Homeಮುಖಪುಟಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

ಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಫರ್ಹಾನ್ ಜುಬೇರಿ ಮತ್ತು ರವೀಶ್ ಅಲಿ ಖಾನ್ ಅವರನ್ನು ನಿನ್ನೆ ಬಂಧಿಸಲಾಗಿದೆ. ಆನಂತರ ರವೀಶ್‌ನನ್ನು ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ್ದರೆ, ಫರ್ಹಾನ್ ಅವರನ್ನು ಅಲಿಘರ್‌ನ ಜೈಲಿಗೆ ಕಳುಹಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಭಾರತವು ನಾಲ್ಕನೇ ಹಂತದ ಲಾಕ್‌ಡೌನ್ ಅನ್ನು ಎದುರಿಸುತ್ತಿರುವಾಗ ಹಲವಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಈ ಬಂಧನಗಳು ಸಹ ಜರುಗಿವೆ.

ಫರ್ಹಾನ್ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರೆ, ರವೀಶ್ ಪ್ರಸ್ತುತ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಫರ್ಹಾನ್ ಅವರ ವಿರುದ್ಧ ಸುಮಾರು 10-11 ಆರೋಪಗಳನ್ನು ಪೊಲೀಸರು ಹೊರಿಸಿದ್ದಾರೆ. ಫರ್ಹಾನ್ ಮತ್ತು ರವಿಶ್ ವೈಯಕ್ತಿಕ ಕೆಲಸಗಳಿಗಾಗಿ ಮದ್ರಾಕ್ ಬಳಿ ಕಾರಿನಲ್ಲಿ ಚಲಿಸುತ್ತಿದ್ದಾಗ, ನಾಗರಿಕರ ಬಟ್ಟೆಯಲ್ಲಿದ್ದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನಾವು ವೇಗವಾಗಿ ಕಾರು ಚಲಾಯಿಸುತ್ತಿದ್ದೆವು. ಪೊಲೀಸರು ನಮ್ಮ ಕಾರನ್ನು ನಿಲ್ಲಿಸಿ, ಬ್ಯಾರಿಕೇಡ್ ಅನ್ನು ನಮ್ಮ ಕಾರಿನ ಕಡೆಗೆ ಎಸೆದರು, ಅದು ಸೈಡ್ ವ್ಯೂ ಕನ್ನಡಿ ಬಿದ್ದು ನನ್ನ ಕೈಗೆ ಬಡಿಯಿತು. ನನಗೆ ಗಾಯಗಳಾಗಿವೆ ಆದರೆ ಗಂಭೀರವಾಗಿಲ್ಲ” ಎಂದು ರವಿಶ್ ದಿ ಕ್ವಿಂಟ್‌ಗೆ ತಿಳಿಸಿದ್ದಾರೆ.

ಫರ್ಹಾನ್ ವಿರುದ್ಧ ಪೊಲೀಸರು ಹಲವು ಆರೋಪಗಳನ್ನು ಹೊರಿಸಿದ್ದಾರೆ. ನನ್ನ ಮೇಲೆ ಯಾವುದೇ ಪ್ರಕರಣಗಳಿಗಲ್ಲ. ಆದರೂ ಸಹ ನನ್ನನ್ನು ಸುಮಾರು ಆರು ಗಂಟೆಗಳ ಕಾಲ ಬಂಧಿಸಿದ್ದರು ಎಂದು ರವೀಶ್‌ ತಿಳಿಸಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿಗೆ ಸಂಬಂಧಿಸಿದಂತೆ ಈ ಬಂಧನಗಳು ನಡೆಯುತ್ತಿರುವುದು ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.

ಫರ್ಹಾನ್ ವಿರುದ್ಧ ದೇಶದ್ರೋಹ, ಕೊಲೆ ಯತ್ನದ ಆರೋಪ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಫರ್ಹಾನ್ ಅವರು ವಿಶ್ವವಿದ್ಯಾಲಯದ ಸಮನ್ವಯ ಸಮಿತಿಯ ಸದಸ್ಯರಗಿದ್ದರು. ಅವರ ವಿರುದ್ಧದ ಆರೋಪಗಳ ಕೆಲವು ಐಪಿಸಿ ವಿಭಾಗಗಳು ಕೆಳಗಿನಂತಿವೆ.

188 – ಸಾರ್ವಜನಿಕ ಕೆಲಸಕ್ಕೆ ಅಡ್ಡಿ ಮತ್ತು ಅಸಹಕಾರ.
147 – ಗಲಭೆ ಪ್ರಯತ್ನ.
307 – ಕೊಲೆ ಯತ್ನ.
353 – ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಪರಾಧ.
504 – ಶಾಂತಿ ಉಲ್ಲಂಘಿಸುವ ಪ್ರಚೋದನೆ.
506 – ಕ್ರಿಮಿನಲ್ ಬೆದರಿಕೆ.
336 – ಜೀವಬೆದರಿಕೆ.
124 ಎ – ದೇಶದ್ರೋಹ.
153 ಎ – ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು.

ಕಳೆದ ವಾರವಷ್ಟೇ ಜೆಎನ್‌ಯೂ ವಿಶ್ವವಿದ್ಯಾನಿಲಯ ಪಿಂಜ್ರಾತೋಡ್‌ ಸಂಘಟನೆಯ ಕಾರ್ಯಕರ್ತರಾದ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಬಂಧಿಸಲಾಗಿತ್ತು. ನಾಲ್ಕು ದಿನಗಳಿಂದ ಅವರನ್ನು ಕಸ್ಟಡಿಯಲ್ಲಿಡಲಾಗಿದೆ.

ಮೇ 23 ರಂದು ಜಫರಾಬಾದ್ ಧರಣಿ ಪ್ರತಿಭಟನೆಯಲ್ಲಿ ಪಾತ್ರವಹಿಸಿದ್ದಕ್ಕಾಗಿ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಯಿತು ಮತ್ತು ಮರುದಿನ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಇಬ್ಬರು ಮಹಿಳೆಯರನ್ನು ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಮತ್ತೆ ಬಂಧಿಸಲಾಯಿತು.

ಅವರ ಮೇಲೆ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳು ಮತ್ತು ಸಾರ್ವಜನಿಕ ಆಸ್ತಿ ನಾಶವನ್ನು ತಡೆಗಟ್ಟುವ ಕಾಯ್ದೆಯಡಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಮತ್ತೆರೆಡು ದಿನ JNU ಕಾರ್ಯಕರ್ತೆಯರ ಪೊಲೀಸ್‌ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...