Homeಮುಖಪುಟಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

ಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಫರ್ಹಾನ್ ಜುಬೇರಿ ಮತ್ತು ರವೀಶ್ ಅಲಿ ಖಾನ್ ಅವರನ್ನು ನಿನ್ನೆ ಬಂಧಿಸಲಾಗಿದೆ. ಆನಂತರ ರವೀಶ್‌ನನ್ನು ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ್ದರೆ, ಫರ್ಹಾನ್ ಅವರನ್ನು ಅಲಿಘರ್‌ನ ಜೈಲಿಗೆ ಕಳುಹಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಭಾರತವು ನಾಲ್ಕನೇ ಹಂತದ ಲಾಕ್‌ಡೌನ್ ಅನ್ನು ಎದುರಿಸುತ್ತಿರುವಾಗ ಹಲವಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಈ ಬಂಧನಗಳು ಸಹ ಜರುಗಿವೆ.

ಫರ್ಹಾನ್ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರೆ, ರವೀಶ್ ಪ್ರಸ್ತುತ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಫರ್ಹಾನ್ ಅವರ ವಿರುದ್ಧ ಸುಮಾರು 10-11 ಆರೋಪಗಳನ್ನು ಪೊಲೀಸರು ಹೊರಿಸಿದ್ದಾರೆ. ಫರ್ಹಾನ್ ಮತ್ತು ರವಿಶ್ ವೈಯಕ್ತಿಕ ಕೆಲಸಗಳಿಗಾಗಿ ಮದ್ರಾಕ್ ಬಳಿ ಕಾರಿನಲ್ಲಿ ಚಲಿಸುತ್ತಿದ್ದಾಗ, ನಾಗರಿಕರ ಬಟ್ಟೆಯಲ್ಲಿದ್ದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನಾವು ವೇಗವಾಗಿ ಕಾರು ಚಲಾಯಿಸುತ್ತಿದ್ದೆವು. ಪೊಲೀಸರು ನಮ್ಮ ಕಾರನ್ನು ನಿಲ್ಲಿಸಿ, ಬ್ಯಾರಿಕೇಡ್ ಅನ್ನು ನಮ್ಮ ಕಾರಿನ ಕಡೆಗೆ ಎಸೆದರು, ಅದು ಸೈಡ್ ವ್ಯೂ ಕನ್ನಡಿ ಬಿದ್ದು ನನ್ನ ಕೈಗೆ ಬಡಿಯಿತು. ನನಗೆ ಗಾಯಗಳಾಗಿವೆ ಆದರೆ ಗಂಭೀರವಾಗಿಲ್ಲ” ಎಂದು ರವಿಶ್ ದಿ ಕ್ವಿಂಟ್‌ಗೆ ತಿಳಿಸಿದ್ದಾರೆ.

ಫರ್ಹಾನ್ ವಿರುದ್ಧ ಪೊಲೀಸರು ಹಲವು ಆರೋಪಗಳನ್ನು ಹೊರಿಸಿದ್ದಾರೆ. ನನ್ನ ಮೇಲೆ ಯಾವುದೇ ಪ್ರಕರಣಗಳಿಗಲ್ಲ. ಆದರೂ ಸಹ ನನ್ನನ್ನು ಸುಮಾರು ಆರು ಗಂಟೆಗಳ ಕಾಲ ಬಂಧಿಸಿದ್ದರು ಎಂದು ರವೀಶ್‌ ತಿಳಿಸಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿಗೆ ಸಂಬಂಧಿಸಿದಂತೆ ಈ ಬಂಧನಗಳು ನಡೆಯುತ್ತಿರುವುದು ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.

ಫರ್ಹಾನ್ ವಿರುದ್ಧ ದೇಶದ್ರೋಹ, ಕೊಲೆ ಯತ್ನದ ಆರೋಪ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಫರ್ಹಾನ್ ಅವರು ವಿಶ್ವವಿದ್ಯಾಲಯದ ಸಮನ್ವಯ ಸಮಿತಿಯ ಸದಸ್ಯರಗಿದ್ದರು. ಅವರ ವಿರುದ್ಧದ ಆರೋಪಗಳ ಕೆಲವು ಐಪಿಸಿ ವಿಭಾಗಗಳು ಕೆಳಗಿನಂತಿವೆ.

188 – ಸಾರ್ವಜನಿಕ ಕೆಲಸಕ್ಕೆ ಅಡ್ಡಿ ಮತ್ತು ಅಸಹಕಾರ.
147 – ಗಲಭೆ ಪ್ರಯತ್ನ.
307 – ಕೊಲೆ ಯತ್ನ.
353 – ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಪರಾಧ.
504 – ಶಾಂತಿ ಉಲ್ಲಂಘಿಸುವ ಪ್ರಚೋದನೆ.
506 – ಕ್ರಿಮಿನಲ್ ಬೆದರಿಕೆ.
336 – ಜೀವಬೆದರಿಕೆ.
124 ಎ – ದೇಶದ್ರೋಹ.
153 ಎ – ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು.

ಕಳೆದ ವಾರವಷ್ಟೇ ಜೆಎನ್‌ಯೂ ವಿಶ್ವವಿದ್ಯಾನಿಲಯ ಪಿಂಜ್ರಾತೋಡ್‌ ಸಂಘಟನೆಯ ಕಾರ್ಯಕರ್ತರಾದ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಬಂಧಿಸಲಾಗಿತ್ತು. ನಾಲ್ಕು ದಿನಗಳಿಂದ ಅವರನ್ನು ಕಸ್ಟಡಿಯಲ್ಲಿಡಲಾಗಿದೆ.

ಮೇ 23 ರಂದು ಜಫರಾಬಾದ್ ಧರಣಿ ಪ್ರತಿಭಟನೆಯಲ್ಲಿ ಪಾತ್ರವಹಿಸಿದ್ದಕ್ಕಾಗಿ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಯಿತು ಮತ್ತು ಮರುದಿನ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಇಬ್ಬರು ಮಹಿಳೆಯರನ್ನು ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಮತ್ತೆ ಬಂಧಿಸಲಾಯಿತು.

ಅವರ ಮೇಲೆ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳು ಮತ್ತು ಸಾರ್ವಜನಿಕ ಆಸ್ತಿ ನಾಶವನ್ನು ತಡೆಗಟ್ಟುವ ಕಾಯ್ದೆಯಡಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಮತ್ತೆರೆಡು ದಿನ JNU ಕಾರ್ಯಕರ್ತೆಯರ ಪೊಲೀಸ್‌ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...