Homeಮುಖಪುಟಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

ಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಫರ್ಹಾನ್ ಜುಬೇರಿ ಮತ್ತು ರವೀಶ್ ಅಲಿ ಖಾನ್ ಅವರನ್ನು ನಿನ್ನೆ ಬಂಧಿಸಲಾಗಿದೆ. ಆನಂತರ ರವೀಶ್‌ನನ್ನು ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ್ದರೆ, ಫರ್ಹಾನ್ ಅವರನ್ನು ಅಲಿಘರ್‌ನ ಜೈಲಿಗೆ ಕಳುಹಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಭಾರತವು ನಾಲ್ಕನೇ ಹಂತದ ಲಾಕ್‌ಡೌನ್ ಅನ್ನು ಎದುರಿಸುತ್ತಿರುವಾಗ ಹಲವಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಈ ಬಂಧನಗಳು ಸಹ ಜರುಗಿವೆ.

ಫರ್ಹಾನ್ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರೆ, ರವೀಶ್ ಪ್ರಸ್ತುತ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಫರ್ಹಾನ್ ಅವರ ವಿರುದ್ಧ ಸುಮಾರು 10-11 ಆರೋಪಗಳನ್ನು ಪೊಲೀಸರು ಹೊರಿಸಿದ್ದಾರೆ. ಫರ್ಹಾನ್ ಮತ್ತು ರವಿಶ್ ವೈಯಕ್ತಿಕ ಕೆಲಸಗಳಿಗಾಗಿ ಮದ್ರಾಕ್ ಬಳಿ ಕಾರಿನಲ್ಲಿ ಚಲಿಸುತ್ತಿದ್ದಾಗ, ನಾಗರಿಕರ ಬಟ್ಟೆಯಲ್ಲಿದ್ದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನಾವು ವೇಗವಾಗಿ ಕಾರು ಚಲಾಯಿಸುತ್ತಿದ್ದೆವು. ಪೊಲೀಸರು ನಮ್ಮ ಕಾರನ್ನು ನಿಲ್ಲಿಸಿ, ಬ್ಯಾರಿಕೇಡ್ ಅನ್ನು ನಮ್ಮ ಕಾರಿನ ಕಡೆಗೆ ಎಸೆದರು, ಅದು ಸೈಡ್ ವ್ಯೂ ಕನ್ನಡಿ ಬಿದ್ದು ನನ್ನ ಕೈಗೆ ಬಡಿಯಿತು. ನನಗೆ ಗಾಯಗಳಾಗಿವೆ ಆದರೆ ಗಂಭೀರವಾಗಿಲ್ಲ” ಎಂದು ರವಿಶ್ ದಿ ಕ್ವಿಂಟ್‌ಗೆ ತಿಳಿಸಿದ್ದಾರೆ.

ಫರ್ಹಾನ್ ವಿರುದ್ಧ ಪೊಲೀಸರು ಹಲವು ಆರೋಪಗಳನ್ನು ಹೊರಿಸಿದ್ದಾರೆ. ನನ್ನ ಮೇಲೆ ಯಾವುದೇ ಪ್ರಕರಣಗಳಿಗಲ್ಲ. ಆದರೂ ಸಹ ನನ್ನನ್ನು ಸುಮಾರು ಆರು ಗಂಟೆಗಳ ಕಾಲ ಬಂಧಿಸಿದ್ದರು ಎಂದು ರವೀಶ್‌ ತಿಳಿಸಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿಗೆ ಸಂಬಂಧಿಸಿದಂತೆ ಈ ಬಂಧನಗಳು ನಡೆಯುತ್ತಿರುವುದು ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.

ಫರ್ಹಾನ್ ವಿರುದ್ಧ ದೇಶದ್ರೋಹ, ಕೊಲೆ ಯತ್ನದ ಆರೋಪ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಫರ್ಹಾನ್ ಅವರು ವಿಶ್ವವಿದ್ಯಾಲಯದ ಸಮನ್ವಯ ಸಮಿತಿಯ ಸದಸ್ಯರಗಿದ್ದರು. ಅವರ ವಿರುದ್ಧದ ಆರೋಪಗಳ ಕೆಲವು ಐಪಿಸಿ ವಿಭಾಗಗಳು ಕೆಳಗಿನಂತಿವೆ.

188 – ಸಾರ್ವಜನಿಕ ಕೆಲಸಕ್ಕೆ ಅಡ್ಡಿ ಮತ್ತು ಅಸಹಕಾರ.
147 – ಗಲಭೆ ಪ್ರಯತ್ನ.
307 – ಕೊಲೆ ಯತ್ನ.
353 – ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಪರಾಧ.
504 – ಶಾಂತಿ ಉಲ್ಲಂಘಿಸುವ ಪ್ರಚೋದನೆ.
506 – ಕ್ರಿಮಿನಲ್ ಬೆದರಿಕೆ.
336 – ಜೀವಬೆದರಿಕೆ.
124 ಎ – ದೇಶದ್ರೋಹ.
153 ಎ – ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು.

ಕಳೆದ ವಾರವಷ್ಟೇ ಜೆಎನ್‌ಯೂ ವಿಶ್ವವಿದ್ಯಾನಿಲಯ ಪಿಂಜ್ರಾತೋಡ್‌ ಸಂಘಟನೆಯ ಕಾರ್ಯಕರ್ತರಾದ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಬಂಧಿಸಲಾಗಿತ್ತು. ನಾಲ್ಕು ದಿನಗಳಿಂದ ಅವರನ್ನು ಕಸ್ಟಡಿಯಲ್ಲಿಡಲಾಗಿದೆ.

ಮೇ 23 ರಂದು ಜಫರಾಬಾದ್ ಧರಣಿ ಪ್ರತಿಭಟನೆಯಲ್ಲಿ ಪಾತ್ರವಹಿಸಿದ್ದಕ್ಕಾಗಿ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಯಿತು ಮತ್ತು ಮರುದಿನ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಇಬ್ಬರು ಮಹಿಳೆಯರನ್ನು ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಮತ್ತೆ ಬಂಧಿಸಲಾಯಿತು.

ಅವರ ಮೇಲೆ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳು ಮತ್ತು ಸಾರ್ವಜನಿಕ ಆಸ್ತಿ ನಾಶವನ್ನು ತಡೆಗಟ್ಟುವ ಕಾಯ್ದೆಯಡಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಮತ್ತೆರೆಡು ದಿನ JNU ಕಾರ್ಯಕರ್ತೆಯರ ಪೊಲೀಸ್‌ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...