Homeಮುಖಪುಟಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

ಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಫರ್ಹಾನ್ ಜುಬೇರಿ ಮತ್ತು ರವೀಶ್ ಅಲಿ ಖಾನ್ ಅವರನ್ನು ನಿನ್ನೆ ಬಂಧಿಸಲಾಗಿದೆ. ಆನಂತರ ರವೀಶ್‌ನನ್ನು ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ್ದರೆ, ಫರ್ಹಾನ್ ಅವರನ್ನು ಅಲಿಘರ್‌ನ ಜೈಲಿಗೆ ಕಳುಹಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಭಾರತವು ನಾಲ್ಕನೇ ಹಂತದ ಲಾಕ್‌ಡೌನ್ ಅನ್ನು ಎದುರಿಸುತ್ತಿರುವಾಗ ಹಲವಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಈ ಬಂಧನಗಳು ಸಹ ಜರುಗಿವೆ.

ಫರ್ಹಾನ್ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರೆ, ರವೀಶ್ ಪ್ರಸ್ತುತ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಫರ್ಹಾನ್ ಅವರ ವಿರುದ್ಧ ಸುಮಾರು 10-11 ಆರೋಪಗಳನ್ನು ಪೊಲೀಸರು ಹೊರಿಸಿದ್ದಾರೆ. ಫರ್ಹಾನ್ ಮತ್ತು ರವಿಶ್ ವೈಯಕ್ತಿಕ ಕೆಲಸಗಳಿಗಾಗಿ ಮದ್ರಾಕ್ ಬಳಿ ಕಾರಿನಲ್ಲಿ ಚಲಿಸುತ್ತಿದ್ದಾಗ, ನಾಗರಿಕರ ಬಟ್ಟೆಯಲ್ಲಿದ್ದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನಾವು ವೇಗವಾಗಿ ಕಾರು ಚಲಾಯಿಸುತ್ತಿದ್ದೆವು. ಪೊಲೀಸರು ನಮ್ಮ ಕಾರನ್ನು ನಿಲ್ಲಿಸಿ, ಬ್ಯಾರಿಕೇಡ್ ಅನ್ನು ನಮ್ಮ ಕಾರಿನ ಕಡೆಗೆ ಎಸೆದರು, ಅದು ಸೈಡ್ ವ್ಯೂ ಕನ್ನಡಿ ಬಿದ್ದು ನನ್ನ ಕೈಗೆ ಬಡಿಯಿತು. ನನಗೆ ಗಾಯಗಳಾಗಿವೆ ಆದರೆ ಗಂಭೀರವಾಗಿಲ್ಲ” ಎಂದು ರವಿಶ್ ದಿ ಕ್ವಿಂಟ್‌ಗೆ ತಿಳಿಸಿದ್ದಾರೆ.

ಫರ್ಹಾನ್ ವಿರುದ್ಧ ಪೊಲೀಸರು ಹಲವು ಆರೋಪಗಳನ್ನು ಹೊರಿಸಿದ್ದಾರೆ. ನನ್ನ ಮೇಲೆ ಯಾವುದೇ ಪ್ರಕರಣಗಳಿಗಲ್ಲ. ಆದರೂ ಸಹ ನನ್ನನ್ನು ಸುಮಾರು ಆರು ಗಂಟೆಗಳ ಕಾಲ ಬಂಧಿಸಿದ್ದರು ಎಂದು ರವೀಶ್‌ ತಿಳಿಸಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿಗೆ ಸಂಬಂಧಿಸಿದಂತೆ ಈ ಬಂಧನಗಳು ನಡೆಯುತ್ತಿರುವುದು ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.

ಫರ್ಹಾನ್ ವಿರುದ್ಧ ದೇಶದ್ರೋಹ, ಕೊಲೆ ಯತ್ನದ ಆರೋಪ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಫರ್ಹಾನ್ ಅವರು ವಿಶ್ವವಿದ್ಯಾಲಯದ ಸಮನ್ವಯ ಸಮಿತಿಯ ಸದಸ್ಯರಗಿದ್ದರು. ಅವರ ವಿರುದ್ಧದ ಆರೋಪಗಳ ಕೆಲವು ಐಪಿಸಿ ವಿಭಾಗಗಳು ಕೆಳಗಿನಂತಿವೆ.

188 – ಸಾರ್ವಜನಿಕ ಕೆಲಸಕ್ಕೆ ಅಡ್ಡಿ ಮತ್ತು ಅಸಹಕಾರ.
147 – ಗಲಭೆ ಪ್ರಯತ್ನ.
307 – ಕೊಲೆ ಯತ್ನ.
353 – ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಪರಾಧ.
504 – ಶಾಂತಿ ಉಲ್ಲಂಘಿಸುವ ಪ್ರಚೋದನೆ.
506 – ಕ್ರಿಮಿನಲ್ ಬೆದರಿಕೆ.
336 – ಜೀವಬೆದರಿಕೆ.
124 ಎ – ದೇಶದ್ರೋಹ.
153 ಎ – ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು.

ಕಳೆದ ವಾರವಷ್ಟೇ ಜೆಎನ್‌ಯೂ ವಿಶ್ವವಿದ್ಯಾನಿಲಯ ಪಿಂಜ್ರಾತೋಡ್‌ ಸಂಘಟನೆಯ ಕಾರ್ಯಕರ್ತರಾದ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಬಂಧಿಸಲಾಗಿತ್ತು. ನಾಲ್ಕು ದಿನಗಳಿಂದ ಅವರನ್ನು ಕಸ್ಟಡಿಯಲ್ಲಿಡಲಾಗಿದೆ.

ಮೇ 23 ರಂದು ಜಫರಾಬಾದ್ ಧರಣಿ ಪ್ರತಿಭಟನೆಯಲ್ಲಿ ಪಾತ್ರವಹಿಸಿದ್ದಕ್ಕಾಗಿ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಯಿತು ಮತ್ತು ಮರುದಿನ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಇಬ್ಬರು ಮಹಿಳೆಯರನ್ನು ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಮತ್ತೆ ಬಂಧಿಸಲಾಯಿತು.

ಅವರ ಮೇಲೆ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳು ಮತ್ತು ಸಾರ್ವಜನಿಕ ಆಸ್ತಿ ನಾಶವನ್ನು ತಡೆಗಟ್ಟುವ ಕಾಯ್ದೆಯಡಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಮತ್ತೆರೆಡು ದಿನ JNU ಕಾರ್ಯಕರ್ತೆಯರ ಪೊಲೀಸ್‌ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...