್ಟಡಿಯಲ್ಲಿಡಲಾಗಿದೆ.

ಮೇ 23 ರಂದು ಜಫರಾಬಾದ್ ಧರಣಿ ಪ್ರತಿಭಟನೆಯಲ್ಲಿ ಪಾತ್ರವಹಿಸಿದ್ದಕ್ಕಾಗಿ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಯಿತು ಮತ್ತು ಮರುದಿನ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಇಬ್ಬರು ಮಹಿಳೆಯರನ್ನು ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಮತ್ತೆ ಬಂಧಿಸಲಾಯಿತು.

ಅವರ ಮೇಲೆ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳು ಮತ್ತು ಸಾರ್ವಜನಿಕ ಆಸ್ತಿ ನಾಶವನ್ನು ತಡೆಗಟ್ಟುವ ಕಾಯ್ದೆಯಡಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಮತ್ತೆರೆಡು ದಿನ JNU ಕಾರ್ಯಕರ್ತೆಯರ ಪೊಲೀಸ್‌ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...